<p><strong>ನವದೆಹಲಿ</strong>: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತವು, ಹಿಂದೂ ವ್ಯಕ್ತಿಯ ಹತ್ಯೆಯಲ್ಲಿ ಭಾಗಿಯಾದ ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದೆ. </p><p>ಬಾಂಗ್ಲಾದೇಶದ ನ್ಯಾಷನಲಿಸ್ಟ್ ಪಕ್ಷದ (ಬಿಎನ್ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ 17 ವರ್ಷಗಳ ಬಳಿಕ ಸ್ವದೇಶಕ್ಕೆ ಮರಳಿದ್ದು, ಅಲ್ಲಿ ಹೊಸ ರಾಜಕೀಯ ಸ್ಥಿತ್ಯಂತರಕ್ಕೆ ವೇದಿಕೆ ಸಿದ್ಧಗೊಂಡಿರುವ ಬೆನ್ನಲ್ಲೇ, ಭಾರತ ಈ ಪ್ರತಿಕ್ರಿಯೆ ನೀಡಿದೆ.</p><p>‘ಬಾಂಗ್ಲಾದೇಶದಲ್ಲಿ 2026ರ ಫೆಬ್ರುವರಿ 12ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯು ಮುಕ್ತವಾಗಿ, ನ್ಯಾಯಯುತವಾಗಿ ಮತ್ತು ಎಲ್ಲರನ್ನೂ ಒಳಗೊಂಡು ನಡೆಯಬೇಕು. ಈಗಿನ ರಾಜಕೀಯ ಅಸ್ಥಿರತೆ ಕೊನೆಗಾಣಿಸಿ ಬಾಂಗ್ಲಾದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರಗೊಳ್ಳುವಂತೆ ಮಾಡುವುದು ಅಲ್ಲಿನ ಸರ್ಕಾರದ ಜವಾಬ್ದಾರಿ’ ಎಂದು ಭಾರತ<br>ಹೇಳಿದೆ. </p><p>‘ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರದ ಅವಧಿಯಲ್ಲಿ ಹಿಂದೂಗಳು, ಕ್ರೈಸ್ತರು, ಬೌದ್ಧರನ್ನು ಒಳಗೊಂಡು<br>ಅಲ್ಪಸಂಖ್ಯಾತರ ಮೇಲೆ 2,900ಕ್ಕೂ ಹೆಚ್ಚು ದಾಳಿಗಳು ನಡೆದಿವೆ. ಇದನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ. ಜತೆಗೆ ಅಲ್ಲಿನ ರಾಜಕೀಯ ಬಿಕ್ಕಟ್ಟಿನ ಮೇಲೂ ನಿರಂತರವಾಗಿ ನಿಗಾ ವಹಿಸುತ್ತಿದೆ’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. </p><p>‘ಬಾಂಗ್ಲಾದೇಶದ ಮೈಮೆನ್ಸಿಂಗ್ನಲ್ಲಿ ಇತ್ತೀಚೆಗೆ ನಡೆದ ಹಿಂದೂ ಯುವಕ ದೀಪು ಚಂದ್ರದಾಸ್ ಅವರ ಭೀಕರ ಹತ್ಯೆಯನ್ನು ಖಂಡಿಸಿರುವ ಜೈಸ್ವಾಲ್, ‘ಈ ಕೃತ್ಯದಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 12 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶ ಹೇಳಿದೆ. </p><p>ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ವಿರುದ್ಧ ನಡೆದ ಹೋರಾಟದಲ್ಲಿ ಶರೀಫ್ ಉಸ್ಮಾನ್ ಹಾದಿ (32) ಹತ್ಯೆಯಾದ ಬೆನ್ನಲ್ಲೇ, ಬಾಂಗ್ಲಾದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಶರೀಫ್ ಹತ್ಯೆಗೆ ಸಂಬಂಧಿಸಿದಂತೆ ಭಾರತಕ್ಕೆ ಸಂಬಂಧ ಕಲ್ಪಿಸುವುದನ್ನು<br>ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. ಬಾಂಗ್ಲಾ ವಿಷಯದಲ್ಲಿ ಭಾರತದ ಬಗೆಗಿನ ಸುಳ್ಳು ನಿರೂಪಣೆಗಳನ್ನು ನಿರಾಕರಿಸುವುದಾಗಿ ಜೈಸ್ವಾಲ್ ಹೇಳಿದ್ದಾರೆ</p>.<p><strong>ತಂದೆಯ ಸಮಾಧಿಗೆ ತಾರಿಕ್ ನಮನ</strong></p><p><strong>ಢಾಕಾ/ನವದೆಹಲಿ</strong>: ಸ್ವದೇಶಕ್ಕೆ ಮರಳಿರುವ ಬಾಂಗ್ಲಾದೇಶದ ‘ಬಿಎನ್ಪಿ ಪಕ್ಷದ ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್, ಶುಕ್ರವಾರ ತಮ್ಮ ತಂದೆ, ಬಾಂಗ್ಲಾದೇಶದ ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿ ಸ್ಥಳಕ್ಕೆ ಹಲವು ವರ್ಷಗಳ ಬಳಿಕ ಭೇಟಿ ನೀಡಿ, ನಮನ ಸಲ್ಲಿಸಿದರು.</p><p>ರೆಹಮಾನ್ ಅವರು, ಜಿಯಾವುರ್ ರೆಹಮಾನ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಬಿಎನ್ಪಿ ಕಾರ್ಯಕರ್ತರು ರಸ್ತೆಯ ಎರಡೂ ಬದಿಗಳಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಕಾರ್ಯಕರ್ತರ ದಟ್ಟಣೆಯಿಂದಾಗಿ ತಾರಿಕ್ ನಿವಾಸದಿಂದ, ಸಮಾಧಿ ಇರುವ ಜಿಯಾ ಉದ್ಯಾನದ 8 ಕಿ.ಮೀ ದಾರಿ ಕ್ರಮಿಸಲು 1 ಗಂಟೆ, 51 ನಿಮಿಷ ಬೇಕಾಯಿತು. ಬೆಂಬಲಿಗರು ಘೋಷಣೆಗಳನ್ನು ಕೂಗಿದರು. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನರನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿತ್ತು. </p>.<p><strong>ದಿನದ</strong> <strong>ಬೆಳವಣಿಗೆ</strong></p><p>l ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಕೋಲ್ಕತ್ತ, ವಾರಾಣಸಿ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ</p><p>l ಸಿಲಿಗುರಿ ಸುತ್ತಮುತ್ತ ಬಾಂಗ್ಲಾ ಪ್ರಜೆಗಳಿಗೆ ವಸತಿ ಸೌಕರ್ಯ ತಾತ್ಕಾಲಿಕವಾಗಿ ನಿಲ್ಲಿಸಲು ಪಶ್ಚಿಮ ಬಂಗಾಳದ ಹೋಟೆಲ್ ಉದ್ಯಮಿಗಳ ಸಂಘ ನಿರ್ಧಾರ</p><p>l ಶರೀಫ್ ಉಸ್ಮಾನ್ ಹಾದಿ ಹತ್ಯೆ ಖಂಡಿಸಿ ಢಾಕಾದಲ್ಲಿ ಬೃಹತ್ ಪ್ರತಿಭಟನೆ</p> .<div><blockquote>ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ರಾಜಕೀಯ ಹಿಂಸಾಚಾರ ಅಥವಾ ಮಾಧ್ಯಮಗಳ ಉತ್ಪ್ರೇಕ್ಷೆ ಎಂದು ತಳ್ಳಿ ಹಾಕುವಂತಿಲ್ಲ</blockquote><span class="attribution"> ರಣಧೀರ್ ಜೈ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತವು, ಹಿಂದೂ ವ್ಯಕ್ತಿಯ ಹತ್ಯೆಯಲ್ಲಿ ಭಾಗಿಯಾದ ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದೆ. </p><p>ಬಾಂಗ್ಲಾದೇಶದ ನ್ಯಾಷನಲಿಸ್ಟ್ ಪಕ್ಷದ (ಬಿಎನ್ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ 17 ವರ್ಷಗಳ ಬಳಿಕ ಸ್ವದೇಶಕ್ಕೆ ಮರಳಿದ್ದು, ಅಲ್ಲಿ ಹೊಸ ರಾಜಕೀಯ ಸ್ಥಿತ್ಯಂತರಕ್ಕೆ ವೇದಿಕೆ ಸಿದ್ಧಗೊಂಡಿರುವ ಬೆನ್ನಲ್ಲೇ, ಭಾರತ ಈ ಪ್ರತಿಕ್ರಿಯೆ ನೀಡಿದೆ.</p><p>‘ಬಾಂಗ್ಲಾದೇಶದಲ್ಲಿ 2026ರ ಫೆಬ್ರುವರಿ 12ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯು ಮುಕ್ತವಾಗಿ, ನ್ಯಾಯಯುತವಾಗಿ ಮತ್ತು ಎಲ್ಲರನ್ನೂ ಒಳಗೊಂಡು ನಡೆಯಬೇಕು. ಈಗಿನ ರಾಜಕೀಯ ಅಸ್ಥಿರತೆ ಕೊನೆಗಾಣಿಸಿ ಬಾಂಗ್ಲಾದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರಗೊಳ್ಳುವಂತೆ ಮಾಡುವುದು ಅಲ್ಲಿನ ಸರ್ಕಾರದ ಜವಾಬ್ದಾರಿ’ ಎಂದು ಭಾರತ<br>ಹೇಳಿದೆ. </p><p>‘ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರದ ಅವಧಿಯಲ್ಲಿ ಹಿಂದೂಗಳು, ಕ್ರೈಸ್ತರು, ಬೌದ್ಧರನ್ನು ಒಳಗೊಂಡು<br>ಅಲ್ಪಸಂಖ್ಯಾತರ ಮೇಲೆ 2,900ಕ್ಕೂ ಹೆಚ್ಚು ದಾಳಿಗಳು ನಡೆದಿವೆ. ಇದನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ. ಜತೆಗೆ ಅಲ್ಲಿನ ರಾಜಕೀಯ ಬಿಕ್ಕಟ್ಟಿನ ಮೇಲೂ ನಿರಂತರವಾಗಿ ನಿಗಾ ವಹಿಸುತ್ತಿದೆ’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. </p><p>‘ಬಾಂಗ್ಲಾದೇಶದ ಮೈಮೆನ್ಸಿಂಗ್ನಲ್ಲಿ ಇತ್ತೀಚೆಗೆ ನಡೆದ ಹಿಂದೂ ಯುವಕ ದೀಪು ಚಂದ್ರದಾಸ್ ಅವರ ಭೀಕರ ಹತ್ಯೆಯನ್ನು ಖಂಡಿಸಿರುವ ಜೈಸ್ವಾಲ್, ‘ಈ ಕೃತ್ಯದಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 12 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶ ಹೇಳಿದೆ. </p><p>ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರದ ವಿರುದ್ಧ ನಡೆದ ಹೋರಾಟದಲ್ಲಿ ಶರೀಫ್ ಉಸ್ಮಾನ್ ಹಾದಿ (32) ಹತ್ಯೆಯಾದ ಬೆನ್ನಲ್ಲೇ, ಬಾಂಗ್ಲಾದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಶರೀಫ್ ಹತ್ಯೆಗೆ ಸಂಬಂಧಿಸಿದಂತೆ ಭಾರತಕ್ಕೆ ಸಂಬಂಧ ಕಲ್ಪಿಸುವುದನ್ನು<br>ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. ಬಾಂಗ್ಲಾ ವಿಷಯದಲ್ಲಿ ಭಾರತದ ಬಗೆಗಿನ ಸುಳ್ಳು ನಿರೂಪಣೆಗಳನ್ನು ನಿರಾಕರಿಸುವುದಾಗಿ ಜೈಸ್ವಾಲ್ ಹೇಳಿದ್ದಾರೆ</p>.<p><strong>ತಂದೆಯ ಸಮಾಧಿಗೆ ತಾರಿಕ್ ನಮನ</strong></p><p><strong>ಢಾಕಾ/ನವದೆಹಲಿ</strong>: ಸ್ವದೇಶಕ್ಕೆ ಮರಳಿರುವ ಬಾಂಗ್ಲಾದೇಶದ ‘ಬಿಎನ್ಪಿ ಪಕ್ಷದ ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್, ಶುಕ್ರವಾರ ತಮ್ಮ ತಂದೆ, ಬಾಂಗ್ಲಾದೇಶದ ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿ ಸ್ಥಳಕ್ಕೆ ಹಲವು ವರ್ಷಗಳ ಬಳಿಕ ಭೇಟಿ ನೀಡಿ, ನಮನ ಸಲ್ಲಿಸಿದರು.</p><p>ರೆಹಮಾನ್ ಅವರು, ಜಿಯಾವುರ್ ರೆಹಮಾನ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಬಿಎನ್ಪಿ ಕಾರ್ಯಕರ್ತರು ರಸ್ತೆಯ ಎರಡೂ ಬದಿಗಳಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಕಾರ್ಯಕರ್ತರ ದಟ್ಟಣೆಯಿಂದಾಗಿ ತಾರಿಕ್ ನಿವಾಸದಿಂದ, ಸಮಾಧಿ ಇರುವ ಜಿಯಾ ಉದ್ಯಾನದ 8 ಕಿ.ಮೀ ದಾರಿ ಕ್ರಮಿಸಲು 1 ಗಂಟೆ, 51 ನಿಮಿಷ ಬೇಕಾಯಿತು. ಬೆಂಬಲಿಗರು ಘೋಷಣೆಗಳನ್ನು ಕೂಗಿದರು. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನರನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿತ್ತು. </p>.<p><strong>ದಿನದ</strong> <strong>ಬೆಳವಣಿಗೆ</strong></p><p>l ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಕೋಲ್ಕತ್ತ, ವಾರಾಣಸಿ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ</p><p>l ಸಿಲಿಗುರಿ ಸುತ್ತಮುತ್ತ ಬಾಂಗ್ಲಾ ಪ್ರಜೆಗಳಿಗೆ ವಸತಿ ಸೌಕರ್ಯ ತಾತ್ಕಾಲಿಕವಾಗಿ ನಿಲ್ಲಿಸಲು ಪಶ್ಚಿಮ ಬಂಗಾಳದ ಹೋಟೆಲ್ ಉದ್ಯಮಿಗಳ ಸಂಘ ನಿರ್ಧಾರ</p><p>l ಶರೀಫ್ ಉಸ್ಮಾನ್ ಹಾದಿ ಹತ್ಯೆ ಖಂಡಿಸಿ ಢಾಕಾದಲ್ಲಿ ಬೃಹತ್ ಪ್ರತಿಭಟನೆ</p> .<div><blockquote>ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ರಾಜಕೀಯ ಹಿಂಸಾಚಾರ ಅಥವಾ ಮಾಧ್ಯಮಗಳ ಉತ್ಪ್ರೇಕ್ಷೆ ಎಂದು ತಳ್ಳಿ ಹಾಕುವಂತಿಲ್ಲ</blockquote><span class="attribution"> ರಣಧೀರ್ ಜೈ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>