<p><strong>ಇಸ್ಲಾಮಾಬಾದ್:</strong> ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಬಲಗಣ್ಣಿನ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎಂದು ಅವರ ವಕೀಲರು ಮತ್ತು ಕುಟುಂಬದವರು ತಿಳಿಸಿದ್ದಾರೆ.</p>.<p>ಖಾನ್ ಅವರು 2023ರಿಂದಲೂ ಜೈಲಿನಲ್ಲಿದ್ದು, ಈ ಬೆಳವಣಿಗೆಯು ಅವರ ಆರೋಗ್ಯದ ಬಗ್ಗೆ ಕಳವಳ ಸೃಷ್ಟಿಸಿದೆ.</p>.<p>ಸುಪ್ರೀಂ ಕೋರ್ಟ್ನ ಸೂಚನೆಯಂತೆ ವಕೀಲ ಸಲ್ಮಾನ್ ಸಫ್ದರ್ ಅವರು ಇಮ್ರಾನ್ ಅವರನ್ನು ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಮ್ರಾನ್ ಭೇಟಿ ಬಳಿಕ ಸಲ್ಮಾನ್ ಅವರು ಸುಪ್ರೀಂ ಕೋರ್ಟ್ಗೆ ವರದಿಯೊಂದನ್ನು ಸಲ್ಲಿಸಿದ್ದಾರೆ. ಅದರಲ್ಲಿ ತಮ್ಮ ಕಕ್ಷಿದಾರನಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು ಎಂದು ಕೋರಿದ್ದಾರೆ.</p>.<p>‘ಮಾಜಿ ಪ್ರಧಾನಿಯ ಬಲಗಣ್ಣು ಕೇವಲ ಶೇ 15ರಷ್ಟು ದೃಷ್ಟಿಯ ಸಾಮರ್ಥ್ಯವನ್ನು ಹೊಂದಿದೆ’ ಎಂದು ಸಫ್ದರ್ ಅವರು ಇಸ್ಲಾಮಾಬಾದ್ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ವೈದ್ಯಕೀಯ ನಿರ್ಲಕ್ಷ್ಯದಿಂದಲೇ ನಮ್ಮ ತಂದೆಯವರ ಕಣ್ಣಿನ ದೃಷ್ಟಿ ಹೋಗಿದೆ’ ಎಂದು ಇಮ್ರಾನ್ ಪುತ್ರ ಕಾಸಿಮ್ ಖಾನ್ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಬಲಗಣ್ಣಿನ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎಂದು ಅವರ ವಕೀಲರು ಮತ್ತು ಕುಟುಂಬದವರು ತಿಳಿಸಿದ್ದಾರೆ.</p>.<p>ಖಾನ್ ಅವರು 2023ರಿಂದಲೂ ಜೈಲಿನಲ್ಲಿದ್ದು, ಈ ಬೆಳವಣಿಗೆಯು ಅವರ ಆರೋಗ್ಯದ ಬಗ್ಗೆ ಕಳವಳ ಸೃಷ್ಟಿಸಿದೆ.</p>.<p>ಸುಪ್ರೀಂ ಕೋರ್ಟ್ನ ಸೂಚನೆಯಂತೆ ವಕೀಲ ಸಲ್ಮಾನ್ ಸಫ್ದರ್ ಅವರು ಇಮ್ರಾನ್ ಅವರನ್ನು ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಮ್ರಾನ್ ಭೇಟಿ ಬಳಿಕ ಸಲ್ಮಾನ್ ಅವರು ಸುಪ್ರೀಂ ಕೋರ್ಟ್ಗೆ ವರದಿಯೊಂದನ್ನು ಸಲ್ಲಿಸಿದ್ದಾರೆ. ಅದರಲ್ಲಿ ತಮ್ಮ ಕಕ್ಷಿದಾರನಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು ಎಂದು ಕೋರಿದ್ದಾರೆ.</p>.<p>‘ಮಾಜಿ ಪ್ರಧಾನಿಯ ಬಲಗಣ್ಣು ಕೇವಲ ಶೇ 15ರಷ್ಟು ದೃಷ್ಟಿಯ ಸಾಮರ್ಥ್ಯವನ್ನು ಹೊಂದಿದೆ’ ಎಂದು ಸಫ್ದರ್ ಅವರು ಇಸ್ಲಾಮಾಬಾದ್ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ವೈದ್ಯಕೀಯ ನಿರ್ಲಕ್ಷ್ಯದಿಂದಲೇ ನಮ್ಮ ತಂದೆಯವರ ಕಣ್ಣಿನ ದೃಷ್ಟಿ ಹೋಗಿದೆ’ ಎಂದು ಇಮ್ರಾನ್ ಪುತ್ರ ಕಾಸಿಮ್ ಖಾನ್ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>