<p><strong>ಮೀರಟ್(ಉತ್ತರ ಪ್ರದೇಶ)</strong>: ಇಲ್ಲಿನ ಸಿಮೌಲಿ ಗ್ರಾಮದ ರೈತರೊಬ್ಬರ ಮನೆಯಂಗಳದಲ್ಲಿ ಒಮ್ಮೆಲೆ 100ಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಎಲ್ಲರಲ್ಲಿಯೂ ಗಾಬರಿ ಮೂಡಿಸಿದೆ. </p><p>ರೈತ ಮಹ್ಫೂಜ್ ಸೈಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ರಾತ್ರಿ ಸೈಫಿ ಅವರು ಮಲಗಲು ಸಿದ್ದರಾಗುತ್ತಿದ್ದಾಗ ಹಾವೊಂದು ಕಾಣಿಸಿಕೊಂಡಿದ್ದು, ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ತಕ್ಷಣ ಒಂದರ ನಂತರ ಒಂದರಂತೆ ಸುಮಾರು 100ಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿವೆ.</p><p>ಹಾವುಗಳು ಕಂಡು ಗಾಬರಿಗೊಂಡ ಸೈಫಿ ಅವರು ಕುಟುಂಬ ಸದಸ್ಯರನ್ನು, ಅಕ್ಕಪಕ್ಕದವರನ್ನು ಕರೆದಿದ್ದಾರೆ. ಎಲ್ಲರೂ ಸೇರಿ ಸುಮಾರು 50ಕ್ಕೂ ಹೆಚ್ಚು ಹಾವುಗಳು ಕೊಂದು ಹೂತು ಹಾಕಿದ್ದಾರೆ.</p>.<p>ಏತನ್ಮಧ್ಯೆ, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅರಣ್ಯ ಅಧಿಕಾರಿಗಳ ಕಣ್ಣಿಗೂ ಬಿದ್ದಿದೆ. ಆ ತಕ್ಷಣ ಗ್ರಾಮಕ್ಕೆ ಧಾವಿಸಿದ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ.</p><p>‘ಇಲಾಖೆಗೆ ತಿಳಿಸದೆಯೇ ಹಾವುಗಳನ್ನು ಕೊಂದು ನೆಲದಲ್ಲಿ ಹೂಳಲಾಗಿದೆ. ಅವು ಸಂರಕ್ಷಿತ ಜೀವಿಗಳಾಗಿದ್ದು, ಯಾವುದೇ ಕ್ರಮ ಕೈಗೊಳ್ಳುವ ಮೊದಲು ಅರಣ್ಯ ಇಲಾಖೆಗೆ ತಿಳಿಸುವುದು ಅವಶ್ಯಕ’ ಎಂದು ಡಿಎಫ್ಒ ರಾಜೇಶ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.</p><p>‘ಅವು ವಿಷಕಾರಿ ಹಾವುಗಳಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನೀರು ಮತ್ತು ಚರಂಡಿಗಳಂತಹ ಸ್ಥಳಗಳಲ್ಲಿ ಹೆಚ್ಚಾಗಿ ವಾಸಿಸುತ್ತವೆ’ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೀರಟ್(ಉತ್ತರ ಪ್ರದೇಶ)</strong>: ಇಲ್ಲಿನ ಸಿಮೌಲಿ ಗ್ರಾಮದ ರೈತರೊಬ್ಬರ ಮನೆಯಂಗಳದಲ್ಲಿ ಒಮ್ಮೆಲೆ 100ಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಎಲ್ಲರಲ್ಲಿಯೂ ಗಾಬರಿ ಮೂಡಿಸಿದೆ. </p><p>ರೈತ ಮಹ್ಫೂಜ್ ಸೈಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ರಾತ್ರಿ ಸೈಫಿ ಅವರು ಮಲಗಲು ಸಿದ್ದರಾಗುತ್ತಿದ್ದಾಗ ಹಾವೊಂದು ಕಾಣಿಸಿಕೊಂಡಿದ್ದು, ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ತಕ್ಷಣ ಒಂದರ ನಂತರ ಒಂದರಂತೆ ಸುಮಾರು 100ಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿವೆ.</p><p>ಹಾವುಗಳು ಕಂಡು ಗಾಬರಿಗೊಂಡ ಸೈಫಿ ಅವರು ಕುಟುಂಬ ಸದಸ್ಯರನ್ನು, ಅಕ್ಕಪಕ್ಕದವರನ್ನು ಕರೆದಿದ್ದಾರೆ. ಎಲ್ಲರೂ ಸೇರಿ ಸುಮಾರು 50ಕ್ಕೂ ಹೆಚ್ಚು ಹಾವುಗಳು ಕೊಂದು ಹೂತು ಹಾಕಿದ್ದಾರೆ.</p>.<p>ಏತನ್ಮಧ್ಯೆ, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅರಣ್ಯ ಅಧಿಕಾರಿಗಳ ಕಣ್ಣಿಗೂ ಬಿದ್ದಿದೆ. ಆ ತಕ್ಷಣ ಗ್ರಾಮಕ್ಕೆ ಧಾವಿಸಿದ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ.</p><p>‘ಇಲಾಖೆಗೆ ತಿಳಿಸದೆಯೇ ಹಾವುಗಳನ್ನು ಕೊಂದು ನೆಲದಲ್ಲಿ ಹೂಳಲಾಗಿದೆ. ಅವು ಸಂರಕ್ಷಿತ ಜೀವಿಗಳಾಗಿದ್ದು, ಯಾವುದೇ ಕ್ರಮ ಕೈಗೊಳ್ಳುವ ಮೊದಲು ಅರಣ್ಯ ಇಲಾಖೆಗೆ ತಿಳಿಸುವುದು ಅವಶ್ಯಕ’ ಎಂದು ಡಿಎಫ್ಒ ರಾಜೇಶ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.</p><p>‘ಅವು ವಿಷಕಾರಿ ಹಾವುಗಳಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನೀರು ಮತ್ತು ಚರಂಡಿಗಳಂತಹ ಸ್ಥಳಗಳಲ್ಲಿ ಹೆಚ್ಚಾಗಿ ವಾಸಿಸುತ್ತವೆ’ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>