<p><strong>ನವದೆಹಲಿ:</strong> ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರ ವಿರುದ್ಧ ದೆಹಲಿ ಮಾಜಿ ಸಚಿವ, ಎಎಪಿ ನಾಯಕ ಸತ್ಯೇಂದ್ರ ಜೈನ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ನ್ಯಾಯಾಲಯವು ಇಂದು (ಗುರುವಾರ) ವಜಾಗೊಳಿಸಿದೆ.</p><p>ಫೆಬ್ರುವರಿ 14ರಂದು ಪ್ರಕರಣದ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿದ್ದರು. </p><p>ಸತ್ಯೇಂದ್ರ ಜೈನ್ ನಿವಾಸದಲ್ಲಿ ₹3 ಕೋಟಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ ಎಂದು 2023ರಲ್ಲಿ ಬಾನ್ಸುರಿ ಸ್ವರಾಜ್ ಆರೋಪಿಸಿದ್ದರು. </p><p>ಈ ಎಲ್ಲಾ ಬೆಳವಣಿಗೆಗಳ ನಡುವೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದರ್ ಜೈನ್ ಅವರ ವಿಚಾರಣೆ ನಡೆಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮತಿ ನೀಡಿದ್ದಾರೆ.</p><p>ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 218ರ ಅಡಿಯಲ್ಲಿ ಅನುಮತಿ ಕೇಳಲಾಗಿತ್ತು.</p><p>‘ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಯ ಅಂಶಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದಲ್ಲಿ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರಪತಿ ಅವರಿಗೆ ಮನವಿ ಮಾಡಿತ್ತು’ ಎಂದು ಮೂಲಗಳು ತಿಳಿಸಿವೆ.</p><p>ಪ್ರಕರಣಕ್ಕೆ ಸಂಬಂಧಿಸಿ ಸತ್ಯೇಂದರ್ ಜೈನ್ ಅವರನ್ನು 2022ರ ಮೇ ನಲ್ಲಿ ಇ.ಡಿ ಬಂಧಿಸಿತ್ತು. ಸದ್ಯ ಜಾಮೀನಿನ ಅವರು ಮೇಲೆ ಹೊರಗಿದ್ದಾರೆ. ಅವರ ವಿರುದ್ಧದ ದೋಷಾರೋಪ ಪಟ್ಟಿಯನ್ನು ಇ.ಡಿ ನ್ಯಾಯಾಲಯಕ್ಕೆ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರ ವಿರುದ್ಧ ದೆಹಲಿ ಮಾಜಿ ಸಚಿವ, ಎಎಪಿ ನಾಯಕ ಸತ್ಯೇಂದ್ರ ಜೈನ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ನ್ಯಾಯಾಲಯವು ಇಂದು (ಗುರುವಾರ) ವಜಾಗೊಳಿಸಿದೆ.</p><p>ಫೆಬ್ರುವರಿ 14ರಂದು ಪ್ರಕರಣದ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿದ್ದರು. </p><p>ಸತ್ಯೇಂದ್ರ ಜೈನ್ ನಿವಾಸದಲ್ಲಿ ₹3 ಕೋಟಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ ಎಂದು 2023ರಲ್ಲಿ ಬಾನ್ಸುರಿ ಸ್ವರಾಜ್ ಆರೋಪಿಸಿದ್ದರು. </p><p>ಈ ಎಲ್ಲಾ ಬೆಳವಣಿಗೆಗಳ ನಡುವೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದರ್ ಜೈನ್ ಅವರ ವಿಚಾರಣೆ ನಡೆಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮತಿ ನೀಡಿದ್ದಾರೆ.</p><p>ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 218ರ ಅಡಿಯಲ್ಲಿ ಅನುಮತಿ ಕೇಳಲಾಗಿತ್ತು.</p><p>‘ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಯ ಅಂಶಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದಲ್ಲಿ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರಪತಿ ಅವರಿಗೆ ಮನವಿ ಮಾಡಿತ್ತು’ ಎಂದು ಮೂಲಗಳು ತಿಳಿಸಿವೆ.</p><p>ಪ್ರಕರಣಕ್ಕೆ ಸಂಬಂಧಿಸಿ ಸತ್ಯೇಂದರ್ ಜೈನ್ ಅವರನ್ನು 2022ರ ಮೇ ನಲ್ಲಿ ಇ.ಡಿ ಬಂಧಿಸಿತ್ತು. ಸದ್ಯ ಜಾಮೀನಿನ ಅವರು ಮೇಲೆ ಹೊರಗಿದ್ದಾರೆ. ಅವರ ವಿರುದ್ಧದ ದೋಷಾರೋಪ ಪಟ್ಟಿಯನ್ನು ಇ.ಡಿ ನ್ಯಾಯಾಲಯಕ್ಕೆ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>