<p><strong>ಅಹಮದಾಬಾದ್:</strong> ಮಹಾತ್ಮ ಗಾಂಧಿ ಅವರ ಸಂದೇಶಗಳು ಇಂದಿನ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗಿದೆ ಎಂದು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಸೋಮವಾರ ಹೇಳಿದ್ದಾರೆ. </p><p>ಫ್ರೆಡ್ರಿಕ್ ಮೆರ್ಜ್ ಅವರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಬರಮತಿ ಆಶ್ರಮಕ್ಕೆ ಆಗಮಿಸಿದ ಅವರನ್ನು ಪ್ರಧಾನಿ ಮೋದಿ ಅವರು ಸ್ವಾಗತಿಸಿದರು.</p><p>ಗಾಂಧಿ ಅವರ ಪರಂಪರೆಯು ಭಾರತ ಮತ್ತು ಜರ್ಮನ್ ದೇಶಗಳ ಬಾಂಧವ್ಯವನ್ನು ಗಟ್ಟಿಗೊಳಿಸಿದ್ದು, ಎರಡೂ ದೇಶಗಳು ಸ್ನೇಹದಿಂದ ಇರುವಂತೆ ಮಾಡಿದೆ ಎಂದು ಹೇಳಿದ್ದಾರೆ. </p><p>‘ಮಹಾತ್ಮ ಗಾಂಧಿ ಅವರ ಹೋರಾಟ ಹಾಗೂ ವ್ಯಕ್ತಿತ್ವವು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಜಗತ್ತಿಗೆ ಈಗಲೂ ಅವರ ಸಂದೇಶಗಳ ಅವಶ್ಯಕತೆಯಿದೆ’ ಎಂದು ಸಬರಮತಿ ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ. </p><p>ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಫ್ರೆಡ್ರಿಕ್ ಮೆರ್ಜ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿದರು. ಚರಕದ ಮೂಲಕ ಖಾದಿ ನೂಲುವುದನ್ನು ಗಮನಿಸಿದರು. </p>
<p><strong>ಅಹಮದಾಬಾದ್:</strong> ಮಹಾತ್ಮ ಗಾಂಧಿ ಅವರ ಸಂದೇಶಗಳು ಇಂದಿನ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗಿದೆ ಎಂದು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಸೋಮವಾರ ಹೇಳಿದ್ದಾರೆ. </p><p>ಫ್ರೆಡ್ರಿಕ್ ಮೆರ್ಜ್ ಅವರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಬರಮತಿ ಆಶ್ರಮಕ್ಕೆ ಆಗಮಿಸಿದ ಅವರನ್ನು ಪ್ರಧಾನಿ ಮೋದಿ ಅವರು ಸ್ವಾಗತಿಸಿದರು.</p><p>ಗಾಂಧಿ ಅವರ ಪರಂಪರೆಯು ಭಾರತ ಮತ್ತು ಜರ್ಮನ್ ದೇಶಗಳ ಬಾಂಧವ್ಯವನ್ನು ಗಟ್ಟಿಗೊಳಿಸಿದ್ದು, ಎರಡೂ ದೇಶಗಳು ಸ್ನೇಹದಿಂದ ಇರುವಂತೆ ಮಾಡಿದೆ ಎಂದು ಹೇಳಿದ್ದಾರೆ. </p><p>‘ಮಹಾತ್ಮ ಗಾಂಧಿ ಅವರ ಹೋರಾಟ ಹಾಗೂ ವ್ಯಕ್ತಿತ್ವವು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಜಗತ್ತಿಗೆ ಈಗಲೂ ಅವರ ಸಂದೇಶಗಳ ಅವಶ್ಯಕತೆಯಿದೆ’ ಎಂದು ಸಬರಮತಿ ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ. </p><p>ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಫ್ರೆಡ್ರಿಕ್ ಮೆರ್ಜ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿದರು. ಚರಕದ ಮೂಲಕ ಖಾದಿ ನೂಲುವುದನ್ನು ಗಮನಿಸಿದರು. </p>