<p><strong>ನವದೆಹಲಿ:</strong> ದೇಶದ ವಿವಿಧ ರೈತ ಸಂಘಟನೆಗಳು ದೆಹಲಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’ನಲ್ಲಿ ಭಾರಿ ಸಂಖ್ಯೆಯಲ್ಲಿ ರೈತರು ಭಾಗಿಯಾಗಿದ್ದರು. ಈ ವೇಳೆ ಅವರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. </p>.<p>ಬುಧವಾರ ರಾತ್ರಿಯೇ ದೆಹಲಿಗೆ ಆಗಮಿಸಿದ್ದ ಪಂಜಾಬ್ನ ಪಟಿಯಾಲಾದ ರೈತ ಹರ್ಮನ್ ಸಿಂಗ್ ಅವರು, ‘ಕೇಂದ್ರದ ನೀತಿಗಳು ರೈತರ ಪರವಾಗಿರಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂಬ ನಮ್ಮ ಬೇಡಿಕೆಯನ್ನು ಕೇಂದ್ರ ಈಡೇರಿಸಬೇಕು’ ಎಂದು ಆಗ್ರಹಿಸಿದರು. </p>.<p>ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ 2021ರ ಅಕ್ಟೋಬರ್ನಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಕೇಂದ್ರ ಸಚಿವರ ಮಗನ ಬೆಂಗಾವಲು ವಾಹನವನ್ನು ಹರಿಸಲಾಗಿತ್ತು. ಈ ಪ್ರಕರಣದಲ್ಲಿ ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಪಂಜಾಬ್ನ ಬಠಿಂಡಾದ ರೈತ ರವೀಂದರ್ ಸಿಂಗ್ ಅವರು ಆಗ್ರಹಿಸಿದರು.</p>.<p>ಕೇಂದ್ರದ ಕೃಷಿ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವುದಾಗಿ ಮಹಾಪಂಚಾಯತ್ನಲ್ಲಿ ನಿರ್ಣಯ ತೆಗೆದುಕೊಳ್ಳುವುದಾಗಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿತ್ತು.</p>.<p>ರಾಮಲೀಲಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲು ಪೊಲೀಸರು ರೈತರಿಗೆ ಷರತ್ತುಬದ್ಧ ಅನುಮತಿ ನೀಡಿದ್ದರು. ಅದರಂತೆ, 5,000ಕ್ಕೂ ಹೆಚ್ಚು ಜನರು ರಾಮಲೀಲಾದಲ್ಲಿ ಸೇರುವಂತಿರಲಿಲ್ಲ ಮತ್ತು ಟ್ರಾಕ್ಟರ್ಗಳನ್ನು ದೆಹಲಿಯೊಳಗೆ ತರುವಂತಿರಲಿಲ್ಲ.</p>.<p>ಕೇಂದ್ರ ದೆಹಲಿಗೆ ಸಾಗುವ ಎಲ್ಲಾ ಮಾರ್ಗಗಳಲ್ಲೂ ಪೊಲೀಸರು ಸಂಚಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದರು. ದೆಹಲಿಯ ಗಡಿಗಳಲ್ಲಿ ನಿಯೋಜಿಸಲಾಗಿರು ಅರೆಸೇನಾ ಪಡೆಗಳ ಬಲವನ್ನು ಹೆಚ್ಚಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ವಿವಿಧ ರೈತ ಸಂಘಟನೆಗಳು ದೆಹಲಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’ನಲ್ಲಿ ಭಾರಿ ಸಂಖ್ಯೆಯಲ್ಲಿ ರೈತರು ಭಾಗಿಯಾಗಿದ್ದರು. ಈ ವೇಳೆ ಅವರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. </p>.<p>ಬುಧವಾರ ರಾತ್ರಿಯೇ ದೆಹಲಿಗೆ ಆಗಮಿಸಿದ್ದ ಪಂಜಾಬ್ನ ಪಟಿಯಾಲಾದ ರೈತ ಹರ್ಮನ್ ಸಿಂಗ್ ಅವರು, ‘ಕೇಂದ್ರದ ನೀತಿಗಳು ರೈತರ ಪರವಾಗಿರಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂಬ ನಮ್ಮ ಬೇಡಿಕೆಯನ್ನು ಕೇಂದ್ರ ಈಡೇರಿಸಬೇಕು’ ಎಂದು ಆಗ್ರಹಿಸಿದರು. </p>.<p>ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ 2021ರ ಅಕ್ಟೋಬರ್ನಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಕೇಂದ್ರ ಸಚಿವರ ಮಗನ ಬೆಂಗಾವಲು ವಾಹನವನ್ನು ಹರಿಸಲಾಗಿತ್ತು. ಈ ಪ್ರಕರಣದಲ್ಲಿ ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಪಂಜಾಬ್ನ ಬಠಿಂಡಾದ ರೈತ ರವೀಂದರ್ ಸಿಂಗ್ ಅವರು ಆಗ್ರಹಿಸಿದರು.</p>.<p>ಕೇಂದ್ರದ ಕೃಷಿ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವುದಾಗಿ ಮಹಾಪಂಚಾಯತ್ನಲ್ಲಿ ನಿರ್ಣಯ ತೆಗೆದುಕೊಳ್ಳುವುದಾಗಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿತ್ತು.</p>.<p>ರಾಮಲೀಲಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲು ಪೊಲೀಸರು ರೈತರಿಗೆ ಷರತ್ತುಬದ್ಧ ಅನುಮತಿ ನೀಡಿದ್ದರು. ಅದರಂತೆ, 5,000ಕ್ಕೂ ಹೆಚ್ಚು ಜನರು ರಾಮಲೀಲಾದಲ್ಲಿ ಸೇರುವಂತಿರಲಿಲ್ಲ ಮತ್ತು ಟ್ರಾಕ್ಟರ್ಗಳನ್ನು ದೆಹಲಿಯೊಳಗೆ ತರುವಂತಿರಲಿಲ್ಲ.</p>.<p>ಕೇಂದ್ರ ದೆಹಲಿಗೆ ಸಾಗುವ ಎಲ್ಲಾ ಮಾರ್ಗಗಳಲ್ಲೂ ಪೊಲೀಸರು ಸಂಚಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದರು. ದೆಹಲಿಯ ಗಡಿಗಳಲ್ಲಿ ನಿಯೋಜಿಸಲಾಗಿರು ಅರೆಸೇನಾ ಪಡೆಗಳ ಬಲವನ್ನು ಹೆಚ್ಚಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>