<p><strong>ಮುಂಬೈ</strong>: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪಾಂಗಾರಕರ್, ಮಹಾರಾಷ್ಟ್ರದ ಜಾಲ್ನಾ ನಗರ ಪಾಲಿಕೆ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಮತ ಎಣಿಕೆ ಶುಕ್ರವಾರ ನಡೆಯಿತು.</p><p>ಅವರು ವಾರ್ಡ್ ನಂ.13ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿಯ ಅಭ್ಯರ್ಥಿ ಸಮೀಪದ ಪ್ರತಿಸ್ಪರ್ಧಿಯಾಗಿದ್ದರು. ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ. </p><p>ನಾಲಾಸೋಪಾರದಲ್ಲಿ ಶಸ್ತ್ರಾಸ್ತ್ರ ಸಿಕ್ಕಿದ್ದ ಪ್ರಕರಣದಲ್ಲಿಯೂ ಪಾಂಗಾರಕರ್ ಆರೋಪಿಯಾಗಿದ್ದಾರೆ. </p><p>ಪಾಂಗಾರಕರ್ ಅವರಿಗೆ ಕರ್ನಾಟಕ ಹೈಕೋರ್ಟ್ 2024ರ ಸೆಪ್ಟೆಂಬರ್ 4ರಂದು ಜಾಮೀನು ನೀಡಿತ್ತು. ಅದೇ ವರ್ಷ ಅಕ್ಟೋಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುವುದಕ್ಕೂ ಮುನ್ನ ಪಾಂಗಾರಕರ್ ಶಿವಸೇನಾ ಸೇರಿದ್ದರು. ಬಳಿಕ ಅವರನ್ನು ಜಾಲ್ನಾ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.</p><p>ಈ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾದ ಕಾರಣ, ಆಗ ಮುಖ್ಯಮಂತ್ರಿಯಾಗಿದ್ದ ಏಕನಾಥ ಶಿಂದೆ ಅವರು, ಪಾಂಗಾರಕರ್ ನೇಮಕವನ್ನು ರದ್ದು ಮಾಡಿದ್ದರು.</p><p>ನಾಲಾಸೋಪಾರದಲ್ಲಿ ಕಚ್ಚಾಬಾಂಬ್ಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಾಂಗಾರಕರ್ ಅವರನ್ನು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್) 2018ರಲ್ಲಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಕೂಡ ಅವರು ಜಾಮೀನು ಪಡೆದುಕೊಂಡಿದ್ದಾರೆ.</p><p><strong>ವಿಜಯೋತ್ಸವ:</strong> ಪಾಂಗಾರಕರ್ ಜಯ ಗಳಿಸಿರುವ ಕುರಿತ ಘೋಷಣೆ ಹೊರ ಬೀಳುತ್ತಿದ್ದಂತೆಯೇ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.</p><p>ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ್ದ ಅವರು,‘ಈ ಚುನಾವಣೆ ಹಾಗೂ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೂ ಸಂಬಂಧ ಇಲ್ಲ’ ಎಂದು ಹೇಳಿದ್ದರು.</p><p>‘ತನಿಖಾ ಸಂಸ್ಥೆಗಳಿಗೆ ನನ್ನ ಬಗ್ಗೆ ತಪ್ಪು ತಿಳಿವಳಿಕೆ ಇರಬಹುದು. ಈ ಬಗ್ಗೆ ಕೋರ್ಟ್ ನಿರ್ಧರಿಸಲಿದೆ’ ಎಂದಿದ್ದರು.</p><p>‘ಈ ಚುನಾವಣೆಗೂ ಹಾಗೂ ಆ ವಿಚಾರಕ್ಕೂ(ಗೌರಿ ಲಂಕೇಶ್ ಕೊಲೆ ಪ್ರಕರಣ) ಸಂಬಂಧ ಇಲ್ಲ. ಆ ಪ್ರಕರಣ ಕರ್ನಾಟಕಕ್ಕೆ ಸಂಬಂಧಪಟ್ಟಿದ್ದು. ನಾನು ನೂರಕ್ಕೆ ನೂರರಷ್ಟು ನಿರಪರಾಧಿ. ಹೀಗಾಗಿ ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ’ ಎಂದೂ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪಾಂಗಾರಕರ್, ಮಹಾರಾಷ್ಟ್ರದ ಜಾಲ್ನಾ ನಗರ ಪಾಲಿಕೆ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಮತ ಎಣಿಕೆ ಶುಕ್ರವಾರ ನಡೆಯಿತು.</p><p>ಅವರು ವಾರ್ಡ್ ನಂ.13ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿಯ ಅಭ್ಯರ್ಥಿ ಸಮೀಪದ ಪ್ರತಿಸ್ಪರ್ಧಿಯಾಗಿದ್ದರು. ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ. </p><p>ನಾಲಾಸೋಪಾರದಲ್ಲಿ ಶಸ್ತ್ರಾಸ್ತ್ರ ಸಿಕ್ಕಿದ್ದ ಪ್ರಕರಣದಲ್ಲಿಯೂ ಪಾಂಗಾರಕರ್ ಆರೋಪಿಯಾಗಿದ್ದಾರೆ. </p><p>ಪಾಂಗಾರಕರ್ ಅವರಿಗೆ ಕರ್ನಾಟಕ ಹೈಕೋರ್ಟ್ 2024ರ ಸೆಪ್ಟೆಂಬರ್ 4ರಂದು ಜಾಮೀನು ನೀಡಿತ್ತು. ಅದೇ ವರ್ಷ ಅಕ್ಟೋಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುವುದಕ್ಕೂ ಮುನ್ನ ಪಾಂಗಾರಕರ್ ಶಿವಸೇನಾ ಸೇರಿದ್ದರು. ಬಳಿಕ ಅವರನ್ನು ಜಾಲ್ನಾ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.</p><p>ಈ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾದ ಕಾರಣ, ಆಗ ಮುಖ್ಯಮಂತ್ರಿಯಾಗಿದ್ದ ಏಕನಾಥ ಶಿಂದೆ ಅವರು, ಪಾಂಗಾರಕರ್ ನೇಮಕವನ್ನು ರದ್ದು ಮಾಡಿದ್ದರು.</p><p>ನಾಲಾಸೋಪಾರದಲ್ಲಿ ಕಚ್ಚಾಬಾಂಬ್ಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಾಂಗಾರಕರ್ ಅವರನ್ನು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್) 2018ರಲ್ಲಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಕೂಡ ಅವರು ಜಾಮೀನು ಪಡೆದುಕೊಂಡಿದ್ದಾರೆ.</p><p><strong>ವಿಜಯೋತ್ಸವ:</strong> ಪಾಂಗಾರಕರ್ ಜಯ ಗಳಿಸಿರುವ ಕುರಿತ ಘೋಷಣೆ ಹೊರ ಬೀಳುತ್ತಿದ್ದಂತೆಯೇ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.</p><p>ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ್ದ ಅವರು,‘ಈ ಚುನಾವಣೆ ಹಾಗೂ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೂ ಸಂಬಂಧ ಇಲ್ಲ’ ಎಂದು ಹೇಳಿದ್ದರು.</p><p>‘ತನಿಖಾ ಸಂಸ್ಥೆಗಳಿಗೆ ನನ್ನ ಬಗ್ಗೆ ತಪ್ಪು ತಿಳಿವಳಿಕೆ ಇರಬಹುದು. ಈ ಬಗ್ಗೆ ಕೋರ್ಟ್ ನಿರ್ಧರಿಸಲಿದೆ’ ಎಂದಿದ್ದರು.</p><p>‘ಈ ಚುನಾವಣೆಗೂ ಹಾಗೂ ಆ ವಿಚಾರಕ್ಕೂ(ಗೌರಿ ಲಂಕೇಶ್ ಕೊಲೆ ಪ್ರಕರಣ) ಸಂಬಂಧ ಇಲ್ಲ. ಆ ಪ್ರಕರಣ ಕರ್ನಾಟಕಕ್ಕೆ ಸಂಬಂಧಪಟ್ಟಿದ್ದು. ನಾನು ನೂರಕ್ಕೆ ನೂರರಷ್ಟು ನಿರಪರಾಧಿ. ಹೀಗಾಗಿ ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ’ ಎಂದೂ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>