<p><strong>ನವದೆಹಲಿ:</strong> ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಮತ್ತೆ ಸರ್ಕಾರ ರಚಿಸಿದರೆ, ಆದ್ಯತೆಯ ಆಧಾರದ ಮೇಲೆ ದೆಹಲಿಯ ಒಳಚರಂಡಿ ಸಂಬಂಧಿತ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.</p><p>ಈ ಬಗ್ಗೆ ಶನಿವಾರ ಅವರು ವಿಡಿಯೊ ಸಂದೇಶವನ್ನು ಅವರು ಬಿಡುಗಡೆ ಮಾಡಿದ್ದಾರೆ.</p>.ಕೇಜ್ರಿವಾಲ್ ಕೊಲ್ಲಲು ಕೇಂದ್ರ, ದೆಹಲಿ ಪೊಲೀಸ್ ಸಂಚು: ಎಎಪಿ ಆರೋಪ.<p>ನಗರದ ಅನಧಿಕೃತ ಕಾಲೋನಿಗಳಲ್ಲಿ ತಮ್ಮ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ವಿಡಿಯೊ ಸಂದೇಶದಲ್ಲಿ ಎತ್ತಿ ತೋರಿಸಿದ್ದಾರೆ. ಈ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಹೇಳಿದ್ದಾರೆ.</p><p>‘ನಾವು ದೆಹಲಿಯಲ್ಲಿ ಸರ್ಕಾರ ರಚಿಸಿದಾಗ ಅನಧಿಕೃತ ಕಾಲೋನಿಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿರಲಿಲ್ಲ. ಈ ಕಾಲೋನಿಗಳ ಅಭಿವೃದ್ಧಿಗೆ ಯಾವುದೇ ಸರ್ಕಾರಗಳು ಕೆಲಸ ಮಾಡಲಿಲ್ಲ. ನಾವು ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಿದ್ದೇವೆ. ಇಂದು ಅಂತಹ ಬಹುತೇಕ ಎಲ್ಲಾ ಕಾಲೋನಿಗಳಲ್ಲಿ ಒಳಚರಂಡಿ ಪೈಪ್ಲೈನ್ ಮತ್ತು ಇತರ ಸೌಲಭ್ಯಗಳನ್ನು ಹೊಂದಿವೆ’ ಎಂದು ಅವರು ಹೇಳಿದರು.</p>.ದೆಹಲಿ: ಕೇಜ್ರಿವಾಲ್ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಪರ್ವೇಶ್.<p>ನಗರದ ಹಲವಾರು ಪ್ರದೇಶಗಳು ಕೊಳಚೆ ನೀರು, ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವುದನ್ನೂ ಇದೇ ವೇಳೆ ಅವರು ಒಪ್ಪಿಕೊಂಡಿದ್ದಾರೆ.</p><p>‘ಎಎಪಿ ಸರ್ಕಾರವನ್ನು ರಚಿಸಿದರೆ, ನಗರದಾದ್ಯಂತ ಎಲ್ಲಾ ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಯುದ್ಧೋಪಾದಿಯಲ್ಲಿ ಪರಿಹರಿಸಲು ನಾನು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದರು.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8 ರಂದು ಮತ ಎಣಿಕೆ ನಡೆಯಲಿದೆ.</p> .ಮಡಿವಾಳರಿಗೆ 7 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಮತ್ತೆ ಸರ್ಕಾರ ರಚಿಸಿದರೆ, ಆದ್ಯತೆಯ ಆಧಾರದ ಮೇಲೆ ದೆಹಲಿಯ ಒಳಚರಂಡಿ ಸಂಬಂಧಿತ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.</p><p>ಈ ಬಗ್ಗೆ ಶನಿವಾರ ಅವರು ವಿಡಿಯೊ ಸಂದೇಶವನ್ನು ಅವರು ಬಿಡುಗಡೆ ಮಾಡಿದ್ದಾರೆ.</p>.ಕೇಜ್ರಿವಾಲ್ ಕೊಲ್ಲಲು ಕೇಂದ್ರ, ದೆಹಲಿ ಪೊಲೀಸ್ ಸಂಚು: ಎಎಪಿ ಆರೋಪ.<p>ನಗರದ ಅನಧಿಕೃತ ಕಾಲೋನಿಗಳಲ್ಲಿ ತಮ್ಮ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ವಿಡಿಯೊ ಸಂದೇಶದಲ್ಲಿ ಎತ್ತಿ ತೋರಿಸಿದ್ದಾರೆ. ಈ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಹೇಳಿದ್ದಾರೆ.</p><p>‘ನಾವು ದೆಹಲಿಯಲ್ಲಿ ಸರ್ಕಾರ ರಚಿಸಿದಾಗ ಅನಧಿಕೃತ ಕಾಲೋನಿಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿರಲಿಲ್ಲ. ಈ ಕಾಲೋನಿಗಳ ಅಭಿವೃದ್ಧಿಗೆ ಯಾವುದೇ ಸರ್ಕಾರಗಳು ಕೆಲಸ ಮಾಡಲಿಲ್ಲ. ನಾವು ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಿದ್ದೇವೆ. ಇಂದು ಅಂತಹ ಬಹುತೇಕ ಎಲ್ಲಾ ಕಾಲೋನಿಗಳಲ್ಲಿ ಒಳಚರಂಡಿ ಪೈಪ್ಲೈನ್ ಮತ್ತು ಇತರ ಸೌಲಭ್ಯಗಳನ್ನು ಹೊಂದಿವೆ’ ಎಂದು ಅವರು ಹೇಳಿದರು.</p>.ದೆಹಲಿ: ಕೇಜ್ರಿವಾಲ್ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಪರ್ವೇಶ್.<p>ನಗರದ ಹಲವಾರು ಪ್ರದೇಶಗಳು ಕೊಳಚೆ ನೀರು, ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವುದನ್ನೂ ಇದೇ ವೇಳೆ ಅವರು ಒಪ್ಪಿಕೊಂಡಿದ್ದಾರೆ.</p><p>‘ಎಎಪಿ ಸರ್ಕಾರವನ್ನು ರಚಿಸಿದರೆ, ನಗರದಾದ್ಯಂತ ಎಲ್ಲಾ ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಯುದ್ಧೋಪಾದಿಯಲ್ಲಿ ಪರಿಹರಿಸಲು ನಾನು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದರು.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8 ರಂದು ಮತ ಎಣಿಕೆ ನಡೆಯಲಿದೆ.</p> .ಮಡಿವಾಳರಿಗೆ 7 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>