‘ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದರು ಕೂಡ ಎಎಪಿ ಬಲಿಷ್ಠವಾಗಿ ನಿಂತಿದೆ ಎಂದು ಬಿಜೆಪಿಗೆ ಅನಿಸುತ್ತಿದೆ. ಈಗ ಅದು ಎಎಪಿಯ ಮುಂದಿನ ನಾಯಕನನ್ನು ಜೈಲಿಗೆ ಹಾಕಲು ಯೋಜಿಸುತ್ತಿದೆ. ಸೋಮವಾರ ನ್ಯಾಯಾಲಯದ ಮುಂದೆ ಇ.ಡಿ ನನ್ನ ಮತ್ತು ಸೌರಭ್ ಭಾರಧ್ವಜ್ ಅವರ ಹೆಸರು ಹೇಳಿರುವುದೇ ಇದಕ್ಕೆ ಸಾಕ್ಷಿ’ ಎಂದರು.
ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ಕೊಡುತ್ತಾರೆಯೇ ಎಂಬ ಪ್ರಶ್ನೆಗೆ, ‘ಎರಡು ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆಯಾಗಿದ್ದರೆ, ಸಾರ್ವಜನಿಕ ಪ್ರತಿನಿಧಿಯಾಗಿ ಉಳಿಯಲು ಸಾಧ್ಯವಿಲ್ಲ ಎಂದು ಪ್ರಜಾಪ್ರತಿನಿಧಿ ಕಾಯ್ದೆ ಹೇಳುತ್ತದೆ. ಅರವಿಂದ ಕೇಜ್ರಿವಾಲ್ ಅವರಿಗೆ ಶಿಕ್ಷೆಯಾಗಿಲ್ಲ. ದೆಹಲಿ ವಿಧಾನಸಭೆಯಲ್ಲಿ ಕೇಜ್ರಿವಾಲ್ ಬಹುಮತ ಹೊಂದಿದ್ದಾರೆ. ಆದ್ದರಿಂದ ರಾಜೀನಾಮೆ ನೀಡಲು ಕೇಜ್ರಿವಾಲ್ಗೆ ಯಾವುದೇ ಕಾರಣವಿಲ್ಲ’ ಎಂದು ಹೇಳಿದರು.