<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಬಾಡಿಗೆದಾರರಿಗೂ ಉಚಿತ ವಿದ್ಯುತ್, ನೀರಿನ ಯೋಜನೆಗಳನ್ನು ವಿಸ್ತರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಎಲ್ಲಿಗೆ ಹೋದರೂ, ಬಾಡಿಗೆದಾರರನ್ನು ಭೇಟಿಯಾಗುತ್ತೇನೆ. ಅವರು ಉತ್ತಮ ಶಾಲೆಗಳು ಮತ್ತು ಆಸ್ಪತ್ರೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ಉಚಿತ ವಿದ್ಯುತ್ ಮತ್ತು ನೀರಿನ ಯೋಜನೆಗಳಿಂದ ವಂಚಿತರಾಗಿದ್ದಾರೆ’ ಎಂದು ಅವರು ಹೇಳಿದರು.</p><p>‘ಚುನಾವಣೆ ನಂತರ ಪೂರ್ವಾಂಚಲ ಪ್ರದೇಶಕ್ಕೆ ಸೇರಿದ ಅನೇಕ ಬಾಡಿಗೆದಾರರೂ ಉಚಿತ ವಿದ್ಯುತ್ ಮತ್ತು ನೀರಿನ ಪ್ರಯೋಜನಗಳನ್ನು ಪಡೆಯಲಿದ್ದಾರೆ ಎಂಬುದನ್ನು ನಾವು ಖಾತ್ರಿಪಡಿಸುತ್ತೇವೆ’ ಎಂದು ಹೇಳಿದ್ದಾರೆ. </p><p>ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ನೀಡಲಾಗುವುದು. ವಿದ್ಯಾರ್ಥಿನಿಯರಿಗೆ ಈಗಾಗಲೇ ಈ ಸೌಲಭ್ಯವಿದೆ ಎಂದು ಎಎಪಿ ಶುಕ್ರವಾರ ಹೇಳಿತ್ತು.</p><p>ಎಲ್ಲ ವಿದ್ಯಾರ್ಥಿಗಳಿಗೆ ಮೆಟ್ರೊ ಪ್ರಯಾಣ ದರದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲು ಅನುಮತಿ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿಯೂ ಎಎಪಿ ಹೇಳಿತ್ತು.</p><p>‘ಮೆಟ್ರೊ ಪ್ರಯಾಣ ದರ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ. ಆದ್ದರಿಂದ ಪ್ರಧಾನಿಗೆ ಮನವಿ ಮಾಡಿದ್ದೇನೆ. ಈ ಯೋಜನೆಗೆ ಬೇಕಾದ ಅರ್ಧದಷ್ಟು ಹಣವನ್ನು ಭರಿಸಲು ಸಿದ್ಧರಿದ್ದೇವೆ’ ಎಂದು ಕೇಜ್ರಿವಾಲ್ ಹೇಳಿದ್ದರು.</p><p>ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ಚುನಾವಣೆಯಲ್ಲಿ ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಬಾಡಿಗೆದಾರರಿಗೂ ಉಚಿತ ವಿದ್ಯುತ್, ನೀರಿನ ಯೋಜನೆಗಳನ್ನು ವಿಸ್ತರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಎಲ್ಲಿಗೆ ಹೋದರೂ, ಬಾಡಿಗೆದಾರರನ್ನು ಭೇಟಿಯಾಗುತ್ತೇನೆ. ಅವರು ಉತ್ತಮ ಶಾಲೆಗಳು ಮತ್ತು ಆಸ್ಪತ್ರೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ಉಚಿತ ವಿದ್ಯುತ್ ಮತ್ತು ನೀರಿನ ಯೋಜನೆಗಳಿಂದ ವಂಚಿತರಾಗಿದ್ದಾರೆ’ ಎಂದು ಅವರು ಹೇಳಿದರು.</p><p>‘ಚುನಾವಣೆ ನಂತರ ಪೂರ್ವಾಂಚಲ ಪ್ರದೇಶಕ್ಕೆ ಸೇರಿದ ಅನೇಕ ಬಾಡಿಗೆದಾರರೂ ಉಚಿತ ವಿದ್ಯುತ್ ಮತ್ತು ನೀರಿನ ಪ್ರಯೋಜನಗಳನ್ನು ಪಡೆಯಲಿದ್ದಾರೆ ಎಂಬುದನ್ನು ನಾವು ಖಾತ್ರಿಪಡಿಸುತ್ತೇವೆ’ ಎಂದು ಹೇಳಿದ್ದಾರೆ. </p><p>ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ನೀಡಲಾಗುವುದು. ವಿದ್ಯಾರ್ಥಿನಿಯರಿಗೆ ಈಗಾಗಲೇ ಈ ಸೌಲಭ್ಯವಿದೆ ಎಂದು ಎಎಪಿ ಶುಕ್ರವಾರ ಹೇಳಿತ್ತು.</p><p>ಎಲ್ಲ ವಿದ್ಯಾರ್ಥಿಗಳಿಗೆ ಮೆಟ್ರೊ ಪ್ರಯಾಣ ದರದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲು ಅನುಮತಿ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿಯೂ ಎಎಪಿ ಹೇಳಿತ್ತು.</p><p>‘ಮೆಟ್ರೊ ಪ್ರಯಾಣ ದರ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ. ಆದ್ದರಿಂದ ಪ್ರಧಾನಿಗೆ ಮನವಿ ಮಾಡಿದ್ದೇನೆ. ಈ ಯೋಜನೆಗೆ ಬೇಕಾದ ಅರ್ಧದಷ್ಟು ಹಣವನ್ನು ಭರಿಸಲು ಸಿದ್ಧರಿದ್ದೇವೆ’ ಎಂದು ಕೇಜ್ರಿವಾಲ್ ಹೇಳಿದ್ದರು.</p><p>ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ಚುನಾವಣೆಯಲ್ಲಿ ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>