<p><strong>ಮುಂಬೈ</strong>: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆ ಕುರಿತು ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಹಾಸ್ಯನಟ ಕುನಾಲ್ ಕಾಮ್ರಾ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.</p><p>ಏಪ್ರಿಲ್ 5ರಂದು ಕಾಮ್ರಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p><p>ತಮ್ಮ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ದೂರುಗಳು, ಮೂಲಭೂತ ಹಕ್ಕುಗಳಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ಕಾಮ್ರಾ ಅರ್ಜಿಯಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.</p>.ಟ್ರಂಪ್ ತೆರಿಗೆ | ಜಾಗತಿಕ ಮಾರುಕಟ್ಟೆ ತತ್ತರ: ಸೆನ್ಸೆಕ್ಸ್, ನಿಫ್ಟಿ ಮಹಾ ಕುಸಿತ.ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಕೆ: ಕೇಂದ್ರ, ಕರ್ನಾಟಕಕ್ಕೆ ಬಾಂಬೆ HC ನೋಟಿಸ್. <p>ಈ ಅರ್ಜಿಯ ವಿಚಾರಣೆಯು ಏಪ್ರಿಲ್ 8ರಂದು ನಡೆಯುವ ಸಾಧ್ಯತೆ ಇದೆ. </p><p>ವಿಚಾರಣೆಗೆ ಹಾಜರಾಗುವಂತೆ ಮೂರು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಕಾಮ್ರಾ ಇದುವರೆಗೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿಲ್ಲ ಎಂದು ಅಧಿಕಾರಿಗಳು ತಿಳಿದ್ದಾರೆ.</p><p>36 ವರ್ಷದ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಈಚೆಗೆ ಕಾರ್ಯಕ್ರಮವೊಂದರಲ್ಲಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕರೆಯುವ ಮೂಲಕ ರಾಜಕೀಯ ವೃತ್ತಿಜೀವನವನ್ನು ಟೀಕಿಸಿದ್ದರು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು.</p><p>ಕಾಮ್ರಾ ಅವರ ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ದಾಂದಲೆ ನಡೆಸಿದ ಆರೋಪದ ಅಡಿ ಪೊಲೀಸರು ಶಿವಸೇನಾ ಪದಾಧಿಕಾರಿ ರಾಹುಲ್ ಕನಲ್ ಸೇರಿ ಇತರರನ್ನು ಬಂಧಿಸಿದ್ದರು.</p>.ತಾಯಿಯಾದವಳು ತನ್ನ ಮಕ್ಕಳಿಗೆ ಹೊಡೆಯಲ್ಲ: ಬಾಂಬೆ ಹೈಕೋರ್ಟ್.ಸಲ್ಮಾನ್ ಖಾನ್ ಹತ್ಯೆಗೆ ಸಂಚು; ಬಂಧಿತ ಇಬ್ಬರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್.ವಿಚಾರಣೆ ಇಲ್ಲದ ಜೈಲುವಾಸ ಜೀವಿಸುವ ಹಕ್ಕಿನ ಉಲ್ಲಂಘನೆಗೆ ಸಮ: ಬಾಂಬೆ ಹೈಕೋರ್ಟ್.ಟಿಪ್ಪು ಜನ್ಮ ದಿನಾಚರಣೆಗೆ ನಿಷೇಧವಿದೆಯೇ: ಬಾಂಬೆ ಹೈಕೋರ್ಟ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆ ಕುರಿತು ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಹಾಸ್ಯನಟ ಕುನಾಲ್ ಕಾಮ್ರಾ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.</p><p>ಏಪ್ರಿಲ್ 5ರಂದು ಕಾಮ್ರಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p><p>ತಮ್ಮ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ದೂರುಗಳು, ಮೂಲಭೂತ ಹಕ್ಕುಗಳಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ಕಾಮ್ರಾ ಅರ್ಜಿಯಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.</p>.ಟ್ರಂಪ್ ತೆರಿಗೆ | ಜಾಗತಿಕ ಮಾರುಕಟ್ಟೆ ತತ್ತರ: ಸೆನ್ಸೆಕ್ಸ್, ನಿಫ್ಟಿ ಮಹಾ ಕುಸಿತ.ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಕೆ: ಕೇಂದ್ರ, ಕರ್ನಾಟಕಕ್ಕೆ ಬಾಂಬೆ HC ನೋಟಿಸ್. <p>ಈ ಅರ್ಜಿಯ ವಿಚಾರಣೆಯು ಏಪ್ರಿಲ್ 8ರಂದು ನಡೆಯುವ ಸಾಧ್ಯತೆ ಇದೆ. </p><p>ವಿಚಾರಣೆಗೆ ಹಾಜರಾಗುವಂತೆ ಮೂರು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಕಾಮ್ರಾ ಇದುವರೆಗೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿಲ್ಲ ಎಂದು ಅಧಿಕಾರಿಗಳು ತಿಳಿದ್ದಾರೆ.</p><p>36 ವರ್ಷದ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಈಚೆಗೆ ಕಾರ್ಯಕ್ರಮವೊಂದರಲ್ಲಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕರೆಯುವ ಮೂಲಕ ರಾಜಕೀಯ ವೃತ್ತಿಜೀವನವನ್ನು ಟೀಕಿಸಿದ್ದರು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು.</p><p>ಕಾಮ್ರಾ ಅವರ ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ದಾಂದಲೆ ನಡೆಸಿದ ಆರೋಪದ ಅಡಿ ಪೊಲೀಸರು ಶಿವಸೇನಾ ಪದಾಧಿಕಾರಿ ರಾಹುಲ್ ಕನಲ್ ಸೇರಿ ಇತರರನ್ನು ಬಂಧಿಸಿದ್ದರು.</p>.ತಾಯಿಯಾದವಳು ತನ್ನ ಮಕ್ಕಳಿಗೆ ಹೊಡೆಯಲ್ಲ: ಬಾಂಬೆ ಹೈಕೋರ್ಟ್.ಸಲ್ಮಾನ್ ಖಾನ್ ಹತ್ಯೆಗೆ ಸಂಚು; ಬಂಧಿತ ಇಬ್ಬರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್.ವಿಚಾರಣೆ ಇಲ್ಲದ ಜೈಲುವಾಸ ಜೀವಿಸುವ ಹಕ್ಕಿನ ಉಲ್ಲಂಘನೆಗೆ ಸಮ: ಬಾಂಬೆ ಹೈಕೋರ್ಟ್.ಟಿಪ್ಪು ಜನ್ಮ ದಿನಾಚರಣೆಗೆ ನಿಷೇಧವಿದೆಯೇ: ಬಾಂಬೆ ಹೈಕೋರ್ಟ್ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>