<p><strong>ನವದೆಹಲಿ</strong>: ಕೆನಡಾ ರಾಜತಾಂತ್ರಿಕ ಸಿಬ್ಬಂದಿ ಸಂಖ್ಯೆಯನ್ನು ಕಡಿತಗೊಳಿಸುವ ತನ್ನ ನಿರ್ಧಾರವು ರಾಜತಾಂತ್ರಿಕ ಸಂಬಂಧಗಳ ಕುರಿತ ವಿಯೆನ್ನಾ ಒಪ್ಪಂದವನ್ನು ಆಧರಿಸಿ ಕೈಗೊಂಡಿರುವ ಕ್ರಮವಾಗಿದೆ ಎಂದು ಭಾರತ ಗುರುವಾರ ಹೇಳಿದೆ.</p>.<p>ಉಭಯ ದೇಶಗಳು ಸಮಾನ ಸಂಖ್ಯೆಯಲ್ಲಿ ರಾಜತಾಂತ್ರಿಕ ಸಿಬ್ಬಂದಿಯನ್ನು ಹೊಂದಿರುವುದು ಅಗತ್ಯ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಪಾದಿಸಿದ್ದಾರೆ.</p>.<p>ಖಾಲಿಸ್ತಾನ ಪರ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿ ಭಾರತ ವಿರುದ್ಧ ಕೆನಡಾ ಆರೋಪ ಮಾಡಿದ ನಂತರ ಉಭಯ ದೇಶಗಳ ನಡುವೆ ಉದ್ಭವಿಸಿರುವ ರಾಜತಾಂತ್ರಿಕ ಬಿಕ್ಕಟ್ಟು ಮುಂದುವರಿದಿದೆ.</p>.<p>ಅಲ್ಲದೇ, ಭಾರತದಲ್ಲಿನ ತನ್ನ ರಾಜತಾಂತ್ರಿಕ ಸಿಬ್ಬಂದಿ ಪೈಕಿ 41 ಮಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಇತ್ತೀಚೆಗೆ ಗಡುವು ನೀಡಿತ್ತು. ಇದರ ಬೆನ್ನಲ್ಲೇ, ನವದೆಹಲಿ ಹೊರತುಪಡಿಸಿ ಉಳಿದೆಡೆ ಇದ್ದ ರಾಜತಾಂತ್ರಿಕರನ್ನು ಸಿಂಗಪುರ ಹಾಗೂ ಕ್ವಾಲಾಲಂಪುರಕ್ಕೆ ಕೆನಡಾ ಸ್ಥಳಾಂತರಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೆನಡಾ ರಾಜತಾಂತ್ರಿಕ ಸಿಬ್ಬಂದಿ ಸಂಖ್ಯೆಯನ್ನು ಕಡಿತಗೊಳಿಸುವ ತನ್ನ ನಿರ್ಧಾರವು ರಾಜತಾಂತ್ರಿಕ ಸಂಬಂಧಗಳ ಕುರಿತ ವಿಯೆನ್ನಾ ಒಪ್ಪಂದವನ್ನು ಆಧರಿಸಿ ಕೈಗೊಂಡಿರುವ ಕ್ರಮವಾಗಿದೆ ಎಂದು ಭಾರತ ಗುರುವಾರ ಹೇಳಿದೆ.</p>.<p>ಉಭಯ ದೇಶಗಳು ಸಮಾನ ಸಂಖ್ಯೆಯಲ್ಲಿ ರಾಜತಾಂತ್ರಿಕ ಸಿಬ್ಬಂದಿಯನ್ನು ಹೊಂದಿರುವುದು ಅಗತ್ಯ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಪ್ರತಿಪಾದಿಸಿದ್ದಾರೆ.</p>.<p>ಖಾಲಿಸ್ತಾನ ಪರ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿ ಭಾರತ ವಿರುದ್ಧ ಕೆನಡಾ ಆರೋಪ ಮಾಡಿದ ನಂತರ ಉಭಯ ದೇಶಗಳ ನಡುವೆ ಉದ್ಭವಿಸಿರುವ ರಾಜತಾಂತ್ರಿಕ ಬಿಕ್ಕಟ್ಟು ಮುಂದುವರಿದಿದೆ.</p>.<p>ಅಲ್ಲದೇ, ಭಾರತದಲ್ಲಿನ ತನ್ನ ರಾಜತಾಂತ್ರಿಕ ಸಿಬ್ಬಂದಿ ಪೈಕಿ 41 ಮಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಇತ್ತೀಚೆಗೆ ಗಡುವು ನೀಡಿತ್ತು. ಇದರ ಬೆನ್ನಲ್ಲೇ, ನವದೆಹಲಿ ಹೊರತುಪಡಿಸಿ ಉಳಿದೆಡೆ ಇದ್ದ ರಾಜತಾಂತ್ರಿಕರನ್ನು ಸಿಂಗಪುರ ಹಾಗೂ ಕ್ವಾಲಾಲಂಪುರಕ್ಕೆ ಕೆನಡಾ ಸ್ಥಳಾಂತರಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>