<p><strong>ನವದೆಹಲಿ:</strong> ಕೆನಡಾದ ನೂತನ ಪ್ರಧಾನಿ ಮಾರ್ಕ್ ಕಾರ್ನಿ ಅವರ ಆಹ್ವಾನ ಮೇರೆಗೆ ಜಿ7 ರಾಷ್ಟ್ರಗಳ ಶೃಂಗದಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.</p><p>ಜೂನ್ ತಿಂಗಳಲ್ಲಿ ಜಿ7 ರಾಷ್ಟ್ರಗಳ ನಾಯಕರ ಶೃಂಗಸಭೆ ಆಯೋಜನೆಗೊಂಡಿದ್ದು, ಕೆನಡಾ ಅದರ ಆತಿಥ್ಯ ವಹಿಸಿಕೊಂಡಿದೆ. ಕನಾನಸ್ಕಿಸ್ನಲ್ಲಿ ನಡೆಯಲಿರುವ ಶೃಂಗದಲ್ಲಿ ಪಾಲ್ಗೊಳ್ಳುವಂತೆ ಕಾರ್ನಿ ಅವರು ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಈ ವಿಷಯವನ್ನು ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.</p><p>‘ಪ್ರಜಾಪ್ರಭುತ್ವದಲ್ಲಿ ಆಳವಾದ ನಂಬಿಕೆಯುಳ್ಳ ರಾಷ್ಟ್ರಗಳಾದ ಭಾರತ ಮತ್ತು ಕೆನಡಾ ಸಂಬಂಧಗಳು ಉಭಯ ರಾಷ್ಟ್ರಗಳ ಜನರ ಆಳವಾದ ಸಂಬಂಧಗಳೊಂದಿಗೆ ಬೆಳೆದಿದೆ. ಪರಸ್ಪರ ಗೌರವ ಮತ್ತು ಸಮಾನ ಆಸಕ್ತಿಗಳನ್ನು ಹಂಚಿಕೊಳ್ಳುವ ಮೂಲಕ ಎರಡೂ ರಾಷ್ಟ್ರಗಳು ಜತೆಗೂಡಿ ಕೆಲಸ ಮಾಡಲಿವೆ. ಶೃಂಗದಲ್ಲಿ ಪಾಲ್ಗೊಳ್ಳಲು ಉತ್ಸುಕನಾಗಿದ್ದೇನೆ’ ಎಂದಿದ್ದಾರೆ.</p><p>ಹಿಂದಿನ ಪ್ರಧಾನಿ ಜಸ್ಟಿನ್ ಟ್ರೂಡ್ ಅವರ ಆಡಳಿತದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ವಿಷಯದಲ್ಲಿ ಭಾರತ ಮತ್ತು ಕೆನಡಾ ಸಂಬಂಧ ಹಳಸಿತ್ತು. ಕಾರ್ನಿ ಅವರ ಇತ್ತೀಚಿನ ಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. </p><p>ಇದರ ಬೆನ್ನಲ್ಲೇ ಏಳು ರಾಷ್ಟ್ರಗಳ ಮುಖಂಡರನ್ನು ಒಳಗೊಂಡ ಜಿ7 ಶೃಂಗಕ್ಕೆ ಭಾರತವನ್ನು ಆಹ್ವಾನಿಸುವ ಕ್ರಮವನ್ನು ಕೆನಡಾ ತೆಗೆದುಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆನಡಾದ ನೂತನ ಪ್ರಧಾನಿ ಮಾರ್ಕ್ ಕಾರ್ನಿ ಅವರ ಆಹ್ವಾನ ಮೇರೆಗೆ ಜಿ7 ರಾಷ್ಟ್ರಗಳ ಶೃಂಗದಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.</p><p>ಜೂನ್ ತಿಂಗಳಲ್ಲಿ ಜಿ7 ರಾಷ್ಟ್ರಗಳ ನಾಯಕರ ಶೃಂಗಸಭೆ ಆಯೋಜನೆಗೊಂಡಿದ್ದು, ಕೆನಡಾ ಅದರ ಆತಿಥ್ಯ ವಹಿಸಿಕೊಂಡಿದೆ. ಕನಾನಸ್ಕಿಸ್ನಲ್ಲಿ ನಡೆಯಲಿರುವ ಶೃಂಗದಲ್ಲಿ ಪಾಲ್ಗೊಳ್ಳುವಂತೆ ಕಾರ್ನಿ ಅವರು ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಈ ವಿಷಯವನ್ನು ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.</p><p>‘ಪ್ರಜಾಪ್ರಭುತ್ವದಲ್ಲಿ ಆಳವಾದ ನಂಬಿಕೆಯುಳ್ಳ ರಾಷ್ಟ್ರಗಳಾದ ಭಾರತ ಮತ್ತು ಕೆನಡಾ ಸಂಬಂಧಗಳು ಉಭಯ ರಾಷ್ಟ್ರಗಳ ಜನರ ಆಳವಾದ ಸಂಬಂಧಗಳೊಂದಿಗೆ ಬೆಳೆದಿದೆ. ಪರಸ್ಪರ ಗೌರವ ಮತ್ತು ಸಮಾನ ಆಸಕ್ತಿಗಳನ್ನು ಹಂಚಿಕೊಳ್ಳುವ ಮೂಲಕ ಎರಡೂ ರಾಷ್ಟ್ರಗಳು ಜತೆಗೂಡಿ ಕೆಲಸ ಮಾಡಲಿವೆ. ಶೃಂಗದಲ್ಲಿ ಪಾಲ್ಗೊಳ್ಳಲು ಉತ್ಸುಕನಾಗಿದ್ದೇನೆ’ ಎಂದಿದ್ದಾರೆ.</p><p>ಹಿಂದಿನ ಪ್ರಧಾನಿ ಜಸ್ಟಿನ್ ಟ್ರೂಡ್ ಅವರ ಆಡಳಿತದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ವಿಷಯದಲ್ಲಿ ಭಾರತ ಮತ್ತು ಕೆನಡಾ ಸಂಬಂಧ ಹಳಸಿತ್ತು. ಕಾರ್ನಿ ಅವರ ಇತ್ತೀಚಿನ ಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. </p><p>ಇದರ ಬೆನ್ನಲ್ಲೇ ಏಳು ರಾಷ್ಟ್ರಗಳ ಮುಖಂಡರನ್ನು ಒಳಗೊಂಡ ಜಿ7 ಶೃಂಗಕ್ಕೆ ಭಾರತವನ್ನು ಆಹ್ವಾನಿಸುವ ಕ್ರಮವನ್ನು ಕೆನಡಾ ತೆಗೆದುಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>