<p><strong>ನವದೆಹಲಿ</strong> : ‘ಐ–ಪ್ಯಾಕ್’ ಕಚೇರಿಯಲ್ಲಿ ಜನವರಿ 8ರಂದು ಶೋಧ ನಡೆಸುವ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಸ್ತಕ್ಷೇಪ ಮಾಡಿದ್ದರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ. </p>.<p>‘ಇ.ಡಿ ಶೋಧದ ವೇಳೆ ಮಮತಾ ಬ್ಯಾನರ್ಜಿ ಅಡ್ಡಿಪಡಿಸಿದ್ದು ಅತಿ ಗಂಭೀರ ವಿಷಯ ಎಂದು ಸುಪ್ರೀಂ ಕೋರ್ಟ್ ಜನವರಿ 15ರಂದು ಹೇಳಿತ್ತು. ಇದರ ಬೆನ್ನಲ್ಲೇ, ಇ.ಡಿ ಅಧಿಕಾರಿಗಳ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ದಾಖಲಿಸಿದ್ದ ಎಫ್ಐಆರ್ಗೂ ನ್ಯಾಯಾಲಯವು ತಡೆ ನೀಡಿತ್ತು. </p>.<p>ಬುಧವಾರ ವಿಚಾರಣೆ ವೇಳೆ ‘ಲೋಪ ಸರಿಪಡಿಸಿಕೊಂಡು ಇಂದೇ ಪ್ರತ್ಯುತ್ತರ ಸಲ್ಲಿಸಲಾಗುವುದು’ ಎಂದು ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೀಠದ ಗಮಕ್ಕೆ ತಂದರು. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ, ಕೆ.ವಿ ವಿಶ್ವನಾಥನ್ ಅವರು ವಿಚಾರಣೆಯನ್ನು ಮುಂದೂಡಿದರು. </p>.<p>ಐ–ಪ್ಯಾಕ್ ಕಚೇರಿ ಆವರಣದಲ್ಲಿ ದಾಳಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸರ್ಕಾರ, ಡಿಜಿಪಿ ರಾಜೀವ್ ಕುಮಾರ್ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೆ ಇ.ಡಿ ಮನವಿ ಮಾಡಿದ್ದು, ಆರೋಪಿಗಳಿಗೆ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. </p>.<p>ಐ–ಪ್ಯಾಕ್ ಕಚೇರಿ ಮೇಲೆ ಇ.ಡಿ ದಾಳಿಯ ಸಂದರ್ಭದ ಸಿ.ಸಿ.ಟಿ.ವಿ. ದೃಶ್ಯಾವಳಿಗಳನ್ನು ಸಂರಕ್ಷಿಸಿ ಇಡುವಂತೆಯೂ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಪೊಲೀಸರಿಗೆ ಸೂಚನೆ ನೀಡಿದೆ. </p>.<p>ಮಮತಾ ಬ್ಯಾನರ್ಜಿ ಅವರು, ಐ–ಪ್ಯಾಕ್ ಕಚೇರಿಯಿಂದ ಕೆಲವು ಕಡತಗಳು, ಎಲೆಕ್ಟ್ರಾನಿಕ್ ಉಪಕರಣ ಸೇರಿದಂತೆ ‘ಸೂಕ್ಷ್ಮ’ ಸಾಕ್ಷ್ಯಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಇ.ಡಿ ಆರೋಪಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ‘ಐ–ಪ್ಯಾಕ್’ ಕಚೇರಿಯಲ್ಲಿ ಜನವರಿ 8ರಂದು ಶೋಧ ನಡೆಸುವ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಸ್ತಕ್ಷೇಪ ಮಾಡಿದ್ದರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ. </p>.<p>‘ಇ.ಡಿ ಶೋಧದ ವೇಳೆ ಮಮತಾ ಬ್ಯಾನರ್ಜಿ ಅಡ್ಡಿಪಡಿಸಿದ್ದು ಅತಿ ಗಂಭೀರ ವಿಷಯ ಎಂದು ಸುಪ್ರೀಂ ಕೋರ್ಟ್ ಜನವರಿ 15ರಂದು ಹೇಳಿತ್ತು. ಇದರ ಬೆನ್ನಲ್ಲೇ, ಇ.ಡಿ ಅಧಿಕಾರಿಗಳ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ದಾಖಲಿಸಿದ್ದ ಎಫ್ಐಆರ್ಗೂ ನ್ಯಾಯಾಲಯವು ತಡೆ ನೀಡಿತ್ತು. </p>.<p>ಬುಧವಾರ ವಿಚಾರಣೆ ವೇಳೆ ‘ಲೋಪ ಸರಿಪಡಿಸಿಕೊಂಡು ಇಂದೇ ಪ್ರತ್ಯುತ್ತರ ಸಲ್ಲಿಸಲಾಗುವುದು’ ಎಂದು ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೀಠದ ಗಮಕ್ಕೆ ತಂದರು. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ, ಕೆ.ವಿ ವಿಶ್ವನಾಥನ್ ಅವರು ವಿಚಾರಣೆಯನ್ನು ಮುಂದೂಡಿದರು. </p>.<p>ಐ–ಪ್ಯಾಕ್ ಕಚೇರಿ ಆವರಣದಲ್ಲಿ ದಾಳಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸರ್ಕಾರ, ಡಿಜಿಪಿ ರಾಜೀವ್ ಕುಮಾರ್ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೆ ಇ.ಡಿ ಮನವಿ ಮಾಡಿದ್ದು, ಆರೋಪಿಗಳಿಗೆ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. </p>.<p>ಐ–ಪ್ಯಾಕ್ ಕಚೇರಿ ಮೇಲೆ ಇ.ಡಿ ದಾಳಿಯ ಸಂದರ್ಭದ ಸಿ.ಸಿ.ಟಿ.ವಿ. ದೃಶ್ಯಾವಳಿಗಳನ್ನು ಸಂರಕ್ಷಿಸಿ ಇಡುವಂತೆಯೂ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಪೊಲೀಸರಿಗೆ ಸೂಚನೆ ನೀಡಿದೆ. </p>.<p>ಮಮತಾ ಬ್ಯಾನರ್ಜಿ ಅವರು, ಐ–ಪ್ಯಾಕ್ ಕಚೇರಿಯಿಂದ ಕೆಲವು ಕಡತಗಳು, ಎಲೆಕ್ಟ್ರಾನಿಕ್ ಉಪಕರಣ ಸೇರಿದಂತೆ ‘ಸೂಕ್ಷ್ಮ’ ಸಾಕ್ಷ್ಯಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಇ.ಡಿ ಆರೋಪಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>