<p><strong>ಮುಂಬೈ</strong>: ಮಹಾರಾಷ್ಟ್ರದ ನಿರ್ಗಮಿತ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಸಂಜೆ ಮುಂಬೈಗೆ ಮರಳಿದ್ದಾರೆ ಎಂದು ಶಿಂದೆ ಅವರ ನಿಕಟವರ್ತಿಯೊಬ್ಬರು ತಿಳಿಸಿದ್ದಾರೆ.</p><p>ನೂತನ ಸರ್ಕಾರ ರಚನೆಗೊಳ್ಳುತ್ತಿರುವುದರ ಬಗ್ಗೆ ಶಿಂದೆ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಶುಕ್ರವಾರ ಶಿಂದೆ ಅವರು ತಮ್ಮ ಸ್ವಗ್ರಾಮ ಡಾರೆಗೆ ತೆರಳಿದ್ದರು. ಅಲ್ಲಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು.</p><p>‘ಶಿಂದೆ ಅವರಿಗೆ ಜ್ವರ ಮತ್ತು ಗಂಟಲು ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಲ್ಲಿ ಅವರು ಚೇತರಿಸಿಕೊಳ್ಳಲಿದ್ದು, ಭಾನುವಾರ ಮುಂಬೈಗೆ ಮರಳಲಿದ್ದಾರೆ’ ಎಂದು ಕುಟುಂಬದ ವೈದ್ಯರಾದ ಆರ್.ಎಮ್.ಪರ್ತೆ ಅವರು ಮಾಧ್ಯಮಗಳಿಗೆ ಹೇಳಿದ್ದರು.</p><p>ಹವಾಮಾನ ಬದಲಾವಣೆಯಿಂದ ಶನಿವಾರ ಶಿಂದೆ ಅವರಿಗೆ ಜ್ವರ ಕಾಣಿಸಕೊಂಡಿತ್ತು. ಈಗ ಚೇತರಿಕೊಂಡಿದ್ದು, ಇಂದು ಸಂಜೆ ಮುಂಬೈಗೆ ಮರಳಲಿದ್ದಾರೆ ಎಂದು ಶಿವಸೇನಾ(ಶಿಂದೆ ಬಣ) ಮೂಲಗಳು ತಿಳಿಸಿವೆ.</p><p>ಡಿಸೆಂಬರ್ 5ರ ಸಂಜೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ರಾಜ್ಯ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಶನಿವಾರ ತಿಳಿಸಿದ್ದಾರೆ. ಅದಾಗ್ಯೂ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುವುದನ್ನು ಮಹಾಯುತಿ ಮೈತ್ರಿಕೂಟ ಘೋಷಣೆ ಮಾಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ನಿರ್ಗಮಿತ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಸಂಜೆ ಮುಂಬೈಗೆ ಮರಳಿದ್ದಾರೆ ಎಂದು ಶಿಂದೆ ಅವರ ನಿಕಟವರ್ತಿಯೊಬ್ಬರು ತಿಳಿಸಿದ್ದಾರೆ.</p><p>ನೂತನ ಸರ್ಕಾರ ರಚನೆಗೊಳ್ಳುತ್ತಿರುವುದರ ಬಗ್ಗೆ ಶಿಂದೆ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಶುಕ್ರವಾರ ಶಿಂದೆ ಅವರು ತಮ್ಮ ಸ್ವಗ್ರಾಮ ಡಾರೆಗೆ ತೆರಳಿದ್ದರು. ಅಲ್ಲಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು.</p><p>‘ಶಿಂದೆ ಅವರಿಗೆ ಜ್ವರ ಮತ್ತು ಗಂಟಲು ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಲ್ಲಿ ಅವರು ಚೇತರಿಸಿಕೊಳ್ಳಲಿದ್ದು, ಭಾನುವಾರ ಮುಂಬೈಗೆ ಮರಳಲಿದ್ದಾರೆ’ ಎಂದು ಕುಟುಂಬದ ವೈದ್ಯರಾದ ಆರ್.ಎಮ್.ಪರ್ತೆ ಅವರು ಮಾಧ್ಯಮಗಳಿಗೆ ಹೇಳಿದ್ದರು.</p><p>ಹವಾಮಾನ ಬದಲಾವಣೆಯಿಂದ ಶನಿವಾರ ಶಿಂದೆ ಅವರಿಗೆ ಜ್ವರ ಕಾಣಿಸಕೊಂಡಿತ್ತು. ಈಗ ಚೇತರಿಕೊಂಡಿದ್ದು, ಇಂದು ಸಂಜೆ ಮುಂಬೈಗೆ ಮರಳಲಿದ್ದಾರೆ ಎಂದು ಶಿವಸೇನಾ(ಶಿಂದೆ ಬಣ) ಮೂಲಗಳು ತಿಳಿಸಿವೆ.</p><p>ಡಿಸೆಂಬರ್ 5ರ ಸಂಜೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ರಾಜ್ಯ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಶನಿವಾರ ತಿಳಿಸಿದ್ದಾರೆ. ಅದಾಗ್ಯೂ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುವುದನ್ನು ಮಹಾಯುತಿ ಮೈತ್ರಿಕೂಟ ಘೋಷಣೆ ಮಾಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>