<p><strong>ಮುಂಬೈ</strong>: ಭೀಡ್ ಜಿಲ್ಲೆಯ ಗ್ರಾಮವೊಂದರ ಸರಪಂಚ ಸಂತೋಷ್ ದೇಶಮುಖ್ ಅವರ ಹತ್ಯೆ ಪ್ರಕರಣದಲ್ಲಿ ವಾಲ್ಮಿಕ್ ಕರಾಡ್ ಅವರ ಹೆಸರು ಕೇಳಿಬಂದ ನಂತರದಲ್ಲಿ ಎನ್ಸಿಪಿಯ ಧನಂಜಯ ಮುಂಡೆ ಅವರನ್ನು ಮಹಾರಾಷ್ಟ್ರ ಸಂಪುಟದಿಂದ ಕೈಬಿಡಬೇಕು ಎಂಬ ಆಗ್ರಹ ಬಲಗೊಳ್ಳುತ್ತಿದೆ.</p>.<p>ಈ ಪ್ರಕರಣವನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ದೊಡ್ಡ ರಾಜಕೀಯ ಸವಾಲೊಂದನ್ನು ಎದುರಿಸುತ್ತಿದ್ದಾರೆ.</p>.<p>ಈ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಯ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಸಚಿವ ಧನಂಜಯ ಮುಂಡೆ ಅವರು ಕರಾಡ್ ಜೊತೆ ನಂಟು ಹೊಂದಿದ್ದಾರೆ. ಹತ್ಯೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಕರಾಡ್ ಅವರ ಹೆಸರು ಕೇಳಿಬಂದಿದೆ. </p>.<p>ಧನಂಜಯ ಮುಂಡೆ ಅವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಫಡಣವೀಸ್ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭೀಡ್ ಜಿಲ್ಲೆಯ ಗ್ರಾಮವೊಂದರ ಸರಪಂಚ ಸಂತೋಷ್ ದೇಶಮುಖ್ ಅವರ ಹತ್ಯೆ ಪ್ರಕರಣದಲ್ಲಿ ವಾಲ್ಮಿಕ್ ಕರಾಡ್ ಅವರ ಹೆಸರು ಕೇಳಿಬಂದ ನಂತರದಲ್ಲಿ ಎನ್ಸಿಪಿಯ ಧನಂಜಯ ಮುಂಡೆ ಅವರನ್ನು ಮಹಾರಾಷ್ಟ್ರ ಸಂಪುಟದಿಂದ ಕೈಬಿಡಬೇಕು ಎಂಬ ಆಗ್ರಹ ಬಲಗೊಳ್ಳುತ್ತಿದೆ.</p>.<p>ಈ ಪ್ರಕರಣವನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ದೊಡ್ಡ ರಾಜಕೀಯ ಸವಾಲೊಂದನ್ನು ಎದುರಿಸುತ್ತಿದ್ದಾರೆ.</p>.<p>ಈ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಯ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಸಚಿವ ಧನಂಜಯ ಮುಂಡೆ ಅವರು ಕರಾಡ್ ಜೊತೆ ನಂಟು ಹೊಂದಿದ್ದಾರೆ. ಹತ್ಯೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಕರಾಡ್ ಅವರ ಹೆಸರು ಕೇಳಿಬಂದಿದೆ. </p>.<p>ಧನಂಜಯ ಮುಂಡೆ ಅವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಫಡಣವೀಸ್ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>