<p><strong>ರಾಯಪುರ</strong>: ಅಬಕಾರಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಮಗ ಚೈತನ್ಯ ಬಘೇಲ್ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೆಶನಾಲಯವು(ಇ.ಡಿ) ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಚೈತನ್ಯ ತಮ್ಮ ತಂದೆ ಜೊತೆ ವಾಸವಿರುವ ಭಿಲಾಯಿ ಪಟ್ಟಣದ ಮನೆ ಮೇಲೆ ದಾಳಿ ನಡೆದಿದೆ. ಹೊಸ ಸಾಕ್ಷ್ಯ ಕಲೆ ಹಾಕಿರುವ ಇ.ಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿ ದಾಳಿ ನಡೆಸಿದೆ.</p><p>ಈ ವರ್ಷದ ಮಾರ್ಚ್ ತಿಂಗಳಿನಲ್ಲೂ ಚೈತನ್ಯ ಬಘೇಲ್ ಅವರಿಗೆ ಸಂಬಂಧಿತ ಪ್ರದೇಶಗಳ ಮೇಲೆ ಇ.ಡಿ ದಾಳಿ ನಡೆಸಿತ್ತು.</p><p> ವಿಧಾನಸಭೆ ಅಧಿವೇಶನದ ಕೊನೆಯ ದಿನ ಇ.ಡಿ ಅಧಿಕಾರಿಗಳು ನಮ್ಮ ಮನೆಗೆ ಆಗಮಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ಧಾರೆ.</p><p>ಚೈತನ್ಯ ಬಘೇಲ್ ಅವರು ಮದ್ಯ ಹಗರಣದ ಅಪರಾಧದಲ್ಲಿ ಹಣ ಪಡೆದಿರುವುದಾಗಿ ಶಂಕಿಸಲಾಗಿದೆ ಎಂದು ಇ.ಡಿ ಹೇಳಿತ್ತು.</p><p>ಛತ್ತೀಸಗಢದ ಮದ್ಯ ಹಗರಣದಿಂದ ರಾಜ್ಯ ಖಜಾನೆಗೆ ಭಾರಿ ನಷ್ಟ ಉಂಟಾಗಿದೆ. ಮದ್ಯದ ಸಿಂಡಿಕೇಟ್ನ ಫಲಾನುಭವಿಗಳಿಗೆ ಈ ಹಗರಣದಲ್ಲಿ ₹2,100 ಕೋಟಿ ಲಾಭ ಆಗಿದೆ ಎಂದು ಅದು ಹೇಳಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ಅಬಕಾರಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಮಗ ಚೈತನ್ಯ ಬಘೇಲ್ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೆಶನಾಲಯವು(ಇ.ಡಿ) ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಚೈತನ್ಯ ತಮ್ಮ ತಂದೆ ಜೊತೆ ವಾಸವಿರುವ ಭಿಲಾಯಿ ಪಟ್ಟಣದ ಮನೆ ಮೇಲೆ ದಾಳಿ ನಡೆದಿದೆ. ಹೊಸ ಸಾಕ್ಷ್ಯ ಕಲೆ ಹಾಕಿರುವ ಇ.ಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿ ದಾಳಿ ನಡೆಸಿದೆ.</p><p>ಈ ವರ್ಷದ ಮಾರ್ಚ್ ತಿಂಗಳಿನಲ್ಲೂ ಚೈತನ್ಯ ಬಘೇಲ್ ಅವರಿಗೆ ಸಂಬಂಧಿತ ಪ್ರದೇಶಗಳ ಮೇಲೆ ಇ.ಡಿ ದಾಳಿ ನಡೆಸಿತ್ತು.</p><p> ವಿಧಾನಸಭೆ ಅಧಿವೇಶನದ ಕೊನೆಯ ದಿನ ಇ.ಡಿ ಅಧಿಕಾರಿಗಳು ನಮ್ಮ ಮನೆಗೆ ಆಗಮಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ಧಾರೆ.</p><p>ಚೈತನ್ಯ ಬಘೇಲ್ ಅವರು ಮದ್ಯ ಹಗರಣದ ಅಪರಾಧದಲ್ಲಿ ಹಣ ಪಡೆದಿರುವುದಾಗಿ ಶಂಕಿಸಲಾಗಿದೆ ಎಂದು ಇ.ಡಿ ಹೇಳಿತ್ತು.</p><p>ಛತ್ತೀಸಗಢದ ಮದ್ಯ ಹಗರಣದಿಂದ ರಾಜ್ಯ ಖಜಾನೆಗೆ ಭಾರಿ ನಷ್ಟ ಉಂಟಾಗಿದೆ. ಮದ್ಯದ ಸಿಂಡಿಕೇಟ್ನ ಫಲಾನುಭವಿಗಳಿಗೆ ಈ ಹಗರಣದಲ್ಲಿ ₹2,100 ಕೋಟಿ ಲಾಭ ಆಗಿದೆ ಎಂದು ಅದು ಹೇಳಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>