<p><strong>ನವದೆಹಲಿ</strong>: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಜಮ್ಮು ಸೇರಿದಂತೆ ಅನೇಕ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಲು ಪ್ರಯತ್ನಿಸಿತ್ತು. ಆದರೆ ಭಾರತ ದಿಟ್ಟ ಉತ್ತರ ನೀಡುವ ಮೂಲಕ ಪಾಕಿಸ್ತಾನದ ಪ್ರಯತ್ನಗಳಿಗೆ ತಣ್ಣೀರು ಎರಚಿದೆ.</p><p>ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ನಾರಾಯಣ್ ಅವರು ಉತ್ತರ ಕಮಾಂಡ್ನ ಸೇನಾ ಅಧಿಕಾರಿಗೆ ಮಿಲಿಟರಿ ಸನ್ನದ್ಧತೆಯ ಕುರಿತು ಗೌಪ್ಯ ಪತ್ರವನ್ನು ಕಳುಹಿಸಿದ್ದಾರೆ ಎನ್ನಲಾಗುವ ಪತ್ರವೊಂದು ಹರಿದಾಡಿತ್ತು.</p><p>ಈ ಬಗ್ಗೆ 'ಪಿಐಬಿ' ಫ್ಯಾಕ್ಟ್ಚೆಕ್ ಪೋಸ್ಟ್ ಹಂಚಿಕೊಂಡಿದ್ದು, ಇದೊಂದು ಸುಳ್ಳು ಸುದ್ದಿಯಾಗಿದೆ. ಈ ಪತ್ರವು ಸಂಪೂರ್ಣವಾಗಿ ನಕಲಿಯಾಗಿದೆ. ಜನರಲ್ ವಿ.ಕೆ. ನಾರಾಯಣ್ ಸೇನಾ ಮುಖ್ಯಸ್ಥರಲ್ಲ. ಪರಿಶೀಲಿಸದೇ ಯಾವುದೇ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಮತ್ತು ಅಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ.</p>.India-Pakistan Tensions: ಲೇಹ್ನ ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ.India-Pakistan Tensions: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 30 ಪೈಸೆ ಇಳಿಕೆ. <p>ನಿಖರವಾದ ಮಾಹಿತಿಗಳಿಗಾಗಿ ಭಾರತ ಸರ್ಕಾರ ಅಧಿಕೃತ ಖಾತೆಗಳನ್ನು ಮಾತ್ರ ಅವಲಂಬಿಸಿ ಎಂದು 'ಪಿಐಬಿ' ಕಿವಿಮಾತು ಹೇಳಿದೆ.</p><p>ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.</p><p>ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ಮತ್ತೊಮ್ಮೆ ತಿರುಗೇಟು ನೀಡಿದೆ.</p>.ಭಾರತದ ಪ್ರತಿ ದಾಳಿಗೆ ಬೆಚ್ಚಿದ ಪಾಕ್: PSLನ ಉಳಿದ ಪಂದ್ಯಗಳು ದುಬೈಗೆ ಶಿಫ್ಟ್.India-Pakistan Tensions: ಪಾಕ್ ದಾಳಿ ಯತ್ನ: ಜಮ್ಮುವಿಗೆ ದೌಡಾಯಿಸಿದ CM ಒಮರ್.India–Pak Tension |ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ: ಸರ್ಕಾರಿ ನೌಕರರ ರಜೆ ರದ್ದು.IPL 2025 | ಭದ್ರತಾ ಕಾರಣ; ಧರ್ಮಶಾಲಾದಲ್ಲಿ ಐಪಿಎಲ್ ಪಂದ್ಯ ರದ್ದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಜಮ್ಮು ಸೇರಿದಂತೆ ಅನೇಕ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಲು ಪ್ರಯತ್ನಿಸಿತ್ತು. ಆದರೆ ಭಾರತ ದಿಟ್ಟ ಉತ್ತರ ನೀಡುವ ಮೂಲಕ ಪಾಕಿಸ್ತಾನದ ಪ್ರಯತ್ನಗಳಿಗೆ ತಣ್ಣೀರು ಎರಚಿದೆ.</p><p>ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ನಾರಾಯಣ್ ಅವರು ಉತ್ತರ ಕಮಾಂಡ್ನ ಸೇನಾ ಅಧಿಕಾರಿಗೆ ಮಿಲಿಟರಿ ಸನ್ನದ್ಧತೆಯ ಕುರಿತು ಗೌಪ್ಯ ಪತ್ರವನ್ನು ಕಳುಹಿಸಿದ್ದಾರೆ ಎನ್ನಲಾಗುವ ಪತ್ರವೊಂದು ಹರಿದಾಡಿತ್ತು.</p><p>ಈ ಬಗ್ಗೆ 'ಪಿಐಬಿ' ಫ್ಯಾಕ್ಟ್ಚೆಕ್ ಪೋಸ್ಟ್ ಹಂಚಿಕೊಂಡಿದ್ದು, ಇದೊಂದು ಸುಳ್ಳು ಸುದ್ದಿಯಾಗಿದೆ. ಈ ಪತ್ರವು ಸಂಪೂರ್ಣವಾಗಿ ನಕಲಿಯಾಗಿದೆ. ಜನರಲ್ ವಿ.ಕೆ. ನಾರಾಯಣ್ ಸೇನಾ ಮುಖ್ಯಸ್ಥರಲ್ಲ. ಪರಿಶೀಲಿಸದೇ ಯಾವುದೇ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಮತ್ತು ಅಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ.</p>.India-Pakistan Tensions: ಲೇಹ್ನ ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ.India-Pakistan Tensions: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 30 ಪೈಸೆ ಇಳಿಕೆ. <p>ನಿಖರವಾದ ಮಾಹಿತಿಗಳಿಗಾಗಿ ಭಾರತ ಸರ್ಕಾರ ಅಧಿಕೃತ ಖಾತೆಗಳನ್ನು ಮಾತ್ರ ಅವಲಂಬಿಸಿ ಎಂದು 'ಪಿಐಬಿ' ಕಿವಿಮಾತು ಹೇಳಿದೆ.</p><p>ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.</p><p>ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ಮತ್ತೊಮ್ಮೆ ತಿರುಗೇಟು ನೀಡಿದೆ.</p>.ಭಾರತದ ಪ್ರತಿ ದಾಳಿಗೆ ಬೆಚ್ಚಿದ ಪಾಕ್: PSLನ ಉಳಿದ ಪಂದ್ಯಗಳು ದುಬೈಗೆ ಶಿಫ್ಟ್.India-Pakistan Tensions: ಪಾಕ್ ದಾಳಿ ಯತ್ನ: ಜಮ್ಮುವಿಗೆ ದೌಡಾಯಿಸಿದ CM ಒಮರ್.India–Pak Tension |ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ: ಸರ್ಕಾರಿ ನೌಕರರ ರಜೆ ರದ್ದು.IPL 2025 | ಭದ್ರತಾ ಕಾರಣ; ಧರ್ಮಶಾಲಾದಲ್ಲಿ ಐಪಿಎಲ್ ಪಂದ್ಯ ರದ್ದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>