<p><strong>ನವದೆಹಲಿ:</strong> ದೆಹಲಿ ಚುನಾವಣೆಗೂ ಮುನ್ನ ಭಾರಿ ಪ್ರಮಾಣದಲ್ಲಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ದೂರಿದ್ದಾರೆ.</p><p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಹ್ದಾರ, ಜನಕಪುರಿ, ಲಕ್ಷ್ಮೀ ನಗರ ಹಾಗೂ ಇನ್ನಿತರ ಪ್ರದೇಶಗಳ ಮತದಾರರ ಪಟ್ಟಿಯಿಂದ ಸಾವಿರಾರು ಮಂದಿಯ ಹೆಸರನ್ನು ತೆಗೆದು ಹಾಕಲು ಬಿಜೆಪಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ ಎಂದು ಅವರು ಹೇಳಿದ್ದಾರೆ.</p>.ದೆಹಲಿಯಲ್ಲಿ ಕಾನೂನು ಕಾಪಾಡಲಾಗದಿದ್ದರೆ ರಾಜೀನಾಮೆ ನೀಡಿ: ಅಮಿತ್ ಶಾಗೆ ಕೇಜ್ರಿವಾಲ್.<p>‘ಶಾಹ್ದಾರ ಪ್ರದೇಶದ 11,118 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಬಿಜೆಪಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಈ ಪೈಕಿ 500 ಅರ್ಜಿಗಳಲ್ಲಿ ನಮೂದು ಮಾಡಲಾಗಿರುವ ಹೆಸರನ್ನು ಪರಿಶೀಲಿಸಿದಾಗ ಶೇ 75ರಷ್ಟು ಮಂದಿ ಬದುಕಿರುವುದು ಬೆಳಕಿಗೆ ಬಂದಿದೆ. ಆದರೆ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಸಾಧ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.</p><p>‘ಕಳೆದ ಚುನಾವಣೆಯಲ್ಲಿ ಶಾಹ್ದಾರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯು 5 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈಗ ಸುಮಾರು 11 ಸಾವಿರ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುತ್ತಿದೆ. ಈ ಪೈಕಿ ಬಹುತೇಕ ಎಎಪಿಯ ಮತಗಳು’ ಎಂದು ಅವರು ಹೇಳಿದ್ದಾರೆ.</p><p>ಪಾರದರ್ಶಕತೆಯ ದೃಷ್ಠಿಯಿಂದ ಆ ಎಲ್ಲಾ ಅರ್ಜಿಗಳನ್ನು ಸಂಜೆಯೊಳಗೆ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಕೇಜ್ರಿವಾಲ್ ಚುನಾವಣಾ ಆಯೋಗವನ್ನು ಕೋರಿದ್ದಾರೆ.</p>.ಕೇಜ್ರಿವಾಲ್ ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಚುನಾವಣೆಗೂ ಮುನ್ನ ಭಾರಿ ಪ್ರಮಾಣದಲ್ಲಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ದೂರಿದ್ದಾರೆ.</p><p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಹ್ದಾರ, ಜನಕಪುರಿ, ಲಕ್ಷ್ಮೀ ನಗರ ಹಾಗೂ ಇನ್ನಿತರ ಪ್ರದೇಶಗಳ ಮತದಾರರ ಪಟ್ಟಿಯಿಂದ ಸಾವಿರಾರು ಮಂದಿಯ ಹೆಸರನ್ನು ತೆಗೆದು ಹಾಕಲು ಬಿಜೆಪಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ ಎಂದು ಅವರು ಹೇಳಿದ್ದಾರೆ.</p>.ದೆಹಲಿಯಲ್ಲಿ ಕಾನೂನು ಕಾಪಾಡಲಾಗದಿದ್ದರೆ ರಾಜೀನಾಮೆ ನೀಡಿ: ಅಮಿತ್ ಶಾಗೆ ಕೇಜ್ರಿವಾಲ್.<p>‘ಶಾಹ್ದಾರ ಪ್ರದೇಶದ 11,118 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಬಿಜೆಪಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಈ ಪೈಕಿ 500 ಅರ್ಜಿಗಳಲ್ಲಿ ನಮೂದು ಮಾಡಲಾಗಿರುವ ಹೆಸರನ್ನು ಪರಿಶೀಲಿಸಿದಾಗ ಶೇ 75ರಷ್ಟು ಮಂದಿ ಬದುಕಿರುವುದು ಬೆಳಕಿಗೆ ಬಂದಿದೆ. ಆದರೆ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಸಾಧ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.</p><p>‘ಕಳೆದ ಚುನಾವಣೆಯಲ್ಲಿ ಶಾಹ್ದಾರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯು 5 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈಗ ಸುಮಾರು 11 ಸಾವಿರ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುತ್ತಿದೆ. ಈ ಪೈಕಿ ಬಹುತೇಕ ಎಎಪಿಯ ಮತಗಳು’ ಎಂದು ಅವರು ಹೇಳಿದ್ದಾರೆ.</p><p>ಪಾರದರ್ಶಕತೆಯ ದೃಷ್ಠಿಯಿಂದ ಆ ಎಲ್ಲಾ ಅರ್ಜಿಗಳನ್ನು ಸಂಜೆಯೊಳಗೆ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಕೇಜ್ರಿವಾಲ್ ಚುನಾವಣಾ ಆಯೋಗವನ್ನು ಕೋರಿದ್ದಾರೆ.</p>.ಕೇಜ್ರಿವಾಲ್ ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>