<p><strong>ಕೋಲ್ಕತ್ತ</strong>: ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪ್ರತಿಭಟನಾ ನಿರತ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ತಿಳಿಸಿದೆ.</p><p>ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ, ಜೆ.ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು ಮುಷ್ಕರ ನಿರತ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ಗುರುವಾರ ತಿಳಿಸಿದೆ.</p><p>ಕೆಲಸದ ಸ್ಥಳಗಳಲ್ಲಿ ನಮ್ಮನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂದು ವೈದ್ಯರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದರು. </p><p>ಕೆಲಸದ ಸ್ಥಳಗಳಲ್ಲಿ ಸುರಕ್ಷತೆ ಕಲ್ಪಿಸುವಂತೆ ನಾವು ಅಧಿಕಾರಿಗಳಿಗೆ ಸೂಚಿಸುತ್ತೇವೆ. ವೈದ್ಯರು ಕೆಲಸ ಮಾಡದಿದ್ದರೆ ಸಾರ್ವಜನಿಕ ಆರೋಗ್ಯ ಸೇವೆಗಳು ನಡೆಯುವುದು ಹೇಗೆ? ಮೊದಲು ಕೆಲಸಕ್ಕೆ ಮರಳುವಂತೆ ನ್ಯಾಯಪೀಠ ಹೇಳಿತು. </p><p>ಮತ್ತೆ ನಿಮಗೆ ತೊಂದರೆಯಾದರೆ ನಮ್ಮ ಬಳಿಗೆ ಬನ್ನಿ, ಮೊದಲು ಕೆಲಸಕ್ಕೆ ಮರಳಿ ಎಂದು ನ್ಯಾಯಪೀಠ ಹೇಳಿದೆ.</p><p>ಕೋಲ್ಕತ್ತದ ಆರ್.ಜಿ. ಕರ್ ವೈದ್ಯ ಕಾಲೇಜಿನಲ್ಲಿ ಕರ್ತವ್ಯ ನಿರತ 32 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿತ್ತು. ಘಟನೆ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪ್ರತಿಭಟನಾ ನಿರತ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ತಿಳಿಸಿದೆ.</p><p>ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ, ಜೆ.ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು ಮುಷ್ಕರ ನಿರತ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ಗುರುವಾರ ತಿಳಿಸಿದೆ.</p><p>ಕೆಲಸದ ಸ್ಥಳಗಳಲ್ಲಿ ನಮ್ಮನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂದು ವೈದ್ಯರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದರು. </p><p>ಕೆಲಸದ ಸ್ಥಳಗಳಲ್ಲಿ ಸುರಕ್ಷತೆ ಕಲ್ಪಿಸುವಂತೆ ನಾವು ಅಧಿಕಾರಿಗಳಿಗೆ ಸೂಚಿಸುತ್ತೇವೆ. ವೈದ್ಯರು ಕೆಲಸ ಮಾಡದಿದ್ದರೆ ಸಾರ್ವಜನಿಕ ಆರೋಗ್ಯ ಸೇವೆಗಳು ನಡೆಯುವುದು ಹೇಗೆ? ಮೊದಲು ಕೆಲಸಕ್ಕೆ ಮರಳುವಂತೆ ನ್ಯಾಯಪೀಠ ಹೇಳಿತು. </p><p>ಮತ್ತೆ ನಿಮಗೆ ತೊಂದರೆಯಾದರೆ ನಮ್ಮ ಬಳಿಗೆ ಬನ್ನಿ, ಮೊದಲು ಕೆಲಸಕ್ಕೆ ಮರಳಿ ಎಂದು ನ್ಯಾಯಪೀಠ ಹೇಳಿದೆ.</p><p>ಕೋಲ್ಕತ್ತದ ಆರ್.ಜಿ. ಕರ್ ವೈದ್ಯ ಕಾಲೇಜಿನಲ್ಲಿ ಕರ್ತವ್ಯ ನಿರತ 32 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿತ್ತು. ಘಟನೆ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>