ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಫೆಬ್ರುವರಿ 26ರಂದು ಬಂಧಿಸಿತ್ತು.
ಇದೇ ಪ್ರಕರಣದ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಅಬಕಾರಿ ನೀತಿ ಜಾರಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ‘ಪ್ರಮುಖ ಸಂಚುಕೋರ’ ಎಂದು ಇ.ಡಿ ಆರೋಪಿಸಿದೆ.
ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸಚಿವ ಸಂಪುಟಕ್ಕೆ ಸಿಸೋಡಿಯಾ ರಾಜೀನಾಮೆ ನೀಡಿದ್ದರು.