<p><strong>ನವದೆಹಲಿ:</strong> ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.</p><p>ಯಾವುದೇ ತುರ್ತು ಸಂದರ್ಭದಲ್ಲಿ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಸಿದ್ಧತೆಗಳನ್ನು ಪರಿಶೀಲಿಸಲು ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.</p><p>ದೆಹಲಿಯಾದ್ಯಂತ ಭದ್ರತೆ ಕೈಗೊಳ್ಳಲಾಗಿದ್ದು, ರಾತ್ರಿ ವೇಳೆ ಗಸ್ತು ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಮುಂದಿನ ಆದೇಶದವರೆಗೆ ರಜೆ ತೆಗೆದುಕೊಳ್ಳುವುದನ್ನು ನಿಷೇಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. </p><p>ಎಲ್ಲಾ ವಲಯಗಳ ವಿಶೇಷ ಆಯುಕ್ತರು 15 ಜಿಲ್ಲೆಗಳ ಉಪ ಆಯುಕ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಎಲ್ಲಾ ಡಿಸಿಪಿಗಳು ತಮ್ಮ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಡಿಸಿಪಿಗಳು ಈಗಾಗಲೇ ಎಸಿಪಿಗಳು ಸೇರಿದಂತೆ ಅಧೀನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೆಹಲಿ ಪೊಲೀಸರು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ದೆಹಲಿಯಲ್ಲಿ ಮಾಲ್ಗಳು, ಮಾರುಕಟ್ಟೆಗಳು, ಮೆಟ್ರೊ ನಿಲ್ದಾಣಗಳು, ಹೋಟೆಲ್ಗಳು, ವಸತಿ ಸಮುಚ್ಚಯ, ವಿಮಾನ ನಿಲ್ದಾಣಗಳು ಸೇರಿದಂತೆ ಜನದಟ್ಟಣೆ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಲವಡೆ ತಪಾಸಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. </p><p>ದೆಹಲಿ ನಗರ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಪೊಲೀಸ್ ತಪಾಸಣೆ ಹೆಚ್ಚಿಸಲಾಗಿದ್ದು, ದೆಹಲಿಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.ಭಯೋತ್ಪಾದನೆ ವಿರುದ್ಧವಷ್ಟೇ ಭಾರತ ದಾಳಿ ನಡೆಸಿದೆ: ಜೈಶಂಕರ್.ಪಾಕ್ಗೆ ಆರ್ಥಿಕ ನೆರವು ನೀಡುವ IMF ನಿರ್ಧಾರ ಪರಿಶೀಲಿಸಲು ಭಾರತ ಒತ್ತಾಯ ಸಾಧ್ಯತೆ.ಭಾರತದ ಮೇಲಿನ ಡ್ರೋನ್ ದಾಳಿ ಅಲ್ಲಗಳೆದ ಪಾಕ್: ಆಧಾರರಹಿತ ಆರೋಪ ಎಂದು ವಾದ.India Pakistan Tensions: ಪಾಕ್ನ ಎಫ್–16 ಹೊಡೆದುರುಳಿಸಿದ IAF.India-Pakistan Tensions: ಗಡಿಯಲ್ಲಿ ಸೇನಾ ಸಂಘರ್ಷ ತೀವ್ರ.India-Pakistan tensions: ಅಮೆರಿಕ ಮಧ್ಯಸ್ಥಿಕೆ ನಯವಾಗಿ ತಿರಸ್ಕರಿಸಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.</p><p>ಯಾವುದೇ ತುರ್ತು ಸಂದರ್ಭದಲ್ಲಿ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಸಿದ್ಧತೆಗಳನ್ನು ಪರಿಶೀಲಿಸಲು ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.</p><p>ದೆಹಲಿಯಾದ್ಯಂತ ಭದ್ರತೆ ಕೈಗೊಳ್ಳಲಾಗಿದ್ದು, ರಾತ್ರಿ ವೇಳೆ ಗಸ್ತು ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಮುಂದಿನ ಆದೇಶದವರೆಗೆ ರಜೆ ತೆಗೆದುಕೊಳ್ಳುವುದನ್ನು ನಿಷೇಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. </p><p>ಎಲ್ಲಾ ವಲಯಗಳ ವಿಶೇಷ ಆಯುಕ್ತರು 15 ಜಿಲ್ಲೆಗಳ ಉಪ ಆಯುಕ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಎಲ್ಲಾ ಡಿಸಿಪಿಗಳು ತಮ್ಮ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಡಿಸಿಪಿಗಳು ಈಗಾಗಲೇ ಎಸಿಪಿಗಳು ಸೇರಿದಂತೆ ಅಧೀನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೆಹಲಿ ಪೊಲೀಸರು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ದೆಹಲಿಯಲ್ಲಿ ಮಾಲ್ಗಳು, ಮಾರುಕಟ್ಟೆಗಳು, ಮೆಟ್ರೊ ನಿಲ್ದಾಣಗಳು, ಹೋಟೆಲ್ಗಳು, ವಸತಿ ಸಮುಚ್ಚಯ, ವಿಮಾನ ನಿಲ್ದಾಣಗಳು ಸೇರಿದಂತೆ ಜನದಟ್ಟಣೆ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಲವಡೆ ತಪಾಸಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. </p><p>ದೆಹಲಿ ನಗರ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಪೊಲೀಸ್ ತಪಾಸಣೆ ಹೆಚ್ಚಿಸಲಾಗಿದ್ದು, ದೆಹಲಿಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.ಭಯೋತ್ಪಾದನೆ ವಿರುದ್ಧವಷ್ಟೇ ಭಾರತ ದಾಳಿ ನಡೆಸಿದೆ: ಜೈಶಂಕರ್.ಪಾಕ್ಗೆ ಆರ್ಥಿಕ ನೆರವು ನೀಡುವ IMF ನಿರ್ಧಾರ ಪರಿಶೀಲಿಸಲು ಭಾರತ ಒತ್ತಾಯ ಸಾಧ್ಯತೆ.ಭಾರತದ ಮೇಲಿನ ಡ್ರೋನ್ ದಾಳಿ ಅಲ್ಲಗಳೆದ ಪಾಕ್: ಆಧಾರರಹಿತ ಆರೋಪ ಎಂದು ವಾದ.India Pakistan Tensions: ಪಾಕ್ನ ಎಫ್–16 ಹೊಡೆದುರುಳಿಸಿದ IAF.India-Pakistan Tensions: ಗಡಿಯಲ್ಲಿ ಸೇನಾ ಸಂಘರ್ಷ ತೀವ್ರ.India-Pakistan tensions: ಅಮೆರಿಕ ಮಧ್ಯಸ್ಥಿಕೆ ನಯವಾಗಿ ತಿರಸ್ಕರಿಸಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>