<p><strong>ಜಮ್ಮು:</strong> ಭಾರಿ ಮಳೆ ಹಿನ್ನೆಲೆ ಜಮ್ಮು ಮತ್ತು ಕತ್ರಾ ನಿಲ್ದಾಣಗಳಿಂದ ಹೊರಡುವ ಮತ್ತು ಅಲ್ಲಿಗೆ ಬರುವ 68 ರೈಲುಗಳನ್ನು ಸೆಪ್ಟೆಂಬರ್ 30ರವರೆಗೆ ರದ್ದುಪಡಿಸಲಾಗಿದೆ. 24 ರೈಲುಗಳ ಸೇವೆ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಪಠಾಣ್ಕೋಟ್-ಜಮ್ಮು ವಿಭಾಗದ ಹಲವು ಸ್ಥಳಗಳಲ್ಲಿ ರೈಲು ಹಳಿಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಕಳೆದ 8 ದಿನಗಳಿಂದ ಜಮ್ಮು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ.</p>.<p>ಆಗಸ್ಟ್ 26 (ಮಂಗಳವಾರ)ರಿಂದ ಜಮ್ಮುವಿನಲ್ಲಿ ಭಾರಿ ಮಳೆಯಾಗುತ್ತಿದೆ. ರೈಲು ಮತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಜನ, ವಿಶೇಷವಾಗಿ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಈ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಜಮ್ಮು ತಾವಿ-ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ, ಜಮ್ಮು ತಾವಿ-ಕೋಲ್ಕತ್ತ ಮತ್ತು ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ನವದೆಹಲಿಗೆ ರೈಲುಗಳು ಕಾರ್ಯಾಚರಿಸುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಸಂಪರ್ಕ ಕ್ರಾಂತಿ ಮತ್ತು ಸೀಲ್ಡಾ ಎಕ್ಸ್ಪ್ರೆಸ್ ರೈಲು, ಕಾಂತ್ರಿ ಎಕ್ಸ್ಪ್ರೆಸ್, ವಂದೇ ಭಾರತ್, ತಿರುವನಂತಪುರ ಎಕ್ಸ್ಪ್ರೆಸ್ ಕಾರ್ಯಾಚರಣೆ ಆರಂಭಿಸಿವೆ. ಸೆಪ್ಟೆಂಬರ್ 7 ರಿಂದ ವಂದೇ ಭಾರತ್ ರೈಲು ಕಾರ್ಯಾಚರಣೆ ಆರಂಭಿಸಲಿದೆ ಎಂದೂ ಅವರು ಹೇಳಿದ್ದಾರೆ.</p>.ಜಮ್ಮು–ಕಾಶ್ಮೀರ: ಮೇಘಸ್ಫೋಟ, ಭೂಕುಸಿತದಿಂದ 12 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಭಾರಿ ಮಳೆ ಹಿನ್ನೆಲೆ ಜಮ್ಮು ಮತ್ತು ಕತ್ರಾ ನಿಲ್ದಾಣಗಳಿಂದ ಹೊರಡುವ ಮತ್ತು ಅಲ್ಲಿಗೆ ಬರುವ 68 ರೈಲುಗಳನ್ನು ಸೆಪ್ಟೆಂಬರ್ 30ರವರೆಗೆ ರದ್ದುಪಡಿಸಲಾಗಿದೆ. 24 ರೈಲುಗಳ ಸೇವೆ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಪಠಾಣ್ಕೋಟ್-ಜಮ್ಮು ವಿಭಾಗದ ಹಲವು ಸ್ಥಳಗಳಲ್ಲಿ ರೈಲು ಹಳಿಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಕಳೆದ 8 ದಿನಗಳಿಂದ ಜಮ್ಮು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ.</p>.<p>ಆಗಸ್ಟ್ 26 (ಮಂಗಳವಾರ)ರಿಂದ ಜಮ್ಮುವಿನಲ್ಲಿ ಭಾರಿ ಮಳೆಯಾಗುತ್ತಿದೆ. ರೈಲು ಮತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಜನ, ವಿಶೇಷವಾಗಿ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಈ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಜಮ್ಮು ತಾವಿ-ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ, ಜಮ್ಮು ತಾವಿ-ಕೋಲ್ಕತ್ತ ಮತ್ತು ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ನವದೆಹಲಿಗೆ ರೈಲುಗಳು ಕಾರ್ಯಾಚರಿಸುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಸಂಪರ್ಕ ಕ್ರಾಂತಿ ಮತ್ತು ಸೀಲ್ಡಾ ಎಕ್ಸ್ಪ್ರೆಸ್ ರೈಲು, ಕಾಂತ್ರಿ ಎಕ್ಸ್ಪ್ರೆಸ್, ವಂದೇ ಭಾರತ್, ತಿರುವನಂತಪುರ ಎಕ್ಸ್ಪ್ರೆಸ್ ಕಾರ್ಯಾಚರಣೆ ಆರಂಭಿಸಿವೆ. ಸೆಪ್ಟೆಂಬರ್ 7 ರಿಂದ ವಂದೇ ಭಾರತ್ ರೈಲು ಕಾರ್ಯಾಚರಣೆ ಆರಂಭಿಸಲಿದೆ ಎಂದೂ ಅವರು ಹೇಳಿದ್ದಾರೆ.</p>.ಜಮ್ಮು–ಕಾಶ್ಮೀರ: ಮೇಘಸ್ಫೋಟ, ಭೂಕುಸಿತದಿಂದ 12 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>