<p><strong>ನವದೆಹಲಿ</strong>: ‘ಭಾರತದ ಸ್ವಾತಂತ್ರ್ಯ ಕುರಿತ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ದೇಶದ್ರೋಹಕ್ಕೆ ಸಮವಾಗಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದರು.</p><p>ದೆಹಲಿಯಲ್ಲಿ ನಿರ್ಮಾಣವಾಗಿರುವ ನೂತನ ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿರುವ ರಾಹುಲ್, ‘ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯಾದ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಮೋಹನ್ ಭಾಗವತ್ ಹೇಳಿಕೆ ಎಲ್ಲಾ ಭಾರತೀಯರಿಗೆ ಮಾಡಿದ ಅವಮಾನವಾಗಿದೆ’ ಎಂದು ಹೇಳಿದರು.</p><p>‘ಸ್ವಾತಂತ್ರ್ಯ ಚಳವಳಿ ಮತ್ತು ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನವನ್ನು ಮೋಹನ್ ಭಾಗವತ್ ಪ್ರದರ್ಶಿಸಿದ್ದಾರೆ. ನಿನ್ನೆ ಅವರು ಏನು ಹೇಳಿದ್ದಾರೊ ಅದು ದೇಶದ್ರೋಹಕ್ಕೆ ಸಮವಾಗಿದೆ’ ಎಂದು ಹೇಳಿದರು.</p><p>‘ಬೇರೆ ದೇಶದಲ್ಲಾಗಿದ್ದರೆ ಸಾರ್ವಜನಿಕವಾಗಿ ಇಂತಹ ಹೇಳಿಕೆ ನೀಡುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದರು’ ಎಂದರು.</p><p>‘1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬ ಮಾತು ಪ್ರತಿ ಭಾರತೀಯರಿಗೆ ಮಾಡಿದ ಅವಮಾನವಾಗಿದೆ. ಅಜ್ಞಾನದಿಂದ ಕೂಡಿದ ಇಂತಹ ಹೇಳಿಕೆಗಳನ್ನು ಆಲಿಸದೇ ಇರುವುದು ಸೂಕ್ತ’ ಎಂದು ತಿಳಿಸಿದರು.</p><p>ಇದೇ ವೇಳೆ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್, ‘ಮಹಾರಾಷ್ಟ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗಿರುವುದರ ಬಗ್ಗೆ ನಮಗೆ ಮಾಹಿತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿತ್ತು’ ಎಂದು ಕಿಡಿಕಾರಿದರು.</p><p>‘ಯಾವ ಉದ್ದೇಶಕ್ಕಾಗಿ ಹೀಗೆ ಮಾಡಲಾಗುತ್ತಿದೆ? ಚುನಾವಣಾ ಆಯೋಗವನ್ನು ನಾಶ ಮಾಡುತ್ತಿರುವುದೇಕೆ? ಅವರು ನಮಗೆ ಮತದಾರರ ಪಟ್ಟಿಯನ್ನು ಕೊಡಲು ನಿರಾಕರಿಸುವುದೇಕೆ?’ ಎಂದು ಕೇಳಿದರು.</p><p>ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಭಾರತದ ಸ್ವಾತಂತ್ರ್ಯ ಕುರಿತ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ದೇಶದ್ರೋಹಕ್ಕೆ ಸಮವಾಗಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದರು.</p><p>ದೆಹಲಿಯಲ್ಲಿ ನಿರ್ಮಾಣವಾಗಿರುವ ನೂತನ ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿರುವ ರಾಹುಲ್, ‘ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯಾದ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಮೋಹನ್ ಭಾಗವತ್ ಹೇಳಿಕೆ ಎಲ್ಲಾ ಭಾರತೀಯರಿಗೆ ಮಾಡಿದ ಅವಮಾನವಾಗಿದೆ’ ಎಂದು ಹೇಳಿದರು.</p><p>‘ಸ್ವಾತಂತ್ರ್ಯ ಚಳವಳಿ ಮತ್ತು ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನವನ್ನು ಮೋಹನ್ ಭಾಗವತ್ ಪ್ರದರ್ಶಿಸಿದ್ದಾರೆ. ನಿನ್ನೆ ಅವರು ಏನು ಹೇಳಿದ್ದಾರೊ ಅದು ದೇಶದ್ರೋಹಕ್ಕೆ ಸಮವಾಗಿದೆ’ ಎಂದು ಹೇಳಿದರು.</p><p>‘ಬೇರೆ ದೇಶದಲ್ಲಾಗಿದ್ದರೆ ಸಾರ್ವಜನಿಕವಾಗಿ ಇಂತಹ ಹೇಳಿಕೆ ನೀಡುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದರು’ ಎಂದರು.</p><p>‘1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬ ಮಾತು ಪ್ರತಿ ಭಾರತೀಯರಿಗೆ ಮಾಡಿದ ಅವಮಾನವಾಗಿದೆ. ಅಜ್ಞಾನದಿಂದ ಕೂಡಿದ ಇಂತಹ ಹೇಳಿಕೆಗಳನ್ನು ಆಲಿಸದೇ ಇರುವುದು ಸೂಕ್ತ’ ಎಂದು ತಿಳಿಸಿದರು.</p><p>ಇದೇ ವೇಳೆ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್, ‘ಮಹಾರಾಷ್ಟ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗಿರುವುದರ ಬಗ್ಗೆ ನಮಗೆ ಮಾಹಿತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿತ್ತು’ ಎಂದು ಕಿಡಿಕಾರಿದರು.</p><p>‘ಯಾವ ಉದ್ದೇಶಕ್ಕಾಗಿ ಹೀಗೆ ಮಾಡಲಾಗುತ್ತಿದೆ? ಚುನಾವಣಾ ಆಯೋಗವನ್ನು ನಾಶ ಮಾಡುತ್ತಿರುವುದೇಕೆ? ಅವರು ನಮಗೆ ಮತದಾರರ ಪಟ್ಟಿಯನ್ನು ಕೊಡಲು ನಿರಾಕರಿಸುವುದೇಕೆ?’ ಎಂದು ಕೇಳಿದರು.</p><p>ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>