<p><strong>ಚಂಡೀಗಢ:</strong> ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಗುಂಪು ಇಂದು (ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ಪಾದಯಾತ್ರೆ ಕೈಗೊಳ್ಳಲಿದ್ದಾರೆ. </p><p>ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ರೈತರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. </p><p>101 ರೈತರನ್ನು ಒಳಗೊಂಡ ಗುಂಪು ಪಾದಯಾತ್ರೆ ನಡೆಸಲಿದೆ. ರೈತರ ಪಾದಯಾತ್ರೆ ಹಿನ್ನೆಲೆಯಲ್ಲಿ ಹರಿಯಾಣ ಗಡಿ ಭಾಗದಲ್ಲಿ ಭಾರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. </p><p>ಮುಂಜಾಗ್ರತಾ ಕ್ರಮವಾಗಿ ಅಂಬಾಲಾ ಜಿಲ್ಲಾಡಳಿತವು, ಪ್ರದೇಶದಲ್ಲಿ ಸೆಕ್ಷನ್ 163 ಜಾರಿಗೊಳಿಸಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸೇರುವುದನ್ನು ನಿರ್ಬಂಧಿಸಲಾಗಿದೆ. </p><p>ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲು ಜಿಲ್ಲಾಡಳಿತ ಆದೇಶ ನೀಡಿದೆ. </p><p>ಶಂಭು ಗಡಿಯಲ್ಲಿ ಬ್ಯಾರಿಕೇಡ್ಗಳನ್ನು ಸ್ಥಾಪಿಸಲಾಗಿದೆ. ಜಲಫಿರಂಗಿಗಳನ್ನು ಏರ್ಪಡಿಸಲಾಗಿದೆ. ಭದ್ರತೆಗಾಗಿ ಕೇಂದ್ರ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. </p><p>ಪಂಜಾಬ್ ಮತ್ತು ಹರಿಯಾಣದಿಂದ ಹೆಚ್ಚಿನ ಸಂಖ್ಯೆಯ ರೈತರು ದೆಹಲಿಗೆ ತೆರಳಲು ಶಂಭು ಗಡಿಯಲ್ಲಿ ಸೇರುವ ಸಾಧ್ಯತೆಯಿದೆ. </p><p>'ಪಾದಯಾತ್ರೆ ಶಾಂತಿಯುತವಾಗಿ ನಡೆಯಲಿದೆ. ಆದರೆ ಹರಿಯಾಣ ಆಡಳಿತವು ತಡೆಯೊಡ್ಡಲು ಪ್ರಯತ್ನಿಸುತ್ತಿದೆ' ಎಂದು ರೈತ ಮಖಂಡ ಸರ್ವಾನ್ ಸಿಂಗ್ ಹೇಳಿದ್ದಾರೆ. </p><p>ಎಂಎಸ್ಪಿ, ಕೃಷಿ ಸಾಲ ಮನ್ನಾ, ರೈತರಿಗೆ ಪಿಂಚಣಿ, ಪೊಲೀಸ್ ಪ್ರಕರಣಗಳ ರದ್ದು, ವಿದ್ಯುತ್ ದರ ಏರಿಕೆ ಮಾಡಬಾರದು, 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ರೈತರು ಒತ್ತಾಯಿಸಿದ್ದಾರೆ. </p>.ರೈತರ ಪ್ರತಿಭಟನೆಯನ್ನು ಅರಾಜಕತೆ ಎಂದಿರುವ ಯೋಗಿ ಕ್ಷಮೆಯಾಚಿಸಬೇಕು: ಎಸ್ಕೆಎಂ.ರಾಜ್ಯಸಭೆಯಲ್ಲಿ ರೈತರ ಬೇಡಿಕೆಗಳ ಕುರಿತ ಚರ್ಚೆಗೆ ಸಿಗದ ಅವಕಾಶ: ಸಭಾತ್ಯಾಗ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಗುಂಪು ಇಂದು (ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ಪಾದಯಾತ್ರೆ ಕೈಗೊಳ್ಳಲಿದ್ದಾರೆ. </p><p>ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ರೈತರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. </p><p>101 ರೈತರನ್ನು ಒಳಗೊಂಡ ಗುಂಪು ಪಾದಯಾತ್ರೆ ನಡೆಸಲಿದೆ. ರೈತರ ಪಾದಯಾತ್ರೆ ಹಿನ್ನೆಲೆಯಲ್ಲಿ ಹರಿಯಾಣ ಗಡಿ ಭಾಗದಲ್ಲಿ ಭಾರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. </p><p>ಮುಂಜಾಗ್ರತಾ ಕ್ರಮವಾಗಿ ಅಂಬಾಲಾ ಜಿಲ್ಲಾಡಳಿತವು, ಪ್ರದೇಶದಲ್ಲಿ ಸೆಕ್ಷನ್ 163 ಜಾರಿಗೊಳಿಸಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸೇರುವುದನ್ನು ನಿರ್ಬಂಧಿಸಲಾಗಿದೆ. </p><p>ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲು ಜಿಲ್ಲಾಡಳಿತ ಆದೇಶ ನೀಡಿದೆ. </p><p>ಶಂಭು ಗಡಿಯಲ್ಲಿ ಬ್ಯಾರಿಕೇಡ್ಗಳನ್ನು ಸ್ಥಾಪಿಸಲಾಗಿದೆ. ಜಲಫಿರಂಗಿಗಳನ್ನು ಏರ್ಪಡಿಸಲಾಗಿದೆ. ಭದ್ರತೆಗಾಗಿ ಕೇಂದ್ರ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. </p><p>ಪಂಜಾಬ್ ಮತ್ತು ಹರಿಯಾಣದಿಂದ ಹೆಚ್ಚಿನ ಸಂಖ್ಯೆಯ ರೈತರು ದೆಹಲಿಗೆ ತೆರಳಲು ಶಂಭು ಗಡಿಯಲ್ಲಿ ಸೇರುವ ಸಾಧ್ಯತೆಯಿದೆ. </p><p>'ಪಾದಯಾತ್ರೆ ಶಾಂತಿಯುತವಾಗಿ ನಡೆಯಲಿದೆ. ಆದರೆ ಹರಿಯಾಣ ಆಡಳಿತವು ತಡೆಯೊಡ್ಡಲು ಪ್ರಯತ್ನಿಸುತ್ತಿದೆ' ಎಂದು ರೈತ ಮಖಂಡ ಸರ್ವಾನ್ ಸಿಂಗ್ ಹೇಳಿದ್ದಾರೆ. </p><p>ಎಂಎಸ್ಪಿ, ಕೃಷಿ ಸಾಲ ಮನ್ನಾ, ರೈತರಿಗೆ ಪಿಂಚಣಿ, ಪೊಲೀಸ್ ಪ್ರಕರಣಗಳ ರದ್ದು, ವಿದ್ಯುತ್ ದರ ಏರಿಕೆ ಮಾಡಬಾರದು, 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ರೈತರು ಒತ್ತಾಯಿಸಿದ್ದಾರೆ. </p>.ರೈತರ ಪ್ರತಿಭಟನೆಯನ್ನು ಅರಾಜಕತೆ ಎಂದಿರುವ ಯೋಗಿ ಕ್ಷಮೆಯಾಚಿಸಬೇಕು: ಎಸ್ಕೆಎಂ.ರಾಜ್ಯಸಭೆಯಲ್ಲಿ ರೈತರ ಬೇಡಿಕೆಗಳ ಕುರಿತ ಚರ್ಚೆಗೆ ಸಿಗದ ಅವಕಾಶ: ಸಭಾತ್ಯಾಗ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>