<p><strong>ವಾರಾಣಸಿ</strong>: ವಿರೋಧಪಕ್ಷಗಳ ಮೈತ್ರಿಕೂಟವಾದ ‘ಇಂಡಿಯಾ’ದ ನಾಯಕರು ಜಾತಿಯ ಹೆಸರಿನಲ್ಲಿ ಜನರನ್ನು ಎತ್ತಿಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾಗ್ದಾಳಿ ನಡೆಸಿದರು.</p>.<p>ದಲಿತರು ಮತ್ತು ಬುಡಕಟ್ಟು ಸಮುದಾಯದವರು ಉನ್ನತ ಸ್ಥಾನಗಳನ್ನು ಅಲಂಕರಿಸುವುದನ್ನು ಸಹಿಸಲೂ ಅವರಿಗೆ ಆಗುತ್ತಿಲ್ಲ ಎಂದು ಟೀಕಿಸಿದ ಪ್ರಧಾನಿ, ದ್ರೌಪದಿ ಮುರ್ಮು ಸ್ಪರ್ಧಿಸಿದ್ದ ರಾಷ್ಟ್ರಪತಿ ಚುನಾವಣೆಯನ್ನು ಉಲ್ಲೇಖಿಸಿದರು.</p><p>ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ಸಂತ ರವಿದಾಸ್ ಅವರ 647ನೇ ಜನ್ಮದಿನೋತ್ಸವ ಹಾಗೂ ಸಾರ್ವಜನಿಕ ಸಭೆ ಕಾರ್ಯಕ್ರಮದಲ್ಲಿ ಪ್ರಧಾನಿ ಮಾತನಾಡಿದರು.</p><p>ಜಾತಿ ಹೆಸರಿನಲ್ಲಿ ಜನರನ್ನು ಪ್ರಚೋದಿಸುವುದರಿಂದಲೂ ಮನುಷ್ಯತ್ವಕ್ಕೆ ಪೆಟ್ಟು ಬೀಳಲಿದೆ. ‘ಇಂಡಿಯಾ’ ನಾಯಕರು ಜಾತಿ ಹೆಸರಿನಲ್ಲಿ ಜನರನ್ನು ಎತ್ತಿಕಟ್ಟುವ ಹಾಗೂ ದಲಿತರು, ವಂಚಿತರ ಪರ ಯೋಜನೆಗಳನ್ನು ವಿರೋಧಿಸುವುದರಲ್ಲಿ ನಿರತರಾಗಿದ್ದಾರೆ. ಇದನ್ನು ದಲಿತರು, ಹಿಂದುಳಿದ ವರ್ಗದ ಜನರು ಅರಿತುಗೊಳ್ಳಬೇಕಾಗಿದೆ ಎಂದು ಹೇಳಿದರು.</p><p>ಇದೇ ಜನರು ಜಾತಿ ಕಲ್ಯಾಣದ ಹೆಸರಿನಲ್ಲಿ ಇಂದು ಕುಟುಂಬ ಹಿತಾಸಕ್ತಿಯ ರಾಜಕಾರಣದಲ್ಲಿ ತೊಡಗಿದ್ದಾರೆ. ಶೌಚಾಲಯ ಕಟ್ಟುವ ಕಾರ್ಯ ಆರಂಭವಾದಾಗ ಅಣಕವಾಡಿದರು. ಡಿಜಿಟಲ್ ಇಂಡಿಯಾ, ಜನ್ಧನ್ ಖಾತೆಗಳ ಬಗ್ಗೆಯೂ ವ್ಯಂಗ್ಯವಾಗಿ ಮಾತನಾಡಿದರು ಎಂದು ಪ್ರಧಾನಿ ವಾಗ್ದಾಳಿ ನಡೆಸಿದರು.</p><p>ಈ ಪರಿವಾರವಾದಿ ಪಕ್ಷಗಳಿಗೆ ತಮ್ಮ ಕುಟುಂಬ ಹೊರತುಪಡಿಸಿ ಯಾವುದೇ ದಲಿತ, ಬುಡಕಟ್ಟು ಜನರು ಉನ್ನತ ಸ್ಥಾನ ಅಲಂಕರಿಸುವುದು ಬೇಕಾಗಿಲ್ಲ. ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಆಗುವುದನ್ನು ವಿರೋಧಿಸಿದ್ದರು. ದಲಿತರು, ಹಿಂದುಳಿದ ವರ್ಗದವರು, ಬುಡಕಟ್ಟು ಜನರನ್ನು ವೋಟ್ಬ್ಯಾಂಕ್ ಆಗಿಯೇ ನೋಡಲು ಇವರು ಬಯಸುತ್ತಾರೆ ಎಂದರು.</p><p>‘ಪ್ರತಿ ಕಾಲಘಟ್ಟದಲ್ಲೂ ಸಂತರು ಸಮಾಜವನ್ನು ಸನ್ಮಾರ್ಗದಲ್ಲಿ ಕರೆದೊಯ್ಯುವ, ಜಾಗೃತಗೊಳಿಸುವ ಕೆಲಸ ಮಾಡುತ್ತಿದ್ದಾರೆ‘ ಎಂದು ಹೇಳಿದರು.</p><p>ಸಂತ ರವಿದಾಸ್ ವ್ಯಕ್ತಿತ್ವ ಸ್ಮರಿಸಿದ ಅವರು, ರವಿದಾಸ್ ಅವರು ಸಮಾಜಕ್ಕೆ ಸ್ವಾತಂತ್ರದ ಅರ್ಥ ನೀಡಿದ ಅವರು ಸಾಮಾಜಿಕ ಅಂತರವನ್ನು ಕುಗ್ಗಿಸಲು ಒತ್ತು ನೀಡಿದರು ಎಂದು ಹೇಳಿದರು.</p>.<p><strong>ಸ್ವತಃ ಪ್ರಜ್ಞೆ ಇಲ್ಲದ ವ್ಯಕ್ತಿ: ರಾಹುಲ್ ವಿರುದ್ಧ ಪ್ರಧಾನಿ ಮೋದಿ ಪರೋಕ್ಷ ಟೀಕೆ</strong></p>.<p><strong>ವಾರಾಣಸಿ :</strong> ‘ಸ್ವತಃ ಪ್ರಜ್ಞೆಯಲ್ಲಿ ಇಲ್ಲದವರು ಯುವಜನರು ಮತ್ತಿನಲ್ಲಿ ಇದ್ದಾರೆ’ ಎಂದು ಟೀಕಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.</p><p>‘ವಾರಾಣಸಿಯ ರಸ್ತೆಗಳಲ್ಲಿ ಮದ್ಯವ್ಯಸನಿ ವ್ಯಕ್ತಿಗಳು ಇರುವುದನ್ನು ಗಮನಿಸಿದ್ದೇನೆ’ ಎಂಬ ರಾಹುಲ್ಗಾಂಧಿ ಹೇಳಿಕೆಗೆ ತಮ್ಮದೇ ದಾಟಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಿದೇ ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.</p><p>ಕ್ಷೇತ್ರದ ಅಭಿವೃದ್ಧಿಯನ್ನು ಉಲ್ಲೇಖಿಸಿದ ಅವರು ‘ಕಳೆದ 10 ವರ್ಷಗಳಲ್ಲಿ ವಾರಾಣಸಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ವೇಗ ಪಡೆದುಕೊಂಡಿವೆ. ನಾನು ಎಂದಿಗೂ ಸಣ್ಣ ರೈತರು ವ್ಯಾಪಾರಿಗಳ ರಾಯಭಾರಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ</strong>: ವಿರೋಧಪಕ್ಷಗಳ ಮೈತ್ರಿಕೂಟವಾದ ‘ಇಂಡಿಯಾ’ದ ನಾಯಕರು ಜಾತಿಯ ಹೆಸರಿನಲ್ಲಿ ಜನರನ್ನು ಎತ್ತಿಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾಗ್ದಾಳಿ ನಡೆಸಿದರು.</p>.<p>ದಲಿತರು ಮತ್ತು ಬುಡಕಟ್ಟು ಸಮುದಾಯದವರು ಉನ್ನತ ಸ್ಥಾನಗಳನ್ನು ಅಲಂಕರಿಸುವುದನ್ನು ಸಹಿಸಲೂ ಅವರಿಗೆ ಆಗುತ್ತಿಲ್ಲ ಎಂದು ಟೀಕಿಸಿದ ಪ್ರಧಾನಿ, ದ್ರೌಪದಿ ಮುರ್ಮು ಸ್ಪರ್ಧಿಸಿದ್ದ ರಾಷ್ಟ್ರಪತಿ ಚುನಾವಣೆಯನ್ನು ಉಲ್ಲೇಖಿಸಿದರು.</p><p>ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ಸಂತ ರವಿದಾಸ್ ಅವರ 647ನೇ ಜನ್ಮದಿನೋತ್ಸವ ಹಾಗೂ ಸಾರ್ವಜನಿಕ ಸಭೆ ಕಾರ್ಯಕ್ರಮದಲ್ಲಿ ಪ್ರಧಾನಿ ಮಾತನಾಡಿದರು.</p><p>ಜಾತಿ ಹೆಸರಿನಲ್ಲಿ ಜನರನ್ನು ಪ್ರಚೋದಿಸುವುದರಿಂದಲೂ ಮನುಷ್ಯತ್ವಕ್ಕೆ ಪೆಟ್ಟು ಬೀಳಲಿದೆ. ‘ಇಂಡಿಯಾ’ ನಾಯಕರು ಜಾತಿ ಹೆಸರಿನಲ್ಲಿ ಜನರನ್ನು ಎತ್ತಿಕಟ್ಟುವ ಹಾಗೂ ದಲಿತರು, ವಂಚಿತರ ಪರ ಯೋಜನೆಗಳನ್ನು ವಿರೋಧಿಸುವುದರಲ್ಲಿ ನಿರತರಾಗಿದ್ದಾರೆ. ಇದನ್ನು ದಲಿತರು, ಹಿಂದುಳಿದ ವರ್ಗದ ಜನರು ಅರಿತುಗೊಳ್ಳಬೇಕಾಗಿದೆ ಎಂದು ಹೇಳಿದರು.</p><p>ಇದೇ ಜನರು ಜಾತಿ ಕಲ್ಯಾಣದ ಹೆಸರಿನಲ್ಲಿ ಇಂದು ಕುಟುಂಬ ಹಿತಾಸಕ್ತಿಯ ರಾಜಕಾರಣದಲ್ಲಿ ತೊಡಗಿದ್ದಾರೆ. ಶೌಚಾಲಯ ಕಟ್ಟುವ ಕಾರ್ಯ ಆರಂಭವಾದಾಗ ಅಣಕವಾಡಿದರು. ಡಿಜಿಟಲ್ ಇಂಡಿಯಾ, ಜನ್ಧನ್ ಖಾತೆಗಳ ಬಗ್ಗೆಯೂ ವ್ಯಂಗ್ಯವಾಗಿ ಮಾತನಾಡಿದರು ಎಂದು ಪ್ರಧಾನಿ ವಾಗ್ದಾಳಿ ನಡೆಸಿದರು.</p><p>ಈ ಪರಿವಾರವಾದಿ ಪಕ್ಷಗಳಿಗೆ ತಮ್ಮ ಕುಟುಂಬ ಹೊರತುಪಡಿಸಿ ಯಾವುದೇ ದಲಿತ, ಬುಡಕಟ್ಟು ಜನರು ಉನ್ನತ ಸ್ಥಾನ ಅಲಂಕರಿಸುವುದು ಬೇಕಾಗಿಲ್ಲ. ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಆಗುವುದನ್ನು ವಿರೋಧಿಸಿದ್ದರು. ದಲಿತರು, ಹಿಂದುಳಿದ ವರ್ಗದವರು, ಬುಡಕಟ್ಟು ಜನರನ್ನು ವೋಟ್ಬ್ಯಾಂಕ್ ಆಗಿಯೇ ನೋಡಲು ಇವರು ಬಯಸುತ್ತಾರೆ ಎಂದರು.</p><p>‘ಪ್ರತಿ ಕಾಲಘಟ್ಟದಲ್ಲೂ ಸಂತರು ಸಮಾಜವನ್ನು ಸನ್ಮಾರ್ಗದಲ್ಲಿ ಕರೆದೊಯ್ಯುವ, ಜಾಗೃತಗೊಳಿಸುವ ಕೆಲಸ ಮಾಡುತ್ತಿದ್ದಾರೆ‘ ಎಂದು ಹೇಳಿದರು.</p><p>ಸಂತ ರವಿದಾಸ್ ವ್ಯಕ್ತಿತ್ವ ಸ್ಮರಿಸಿದ ಅವರು, ರವಿದಾಸ್ ಅವರು ಸಮಾಜಕ್ಕೆ ಸ್ವಾತಂತ್ರದ ಅರ್ಥ ನೀಡಿದ ಅವರು ಸಾಮಾಜಿಕ ಅಂತರವನ್ನು ಕುಗ್ಗಿಸಲು ಒತ್ತು ನೀಡಿದರು ಎಂದು ಹೇಳಿದರು.</p>.<p><strong>ಸ್ವತಃ ಪ್ರಜ್ಞೆ ಇಲ್ಲದ ವ್ಯಕ್ತಿ: ರಾಹುಲ್ ವಿರುದ್ಧ ಪ್ರಧಾನಿ ಮೋದಿ ಪರೋಕ್ಷ ಟೀಕೆ</strong></p>.<p><strong>ವಾರಾಣಸಿ :</strong> ‘ಸ್ವತಃ ಪ್ರಜ್ಞೆಯಲ್ಲಿ ಇಲ್ಲದವರು ಯುವಜನರು ಮತ್ತಿನಲ್ಲಿ ಇದ್ದಾರೆ’ ಎಂದು ಟೀಕಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.</p><p>‘ವಾರಾಣಸಿಯ ರಸ್ತೆಗಳಲ್ಲಿ ಮದ್ಯವ್ಯಸನಿ ವ್ಯಕ್ತಿಗಳು ಇರುವುದನ್ನು ಗಮನಿಸಿದ್ದೇನೆ’ ಎಂಬ ರಾಹುಲ್ಗಾಂಧಿ ಹೇಳಿಕೆಗೆ ತಮ್ಮದೇ ದಾಟಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಿದೇ ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.</p><p>ಕ್ಷೇತ್ರದ ಅಭಿವೃದ್ಧಿಯನ್ನು ಉಲ್ಲೇಖಿಸಿದ ಅವರು ‘ಕಳೆದ 10 ವರ್ಷಗಳಲ್ಲಿ ವಾರಾಣಸಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ವೇಗ ಪಡೆದುಕೊಂಡಿವೆ. ನಾನು ಎಂದಿಗೂ ಸಣ್ಣ ರೈತರು ವ್ಯಾಪಾರಿಗಳ ರಾಯಭಾರಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>