<p><strong>ನವದೆಹಲಿ:</strong> ಮುಸ್ಲಿಂ ಮೀಸಲಾತಿ ಬಗ್ಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಯು, ಮತಕ್ಕಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವ ಕಾಂಗ್ರೆಸ್ ಗುಪ್ತ ಮಾರ್ಗಸೂಚಿಯನ್ನು ಬೆಳಕಿಗೆ ತಂದಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ.</p>.ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿ ಆರೋಪ: ರಾಜ್ಯಸಭೆಯಲ್ಲಿ ಗದ್ದಲ.<p>ಸಂವಿಧಾನವನ್ನು ಬದಲಾಯಿಸುವುದಿಲ್ಲ ಎಂದು ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ದೇಶದ ಜನತೆಗೆ ಹೇಳಬೇಕು ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p><p>‘ಸತ್ಯವು ಪದೇ ಪದೇ ಹೊರಬೀಳುವ ಅತ್ಯಂತ ವಿಚಿತ್ರವಾದ ಅಭ್ಯಾಸವನ್ನು ಹೊಂದಿದೆ‘ ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ.</p>.ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿಲ್ಲ: ಡಿಕೆಶಿ ಸ್ಪಷ್ಟನೆ.<p>‘ಮತಕ್ಕಾಗಿ ಸಂವಿಧಾನವನ್ನು ಬದಲಾಯಿಸುವುದು ಕಾಂಗ್ರೆಸ್ನ ಗುಪ್ತ ಮಾರ್ಗಸೂಚಿ’ ಎಂದು ಆರೋಪಿಸಿದ ಅವರು, ಶಿವಕುಮಾರ್ ಅವರ ಹೇಳಿಕೆ ಆರಂಭವಷ್ಟೇ ಎಂದರು.</p><p>‘ರಾಹುಲ್ ಗಾಂಧಿಯವರೇ ನೀವು ಮಾತನಾಡುತ್ತೀರಾ? ನಿಮ್ಮ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸುವಿರೇ? ಮುಸ್ಲಿಂ ಓಲೈಕೆಗಾಗಿ ಸಂವಿಧಾನವನ್ನು ಬದಲಾಯಿಸುವುದಿಲ್ಲ ಎನ್ನುವುದನ್ನು ನೀವು ಸ್ಪಷ್ಟಪಡಿಸುವಿರೇ?’ ಎಂದು ರವಿಶಂಕರ್ ಪ್ರಶ್ನಿಸಿದರು.</p>.ಒಬಿಸಿಯಡಿ ಮುಸ್ಲಿಮರಿಗೆ ಮೀಸಲಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯ . <p>ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವ ಒಳ್ಳೆಯ ದಿನಗಳು ಬರಬಹುದು ಎಂದು ಡಿ.ಕೆ ಶಿವಕುಮಾರ್ ಅವರು ಖಾಸಗಿ ವಾಹಿನಿಯ ಸಮಾವೇಶದಲ್ಲಿ ಹೇಳಿದ್ದಾರೆ ಎನ್ನಲಾದ ಮಾತುಗಳು ವಿವಾದಕ್ಕೀಡಾದ ಬೆನ್ನಲ್ಲೇ, ಬಿಜೆಪಿಯಿಂದ ಈ ಹೇಳಿಕೆ ಹೊರಬಿದ್ದಿದೆ.</p><p>ಸಂವಿಧಾನವನ್ನು ಬದಲಿಸಬೇಕು ಎಂದು ನಾನು ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಡಿ.ಕೆ ಶಿವಕುಮಾರ್ ನಂತರ ಸ್ಪಷ್ಟನೆ ನೀಡಿದ್ದಾರೆ.</p> .ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂವಿಧಾನ ವಿರೋಧಿ: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಸ್ಲಿಂ ಮೀಸಲಾತಿ ಬಗ್ಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಯು, ಮತಕ್ಕಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವ ಕಾಂಗ್ರೆಸ್ ಗುಪ್ತ ಮಾರ್ಗಸೂಚಿಯನ್ನು ಬೆಳಕಿಗೆ ತಂದಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ.</p>.ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿ ಆರೋಪ: ರಾಜ್ಯಸಭೆಯಲ್ಲಿ ಗದ್ದಲ.<p>ಸಂವಿಧಾನವನ್ನು ಬದಲಾಯಿಸುವುದಿಲ್ಲ ಎಂದು ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ದೇಶದ ಜನತೆಗೆ ಹೇಳಬೇಕು ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p><p>‘ಸತ್ಯವು ಪದೇ ಪದೇ ಹೊರಬೀಳುವ ಅತ್ಯಂತ ವಿಚಿತ್ರವಾದ ಅಭ್ಯಾಸವನ್ನು ಹೊಂದಿದೆ‘ ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ.</p>.ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿಲ್ಲ: ಡಿಕೆಶಿ ಸ್ಪಷ್ಟನೆ.<p>‘ಮತಕ್ಕಾಗಿ ಸಂವಿಧಾನವನ್ನು ಬದಲಾಯಿಸುವುದು ಕಾಂಗ್ರೆಸ್ನ ಗುಪ್ತ ಮಾರ್ಗಸೂಚಿ’ ಎಂದು ಆರೋಪಿಸಿದ ಅವರು, ಶಿವಕುಮಾರ್ ಅವರ ಹೇಳಿಕೆ ಆರಂಭವಷ್ಟೇ ಎಂದರು.</p><p>‘ರಾಹುಲ್ ಗಾಂಧಿಯವರೇ ನೀವು ಮಾತನಾಡುತ್ತೀರಾ? ನಿಮ್ಮ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸುವಿರೇ? ಮುಸ್ಲಿಂ ಓಲೈಕೆಗಾಗಿ ಸಂವಿಧಾನವನ್ನು ಬದಲಾಯಿಸುವುದಿಲ್ಲ ಎನ್ನುವುದನ್ನು ನೀವು ಸ್ಪಷ್ಟಪಡಿಸುವಿರೇ?’ ಎಂದು ರವಿಶಂಕರ್ ಪ್ರಶ್ನಿಸಿದರು.</p>.ಒಬಿಸಿಯಡಿ ಮುಸ್ಲಿಮರಿಗೆ ಮೀಸಲಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯ . <p>ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವ ಒಳ್ಳೆಯ ದಿನಗಳು ಬರಬಹುದು ಎಂದು ಡಿ.ಕೆ ಶಿವಕುಮಾರ್ ಅವರು ಖಾಸಗಿ ವಾಹಿನಿಯ ಸಮಾವೇಶದಲ್ಲಿ ಹೇಳಿದ್ದಾರೆ ಎನ್ನಲಾದ ಮಾತುಗಳು ವಿವಾದಕ್ಕೀಡಾದ ಬೆನ್ನಲ್ಲೇ, ಬಿಜೆಪಿಯಿಂದ ಈ ಹೇಳಿಕೆ ಹೊರಬಿದ್ದಿದೆ.</p><p>ಸಂವಿಧಾನವನ್ನು ಬದಲಿಸಬೇಕು ಎಂದು ನಾನು ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಡಿ.ಕೆ ಶಿವಕುಮಾರ್ ನಂತರ ಸ್ಪಷ್ಟನೆ ನೀಡಿದ್ದಾರೆ.</p> .ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂವಿಧಾನ ವಿರೋಧಿ: ಬಿಜೆಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>