<p><strong>ನವದೆಹಲಿ</strong>: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿ ಪ್ರಮುಖ ಸಂಚುಕೋರನನ್ನು ಎನ್ಐಎ ಅಧಿಕಾರಿಗಳು ಶ್ರೀನಗರದಲ್ಲಿ ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ, ಈ ಘಟನೆ ಕುರಿತ ತನಿಖೆಯು ಮಹತ್ವದ ಘಟ್ಟ ತಲುಪಿದಂತಾಗಿದೆ. </p><p>ಅಮೀರ್ ರಶೀದ್ ಅಲಿ ಬಂಧಿತ. ಸ್ಫೋಟಗೊಂಡ ಕಾರು ಅಮೀರ್ ಹೆಸರಿನಲ್ಲಿ ನೋಂದಣಿಯಾಗಿತ್ತು. ಈತ ಜಮ್ಮು–ಕಾಶ್ಮೀರದ ಪಾಂಪೋರ್ನ ಸಂಬೂರಾ ನಿವಾಸಿ’ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಈ ಭಯೋತ್ಪಾದಕ ಕೃತ್ಯ ಎಸಗಲು ಅಮೀರ್, ಆತ್ಮಾಹುತಿ ಬಾಂಬರ್ ಡಾ.ಉಮರ್ ನಬಿ ಜೊತೆ ಸೇರಿ ಸಂಚು ರೂಪಿಸಿದ್ದ. ‘ಕಾರಿನಲ್ಲಿ ಒಯ್ದ ಕಚ್ಚಾ ಬಾಂಬ್’ ಬಳಸಿ ಸ್ಫೋಟಿಸುವ ಉದ್ದೇಶದಿಂದ ಕಾರು ಖರೀದಿಗೆ ನೆರವಾಗಲು ಈತ ಕಳೆದ ವರ್ಷ ದೆಹಲಿಗೆ ಬಂದಿದ್ದ’ ಎಂದಿದ್ದಾರೆ.</p><p>‘ಡಾ.ಉಮರ್ ನಬಿ,ಅಮೀರ್ ಅಲಿ ಕಳೆದ ಕೆಲ ತಿಂಗಳಿನಿಂದ ಸಂಪರ್ಕದಲ್ಲಿದ್ದರು. ನ.10ರಂದು ನಡೆಸಿದ ದಾಳಿಗಾಗಿ ಸ್ಫೋಟಕ ಸಿದ್ಧಪಡಿಸುವಲ್ಲಿ ನಿರತರಾಗಿದ್ದರು’ ಎನ್ಐಎ ಶಂಕಿಸಿದೆ.</p><p>ಇದೇ ಮೊದಲ ಬಾರಿಗೆ ಎನ್ಐಎ, ಡಾ.ಉಮರ್ ನಬಿಯನ್ನು ‘ಆತ್ಮಾಹುತಿ ಬಾಂಬರ್’ ಎಂದು ಕರೆದಿದೆ. ಸ್ಫೋಟಕಕ್ಕೆ ‘ಕಾರಿನಲ್ಲಿ ಒಯ್ದ ಕಚ್ಚಾ ಬಾಂಬ್’(ಐಇಡಿ) ಎಂಬ ಪದವನ್ನು ಸಹ ಮೊದಲ ಬಾರಿಗೆ ಬಳಸಿದೆ.</p>.Delhi Bast | 9 ಎಂಎಂ ಗುಂಡುಗಳು ಪತ್ತೆ: ಶಂಕಿತನಿಗೆ ಸೇರಿರುವ ಸಾಧ್ಯತೆ.Delhi Red Fort Blast: ದೆಹಲಿ ಸ್ಫೋಟದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿ ಪ್ರಮುಖ ಸಂಚುಕೋರನನ್ನು ಎನ್ಐಎ ಅಧಿಕಾರಿಗಳು ಶ್ರೀನಗರದಲ್ಲಿ ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ, ಈ ಘಟನೆ ಕುರಿತ ತನಿಖೆಯು ಮಹತ್ವದ ಘಟ್ಟ ತಲುಪಿದಂತಾಗಿದೆ. </p><p>ಅಮೀರ್ ರಶೀದ್ ಅಲಿ ಬಂಧಿತ. ಸ್ಫೋಟಗೊಂಡ ಕಾರು ಅಮೀರ್ ಹೆಸರಿನಲ್ಲಿ ನೋಂದಣಿಯಾಗಿತ್ತು. ಈತ ಜಮ್ಮು–ಕಾಶ್ಮೀರದ ಪಾಂಪೋರ್ನ ಸಂಬೂರಾ ನಿವಾಸಿ’ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಈ ಭಯೋತ್ಪಾದಕ ಕೃತ್ಯ ಎಸಗಲು ಅಮೀರ್, ಆತ್ಮಾಹುತಿ ಬಾಂಬರ್ ಡಾ.ಉಮರ್ ನಬಿ ಜೊತೆ ಸೇರಿ ಸಂಚು ರೂಪಿಸಿದ್ದ. ‘ಕಾರಿನಲ್ಲಿ ಒಯ್ದ ಕಚ್ಚಾ ಬಾಂಬ್’ ಬಳಸಿ ಸ್ಫೋಟಿಸುವ ಉದ್ದೇಶದಿಂದ ಕಾರು ಖರೀದಿಗೆ ನೆರವಾಗಲು ಈತ ಕಳೆದ ವರ್ಷ ದೆಹಲಿಗೆ ಬಂದಿದ್ದ’ ಎಂದಿದ್ದಾರೆ.</p><p>‘ಡಾ.ಉಮರ್ ನಬಿ,ಅಮೀರ್ ಅಲಿ ಕಳೆದ ಕೆಲ ತಿಂಗಳಿನಿಂದ ಸಂಪರ್ಕದಲ್ಲಿದ್ದರು. ನ.10ರಂದು ನಡೆಸಿದ ದಾಳಿಗಾಗಿ ಸ್ಫೋಟಕ ಸಿದ್ಧಪಡಿಸುವಲ್ಲಿ ನಿರತರಾಗಿದ್ದರು’ ಎನ್ಐಎ ಶಂಕಿಸಿದೆ.</p><p>ಇದೇ ಮೊದಲ ಬಾರಿಗೆ ಎನ್ಐಎ, ಡಾ.ಉಮರ್ ನಬಿಯನ್ನು ‘ಆತ್ಮಾಹುತಿ ಬಾಂಬರ್’ ಎಂದು ಕರೆದಿದೆ. ಸ್ಫೋಟಕಕ್ಕೆ ‘ಕಾರಿನಲ್ಲಿ ಒಯ್ದ ಕಚ್ಚಾ ಬಾಂಬ್’(ಐಇಡಿ) ಎಂಬ ಪದವನ್ನು ಸಹ ಮೊದಲ ಬಾರಿಗೆ ಬಳಸಿದೆ.</p>.Delhi Bast | 9 ಎಂಎಂ ಗುಂಡುಗಳು ಪತ್ತೆ: ಶಂಕಿತನಿಗೆ ಸೇರಿರುವ ಸಾಧ್ಯತೆ.Delhi Red Fort Blast: ದೆಹಲಿ ಸ್ಫೋಟದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>