<p><strong>ಚೆನ್ನೈ :</strong> ಮದುರೈನಿಂದ ಚೆನ್ನೈಗೆ ಬರುತ್ತಿದ್ದ ಇಂಡಿಗೊ ವಿಮಾನದ ಕಾಕ್ಪೀಟ್ ವಿಂಡ್ಶೀಲ್ಡ್ ಬಿರುಕುಬಿಟ್ಟಿರುವುದು ಪತ್ತೆಯಾಗಿ, ಪ್ರಯಾಣದ ನಡುವೆಯೇ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಆದರೆ, ಸಿಬ್ಬಂದಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸುವ ಮೂಲಕ ದುರಂತವೊಂದನ್ನು ತಪ್ಪಿಸಿದ್ದಾರೆ.</p>.<p>74 ಮಂದಿ ಪ್ರಯಾಣಿಕರಿದ್ದ ಇಂಡಿಗೊ ವಿಮಾನವು ಶುಕ್ರವಾರ ರಾತ್ರಿ 10 ಗಂಟೆ 7ನಿಮಿಷಕ್ಕೆ ಮದುರೈನಿಂದ ಹೊರಟು 11.30ಕ್ಕೆ ಚೆನ್ನೈಗೆ ಬರಬೇಕಿತ್ತು. ಈ ನಡುವೆ ವಿಂಡ್ಶೀಲ್ಡ್ನಲ್ಲಿ ಬಿರುಕು ಮೂಡಿರುವುದನ್ನು ಪೈಲಟ್ ಗಮನಿಸಿ, ಏರ್ ಟ್ರಾಫಿಕ್ ಕಂಟ್ರೋಲರ್ಗೆ (ಎಟಿಸಿ) ಮಾಹಿತಿ ನೀಡಿದ್ದಾರೆ.</p>.<p>ತಕ್ಷಣವೇ ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ತುರ್ತು ಭೂ ಸ್ಪರ್ಶಕ್ಕೆ ಸಿದ್ದತೆ ನಡೆಸಿದ್ದಾರೆ. ಅದರಂತೆ ರಾತ್ರಿ ನಿಗದಿತ ಸಮಯಕ್ಕಿಂತಲೂ 18 ನಿಮಿಷ ಮುಂಚಿತವಾಗಿ, 11.12ಕ್ಕೆ ಪ್ರತ್ಯೇಕ ಸ್ಥಳದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿ, ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. </p>.<p>ವಿಂಡ್ಶೀಲ್ಡ್ ಬಿರುಕಿಗೆ ಕಾರಣ ಪತ್ತೆ ಮಾಡಿ, ಎಲ್ಲ ಸುರಕ್ಷತಾ ಕ್ರಮಗಳನ್ನು ಖಾತರಿಪಡಿಸಿಕೊಳ್ಳುವುದಕ್ಕಾಗಿ ಸಂಪೂರ್ಣ ತನಿಖೆ ನಡೆಸುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ನಿರ್ದೇಶಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ :</strong> ಮದುರೈನಿಂದ ಚೆನ್ನೈಗೆ ಬರುತ್ತಿದ್ದ ಇಂಡಿಗೊ ವಿಮಾನದ ಕಾಕ್ಪೀಟ್ ವಿಂಡ್ಶೀಲ್ಡ್ ಬಿರುಕುಬಿಟ್ಟಿರುವುದು ಪತ್ತೆಯಾಗಿ, ಪ್ರಯಾಣದ ನಡುವೆಯೇ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಆದರೆ, ಸಿಬ್ಬಂದಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸುವ ಮೂಲಕ ದುರಂತವೊಂದನ್ನು ತಪ್ಪಿಸಿದ್ದಾರೆ.</p>.<p>74 ಮಂದಿ ಪ್ರಯಾಣಿಕರಿದ್ದ ಇಂಡಿಗೊ ವಿಮಾನವು ಶುಕ್ರವಾರ ರಾತ್ರಿ 10 ಗಂಟೆ 7ನಿಮಿಷಕ್ಕೆ ಮದುರೈನಿಂದ ಹೊರಟು 11.30ಕ್ಕೆ ಚೆನ್ನೈಗೆ ಬರಬೇಕಿತ್ತು. ಈ ನಡುವೆ ವಿಂಡ್ಶೀಲ್ಡ್ನಲ್ಲಿ ಬಿರುಕು ಮೂಡಿರುವುದನ್ನು ಪೈಲಟ್ ಗಮನಿಸಿ, ಏರ್ ಟ್ರಾಫಿಕ್ ಕಂಟ್ರೋಲರ್ಗೆ (ಎಟಿಸಿ) ಮಾಹಿತಿ ನೀಡಿದ್ದಾರೆ.</p>.<p>ತಕ್ಷಣವೇ ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ತುರ್ತು ಭೂ ಸ್ಪರ್ಶಕ್ಕೆ ಸಿದ್ದತೆ ನಡೆಸಿದ್ದಾರೆ. ಅದರಂತೆ ರಾತ್ರಿ ನಿಗದಿತ ಸಮಯಕ್ಕಿಂತಲೂ 18 ನಿಮಿಷ ಮುಂಚಿತವಾಗಿ, 11.12ಕ್ಕೆ ಪ್ರತ್ಯೇಕ ಸ್ಥಳದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿ, ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. </p>.<p>ವಿಂಡ್ಶೀಲ್ಡ್ ಬಿರುಕಿಗೆ ಕಾರಣ ಪತ್ತೆ ಮಾಡಿ, ಎಲ್ಲ ಸುರಕ್ಷತಾ ಕ್ರಮಗಳನ್ನು ಖಾತರಿಪಡಿಸಿಕೊಳ್ಳುವುದಕ್ಕಾಗಿ ಸಂಪೂರ್ಣ ತನಿಖೆ ನಡೆಸುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ನಿರ್ದೇಶಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>