‘ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗುವ ಮೇಲ್ಮನವಿಯು ಸಾರ್ವಜನಿಕ ದಾಖಲೆ ಎನಿಸುತ್ತದೆ. ಹೀಗಾಗಿ, ಪಟ್ನಾ, ರಾಂಚಿ ಸೇರಿದಂತೆ ಬೇರಾವುದೇ ಕೋರ್ಟ್ನಲ್ಲಿ ವಾದ ಮಂಡಿಸುವ ವೇಳೆ, ರಾಹುಲ್ ವಿರೋಧಿಗಳು ಈ ಮೇಲ್ಮನವಿಯನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಯಾವುದೇ ತಪ್ಪುಗಳು ಇಲ್ಲದಂತಹ ಮೇಲ್ಮನವಿಯನ್ನು ಸಿದ್ಧಪಡಿಸಲು ವಕೀಲರ ತಂಡವು ಮುಂದಾಗಿದೆ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡರೊಬ್ಬರು ಹೇಳಿದರು.