<p><strong>ಭೋಪಾಲ್</strong>: ರೈತರಿಗೆ ₹5ಕ್ಕೆ ಶಾಶ್ವತ ವಿದ್ಯುತ್ ಸಂಪರ್ಕ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಇಂದು (ಭಾನುವಾರ) ಘೋಷಿಸಿದ್ದಾರೆ.</p><p>ಭೋಪಾಲ್ನಲ್ಲಿ ನಡೆದ ಸಭೆಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮಧ್ಯಪ್ರದೇಶ ಕೇಂದ್ರ ವಿದ್ಯುತ್ ವಿತರಣಾ ಕಂಪನಿ ಶೀಘ್ರದಲ್ಲೇ ಈ ಯೋಜನೆಯನ್ನು ಜಾರಿಗೊಳಿಸಲಿದೆ. ಶಾಶ್ವತ ವಿದ್ಯುತ್ ಸಂಪರ್ಕವಿಲ್ಲದ ರೈತರಿಗೆ ₹5ಕ್ಕೆ ಈ ಸೌಲಭ್ಯ ನೀಡಲಾಗುವುದು. ನಾವು ರೈತರಿಗೆ ಒಳ್ಳೆಯದನ್ನು ಮಾಡಲು ಮತ್ತು ಅವರ ಜೀವನವನ್ನು ಉತ್ತಮಗೊಳಿಸಲು ಬಯಸುತ್ತೇವೆ’ ಎಂದು ಹೇಳಿದ್ದಾರೆ.</p><p>ರೈತರಿಗೆ ನೀರಾವರಿ ಕೆಲಸಗಳಿಗೆ ಸೌರ ಪಂಪ್ಗಳನ್ನು ನೀಡುವ ಮೂಲಕ ವಿದ್ಯುತ್ ಸಂಬಂಧಿತ ತೊಂದರೆಗಳನ್ನು ನಿವಾರಿಸಲು ಸರ್ಕಾರ ಯೋಜಿಸಿದೆ. ಮುಂದಿನ ಮೂರು ವರ್ಷಗಳಲ್ಲಿ, ರೈತರಿಗೆ 30 ಲಕ್ಷ ನೀರಾವರಿ ಪಂಪ್ಗಳನ್ನು ಒದಗಿಸಲಾಗುವುದು. ಅಲ್ಲದೆ, ಸರ್ಕಾರವು ರೈತರಿಂದ ಸೌರಶಕ್ತಿಯನ್ನು ಖರೀದಿಸಲಿದೆ’ ಎಂದು ತಿಳಿಸಿದ್ದಾರೆ.</p><p>ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಳ್ಳಿಗಳಿಗೆ ಸರಿಯಾದ ಮೂಲಸೌಕರ್ಯ, ವಿದ್ಯುತ್ ಮತ್ತು ರಸ್ತೆಗಳು ಇರಲಿಲ್ಲ. ಆದರೆ, ಬಿಜೆಪಿ ಆಡಳಿತದಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ರೈತರಿಗೆ ₹5ಕ್ಕೆ ಶಾಶ್ವತ ವಿದ್ಯುತ್ ಸಂಪರ್ಕ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಇಂದು (ಭಾನುವಾರ) ಘೋಷಿಸಿದ್ದಾರೆ.</p><p>ಭೋಪಾಲ್ನಲ್ಲಿ ನಡೆದ ಸಭೆಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮಧ್ಯಪ್ರದೇಶ ಕೇಂದ್ರ ವಿದ್ಯುತ್ ವಿತರಣಾ ಕಂಪನಿ ಶೀಘ್ರದಲ್ಲೇ ಈ ಯೋಜನೆಯನ್ನು ಜಾರಿಗೊಳಿಸಲಿದೆ. ಶಾಶ್ವತ ವಿದ್ಯುತ್ ಸಂಪರ್ಕವಿಲ್ಲದ ರೈತರಿಗೆ ₹5ಕ್ಕೆ ಈ ಸೌಲಭ್ಯ ನೀಡಲಾಗುವುದು. ನಾವು ರೈತರಿಗೆ ಒಳ್ಳೆಯದನ್ನು ಮಾಡಲು ಮತ್ತು ಅವರ ಜೀವನವನ್ನು ಉತ್ತಮಗೊಳಿಸಲು ಬಯಸುತ್ತೇವೆ’ ಎಂದು ಹೇಳಿದ್ದಾರೆ.</p><p>ರೈತರಿಗೆ ನೀರಾವರಿ ಕೆಲಸಗಳಿಗೆ ಸೌರ ಪಂಪ್ಗಳನ್ನು ನೀಡುವ ಮೂಲಕ ವಿದ್ಯುತ್ ಸಂಬಂಧಿತ ತೊಂದರೆಗಳನ್ನು ನಿವಾರಿಸಲು ಸರ್ಕಾರ ಯೋಜಿಸಿದೆ. ಮುಂದಿನ ಮೂರು ವರ್ಷಗಳಲ್ಲಿ, ರೈತರಿಗೆ 30 ಲಕ್ಷ ನೀರಾವರಿ ಪಂಪ್ಗಳನ್ನು ಒದಗಿಸಲಾಗುವುದು. ಅಲ್ಲದೆ, ಸರ್ಕಾರವು ರೈತರಿಂದ ಸೌರಶಕ್ತಿಯನ್ನು ಖರೀದಿಸಲಿದೆ’ ಎಂದು ತಿಳಿಸಿದ್ದಾರೆ.</p><p>ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಳ್ಳಿಗಳಿಗೆ ಸರಿಯಾದ ಮೂಲಸೌಕರ್ಯ, ವಿದ್ಯುತ್ ಮತ್ತು ರಸ್ತೆಗಳು ಇರಲಿಲ್ಲ. ಆದರೆ, ಬಿಜೆಪಿ ಆಡಳಿತದಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>