<p><strong>ಪ್ರಯಾಗ್ರಾಜ್</strong>: ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಸಾಧ್ಯವಾಗದವರಿಗೆ ಅವರ ಮನೆ ಬಾಗಿಲಿಗೆ ಸಂಗಮದ ಜಲ ವಿತರಿಸಲು ಉತ್ತರ ಪ್ರದೇಶದ ಸರ್ಕಾರ ಮುಂದಾಗಿದೆ.</p><p>ರಾಜ್ಯದ 75 ಜಿಲ್ಲೆಗಳ ಜನರಿಗೆ ಈ ಸಂಗಮದ ನೀರನ್ನು ವಿತರಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತುರ್ತು ಸೇವೆ ಮತ್ತು ಅಗ್ನಿಶಾಮಕ ಇಲಾಖೆಗೆ ಸೂಚಿಸಿದ್ದಾರೆ.</p> .ಮಹಾ ಕುಂಭಮೇಳ ಕಾಲ್ತುಳಿತ: ನ್ಯಾಯಾಂಗ ಆಯೋಗದ ಅಧಿಕಾರ ವ್ಯಾಪ್ತಿ ವಿಸ್ತರಣೆ.ಮಹಾ ಕುಂಭಮೇಳ: ಸಂಗಮದಲ್ಲಿ ಮಿಂದೆದ್ದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ದಂಪತಿ. <p>ಸಂಗಮದಲ್ಲಿ ಸ್ನಾನ ಮಾಡಲು ಆಗದ ಜನರ ಮನೆ ಬಾಗಿಲಿಗೆ ಸಂಗಮದ ಜಲವನ್ನು ವಿತರಿಸಲಾಗವುದು ಎಂದು ಈ ಹಿಂದೆ ಆದಿತ್ಯನಾಥ್ ಜನರಿಗೆ ಭರವಸೆ ನೀಡಿದ್ದರು.</p><p>ಈ ಪ್ರಕ್ರಿಯೆಯು ಇಂದಿನಿಂದ (ಶುಕ್ರವಾರ) ಪ್ರಾರಂಭವಾಗಲಿದ್ದು, ಜನರು ತಮ್ಮ ಮನೆಗಳಲ್ಲಿಯೇ ಗಂಗಾ ಜಲ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p><p>12 ವರ್ಷಗಳ ನಂತರ ನಡೆದ ಮಹಾ ಕುಂಭಮೇಳವು ಜನವರಿ 13 ರಿಂದ ಫೆಬ್ರುವರಿ 26 ರವರೆಗೆ ನಡೆದಿದೆ. ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳಕ್ಕೆ ದೇಶ ಮತ್ತು ವಿದೇಶಗಳಿಂದ ಸುಮಾರು 66 ಕೋಟಿಗೂ ಹೆಚ್ಚು ಜನರು ಆಗಮಿಸಿದ್ದರು ಎಂದು ಸರ್ಕಾರ ತಿಳಿಸಿದೆ.</p>.ಮಹಾ ಕುಂಭಮೇಳ: ಕಾಣೆಯಾದ ತಮ್ಮವರಿಗಾಗಿ ನಿಲ್ಲದ ಹುಡುಕಾಟ.ಮಹಾ ಕುಂಭಮೇಳ ಕಾಲ್ತುಳಿತ: 3 ಕಿ.ಮೀ ದೂರದಲ್ಲಿ ಮತ್ತೊಂದು ಕಾಲ್ತುಳಿತ; 7 ಸಾವು.ಮಹಾ ಕುಂಭಮೇಳ: ಆಹಾರದಲ್ಲಿ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿ ಅಮಾನತು .ಮಹಾ ಕುಂಭಮೇಳ ಕಾಲ್ತುಳಿತ | ಶವಾಗಾರದಲ್ಲಿ ಸುಮಾರು 40 ಮೃತದೇಹಗಳು: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗ್ರಾಜ್</strong>: ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಸಾಧ್ಯವಾಗದವರಿಗೆ ಅವರ ಮನೆ ಬಾಗಿಲಿಗೆ ಸಂಗಮದ ಜಲ ವಿತರಿಸಲು ಉತ್ತರ ಪ್ರದೇಶದ ಸರ್ಕಾರ ಮುಂದಾಗಿದೆ.</p><p>ರಾಜ್ಯದ 75 ಜಿಲ್ಲೆಗಳ ಜನರಿಗೆ ಈ ಸಂಗಮದ ನೀರನ್ನು ವಿತರಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತುರ್ತು ಸೇವೆ ಮತ್ತು ಅಗ್ನಿಶಾಮಕ ಇಲಾಖೆಗೆ ಸೂಚಿಸಿದ್ದಾರೆ.</p> .ಮಹಾ ಕುಂಭಮೇಳ ಕಾಲ್ತುಳಿತ: ನ್ಯಾಯಾಂಗ ಆಯೋಗದ ಅಧಿಕಾರ ವ್ಯಾಪ್ತಿ ವಿಸ್ತರಣೆ.ಮಹಾ ಕುಂಭಮೇಳ: ಸಂಗಮದಲ್ಲಿ ಮಿಂದೆದ್ದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ದಂಪತಿ. <p>ಸಂಗಮದಲ್ಲಿ ಸ್ನಾನ ಮಾಡಲು ಆಗದ ಜನರ ಮನೆ ಬಾಗಿಲಿಗೆ ಸಂಗಮದ ಜಲವನ್ನು ವಿತರಿಸಲಾಗವುದು ಎಂದು ಈ ಹಿಂದೆ ಆದಿತ್ಯನಾಥ್ ಜನರಿಗೆ ಭರವಸೆ ನೀಡಿದ್ದರು.</p><p>ಈ ಪ್ರಕ್ರಿಯೆಯು ಇಂದಿನಿಂದ (ಶುಕ್ರವಾರ) ಪ್ರಾರಂಭವಾಗಲಿದ್ದು, ಜನರು ತಮ್ಮ ಮನೆಗಳಲ್ಲಿಯೇ ಗಂಗಾ ಜಲ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.</p><p>12 ವರ್ಷಗಳ ನಂತರ ನಡೆದ ಮಹಾ ಕುಂಭಮೇಳವು ಜನವರಿ 13 ರಿಂದ ಫೆಬ್ರುವರಿ 26 ರವರೆಗೆ ನಡೆದಿದೆ. ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳಕ್ಕೆ ದೇಶ ಮತ್ತು ವಿದೇಶಗಳಿಂದ ಸುಮಾರು 66 ಕೋಟಿಗೂ ಹೆಚ್ಚು ಜನರು ಆಗಮಿಸಿದ್ದರು ಎಂದು ಸರ್ಕಾರ ತಿಳಿಸಿದೆ.</p>.ಮಹಾ ಕುಂಭಮೇಳ: ಕಾಣೆಯಾದ ತಮ್ಮವರಿಗಾಗಿ ನಿಲ್ಲದ ಹುಡುಕಾಟ.ಮಹಾ ಕುಂಭಮೇಳ ಕಾಲ್ತುಳಿತ: 3 ಕಿ.ಮೀ ದೂರದಲ್ಲಿ ಮತ್ತೊಂದು ಕಾಲ್ತುಳಿತ; 7 ಸಾವು.ಮಹಾ ಕುಂಭಮೇಳ: ಆಹಾರದಲ್ಲಿ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿ ಅಮಾನತು .ಮಹಾ ಕುಂಭಮೇಳ ಕಾಲ್ತುಳಿತ | ಶವಾಗಾರದಲ್ಲಿ ಸುಮಾರು 40 ಮೃತದೇಹಗಳು: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>