<p><strong>ನವದೆಹಲಿ:</strong> ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ವಿರುದ್ಧ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ದೆಹಲಿ ಕೋರ್ಟ್ ವಜಾ ಮಾಡಿದೆ. </p><p>ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಕೋರ್ಟ್ನ ನ್ಯಾಯಾಧೀಶರಾದ ಪಾರಸ್ ದಲಾಲ್, ಅವರು ‘ಮಾನಹಾನಿ ಅಂಶ ಕಾಣುತ್ತಿಲ್ಲ’ ಎಂದು ತಿಳಿಸಿ, ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಲು ನಿರಾಕರಿಸಿದರು.</p><p>‘2024ರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಿದ್ದಾರೆ’ ಎಂದು ಶಶಿ ತರೂರ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ’ ಎಂದು ರಾಜೀವ್ ಚಂದ್ರಶೇಖರ್ ಮೊಕದ್ದಮೆ ಹೂಡಿದ್ದರು.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರು ಹಾಳುಮಾಡಿದ್ದಕ್ಕಾಗಿ ತಮಗೆ ತರೂರ್ ಅವರು ₹10 ಕೋಟಿ ಪರಿಹಾರ ಕೊಡಬೇಕು ಎಂದು ರಾಜೀವ್ ಕೋರಿದ್ದು, ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿ ದೆಹಲಿ ಹೈಕೋರ್ಟ್ ಸೋಮವಾರ ಆದೇಶಿಸಿತ್ತು. ಅಲ್ಲದೆ ಏಪ್ರಿಲ್ 28ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ ಎಂದು ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ತಿಳಿಸಿದ್ದರು.</p>.ಶಶಿ ತರೂರ್ ವಿರುದ್ಧ ಚಂದ್ರಶೇಖರ್ ಮಾನಹಾನಿ ಪ್ರಕರಣ: ದೆಹಲಿ ಹೈಕೋರ್ಟ್ ಸಮನ್ಸ್.ರಕ್ಷಣಾ ಇಲಾಖೆಗೆ ಹೆಚ್ಚಿನ ಅನುದಾನ: ಕೇಂದ್ರದ ನಿರ್ಧಾರಕ್ಕೆ ಶಶಿ ತರೂರ್ ಬಹುಪರಾಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ವಿರುದ್ಧ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ದೆಹಲಿ ಕೋರ್ಟ್ ವಜಾ ಮಾಡಿದೆ. </p><p>ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಕೋರ್ಟ್ನ ನ್ಯಾಯಾಧೀಶರಾದ ಪಾರಸ್ ದಲಾಲ್, ಅವರು ‘ಮಾನಹಾನಿ ಅಂಶ ಕಾಣುತ್ತಿಲ್ಲ’ ಎಂದು ತಿಳಿಸಿ, ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಲು ನಿರಾಕರಿಸಿದರು.</p><p>‘2024ರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಿದ್ದಾರೆ’ ಎಂದು ಶಶಿ ತರೂರ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ’ ಎಂದು ರಾಜೀವ್ ಚಂದ್ರಶೇಖರ್ ಮೊಕದ್ದಮೆ ಹೂಡಿದ್ದರು.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರು ಹಾಳುಮಾಡಿದ್ದಕ್ಕಾಗಿ ತಮಗೆ ತರೂರ್ ಅವರು ₹10 ಕೋಟಿ ಪರಿಹಾರ ಕೊಡಬೇಕು ಎಂದು ರಾಜೀವ್ ಕೋರಿದ್ದು, ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿ ದೆಹಲಿ ಹೈಕೋರ್ಟ್ ಸೋಮವಾರ ಆದೇಶಿಸಿತ್ತು. ಅಲ್ಲದೆ ಏಪ್ರಿಲ್ 28ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ ಎಂದು ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ತಿಳಿಸಿದ್ದರು.</p>.ಶಶಿ ತರೂರ್ ವಿರುದ್ಧ ಚಂದ್ರಶೇಖರ್ ಮಾನಹಾನಿ ಪ್ರಕರಣ: ದೆಹಲಿ ಹೈಕೋರ್ಟ್ ಸಮನ್ಸ್.ರಕ್ಷಣಾ ಇಲಾಖೆಗೆ ಹೆಚ್ಚಿನ ಅನುದಾನ: ಕೇಂದ್ರದ ನಿರ್ಧಾರಕ್ಕೆ ಶಶಿ ತರೂರ್ ಬಹುಪರಾಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>