<p><strong>ಶಿಮ್ಲಾ</strong>: ಧೀಡಿರ್ ಭೂಕುಸಿತ ಮತ್ತು ಪ್ರವಾಹದ ಪರಿಣಾಮದಿಂದಾಗಿ ಹಿಮಾಚಲ ಪ್ರದೇಶದದಲ್ಲಿ ಇದುವರೆಗೂ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.</p><p>ಧೀಡಿರ್ ಪ್ರವಾಹ ಮತ್ತು ಭೂಕುಸಿತದ ಪರಿಣಾಮ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಔತ್ ಬಳಿ ಚಂಡೀಗಢ-ಮನಾಲಿ ಹೆದ್ದಾರಿಯಲ್ಲಿ ಕಳೆದ 24 ಗಂಟೆಗಳಿಂದ ಸ್ಥಗಿತಗೊಂಡಿದ್ದ ವಾಹನ ಸಂಚಾರವನ್ನು ಪುನಃ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಾನುವಾರ ಸಂಜೆಯಿಂದಲೇ ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರವಾಸಿಗರು ಸೇರಿದಂತೆ ನೂರಾರು ಪ್ರಯಾಣಿಕರು ಪರದಾಡುವಂತಾಯಿತು.</p><p>ಭೂಕುಸಿತದ ಪರಿಣಾಮದಿಂದ ಮಂಡಿ-ಪಂಡೋಹ್–ಕುಲ್ಲು ಹೆದ್ದಾರಿಯ ಸುಮಾರು 70 ಕಿ.ಮೀ ಖೋಟಿನಲ್ಲಾಹ್ನ 6 ಕಿ.ಮೀ ಮಾರ್ಗವನ್ನು ನಿರ್ಬಂಧಿಸಲಾಗಿದೆ. ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುತ್ತಿದ್ದು, ಜೂನ್ 28 ರಿಂದ ಜುಲೈ 1ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p><p>ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಒಟ್ಟು 301 ರಸ್ತೆಗಳ ಸಂಚಾರ ಸ್ಥಗಿತಗೊಂಡಿದ್ದು, 140 ವಿದ್ಯುತ್ ಪರಿವರ್ತಕಗಳು(ಟ್ರಾನ್ಸ್ಫಾರ್ಮರ್) ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಧೀಡಿರ್ ಭೂಕುಸಿತ ಮತ್ತು ಪ್ರವಾಹದ ಪರಿಣಾಮದಿಂದಾಗಿ ಹಿಮಾಚಲ ಪ್ರದೇಶದದಲ್ಲಿ ಇದುವರೆಗೂ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.</p><p>ಧೀಡಿರ್ ಪ್ರವಾಹ ಮತ್ತು ಭೂಕುಸಿತದ ಪರಿಣಾಮ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಔತ್ ಬಳಿ ಚಂಡೀಗಢ-ಮನಾಲಿ ಹೆದ್ದಾರಿಯಲ್ಲಿ ಕಳೆದ 24 ಗಂಟೆಗಳಿಂದ ಸ್ಥಗಿತಗೊಂಡಿದ್ದ ವಾಹನ ಸಂಚಾರವನ್ನು ಪುನಃ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಾನುವಾರ ಸಂಜೆಯಿಂದಲೇ ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರವಾಸಿಗರು ಸೇರಿದಂತೆ ನೂರಾರು ಪ್ರಯಾಣಿಕರು ಪರದಾಡುವಂತಾಯಿತು.</p><p>ಭೂಕುಸಿತದ ಪರಿಣಾಮದಿಂದ ಮಂಡಿ-ಪಂಡೋಹ್–ಕುಲ್ಲು ಹೆದ್ದಾರಿಯ ಸುಮಾರು 70 ಕಿ.ಮೀ ಖೋಟಿನಲ್ಲಾಹ್ನ 6 ಕಿ.ಮೀ ಮಾರ್ಗವನ್ನು ನಿರ್ಬಂಧಿಸಲಾಗಿದೆ. ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುತ್ತಿದ್ದು, ಜೂನ್ 28 ರಿಂದ ಜುಲೈ 1ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p><p>ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಒಟ್ಟು 301 ರಸ್ತೆಗಳ ಸಂಚಾರ ಸ್ಥಗಿತಗೊಂಡಿದ್ದು, 140 ವಿದ್ಯುತ್ ಪರಿವರ್ತಕಗಳು(ಟ್ರಾನ್ಸ್ಫಾರ್ಮರ್) ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>