<p><strong>ನವದೆಹಲಿ</strong>: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್ ಅವರ ರ್ಯಾಲಿ ವೇಳೆ ಕರೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.</p><p>ನ್ಯಾಯಮೂರ್ತಿಗಳಾದ ಜೆ.ಕೆ ಮಾಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು, ಸಿಬಿಐ ತನಿಖೆಯ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ಸಮಿತಿಯನ್ನೂ ನೇಮಿಸಿದೆ.</p><p>ವಿಜಯ್ ಅವರು ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ್ಯಾಲಿ ನಡೆಸಿದ್ದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟಿದ್ದರು.</p><p>ಎಸ್ಐಟಿ ರಚನೆಗೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಪಕ್ಷ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 10ರಂದು ನಡೆಸಿದ್ದ ಪೀಠ, ಆದೇಶವನ್ನು ಕಾಯ್ದಿರಿಸಿತ್ತು.</p><p>ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸಿದ್ದಕ್ಕೆ ಮತ್ತು ಎಸ್ಐಟಿ ತನಿಖೆಗೆ ಆದೇಶಿಸಿದ್ದಕ್ಕಾಗಿ ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿ ಎನ್.ಸೆಂಥಿಲ್ಕುಮಾರ್ ಅವರನ್ನು ಪೀಠವು ತರಾಟೆಗೆ ತೆಗೆದುಕೊಂಡಿತು.</p><p>‘ಪ್ರಕರಣದ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿಗಳು ಮದುರೈ ಪೀಠದ ಮುಂದೆ ಬಾಕಿ ಇರುವಾಗ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಆದೇಶವಿಲ್ಲದೆಯೇ ಅರ್ಜಿಗಳನ್ನು ಪುರಸ್ಕರಿಸಲು ಸೆಂಥಿಲ್ಕುಮಾರ್ ಅವರಿಗೆ ಯಾವುದೇ ಅವಕಾಶವಿರಲಿಲ್ಲ’ ಎಂದು ಹೇಳಿತು.</p><p>ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಟಿವಿಕೆ ಆಗ್ರಹಿಸಿತ್ತು. ‘ಎಸ್ಐಟಿಯಲ್ಲಿ ತಮಿಳುನಾಡಿನ ಪೊಲೀಸ್ ಅಧಿಕಾರಿಗಳು ಮಾತ್ರ ಇದ್ದಾರೆ. ಅವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ’ ಎಂದು ಹೇಳಿತ್ತು.</p>.ಕರೂರು ಕಾಲ್ತುಳಿತ: ಎಸ್ಐಟಿ ರಚನೆ ಪ್ರಶ್ನಿಸಿ ಟಿವಿಕೆ ಪಕ್ಷ ಸುಪ್ರೀಂ ಕೋರ್ಟ್ಗೆ.ಕರೂರು ಕಾಲ್ತುಳಿತ| ನ್ಯಾಯಾಂಗ ನಿಂದನೆ ಪೋಸ್ಟ್ ಮಾಡಿದ್ದ ರಾಜಕೀಯ ಕಾರ್ಯಕರ್ತನ ಬಂಧನ.<p><strong>‘ತಪ್ಪು ಮಾಹಿತಿ ನೀಡಲಾಗಿದೆ’</strong></p><p><strong>ಚೆನ್ನೈ</strong>: ಕಾಲ್ತುಳಿತ ಬಗ್ಗೆ ಸಿಬಿಐ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸುವಾಗ ತಮಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಎರಡು ಸಂತ್ರಸ್ತ ಕುಟುಂಬಗಳು ಆರೋಪಿಸಿವೆ.</p><p>‘ಕುಟುಂಬದ ಸದಸ್ಯರಿಗೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಕ್ಕೆ ಸಂಬಂಧಿಸಿದ ಅರ್ಜಿ ಎಂದು ಭಾವಿಸಿ ಸಹಿ ಹಾಕಿದ್ದೇವೆ. ಅದು ಸಿಬಿಐ ತನಿಖೆ ಕೋರಿರುವ ಅರ್ಜಿ ಎಂಬ ಮಾಹಿತಿ ಇರಲಿಲ್ಲ’ ಎಂದು ಹೇಳಿವೆ.</p><p>‘ನಮ್ಮ ಪರವಾಗಿ ಸಿಬಿಐ ತನಿಖೆಗೆ ಕೋರಲಾಗಿದೆ ಎಂಬುದು ತಿಳಿದಿರಲಿಲ್ಲ. ಅರ್ಜಿಗೆ ಸಹಿ ಹಾಕಿರುವ ನನ್ನ ಪತಿ ಪನ್ನೀರಸೆಲ್ವಂ ಅವರು ನಮ್ಮನ್ನು ತೊರೆದು 9 ವರ್ಷಗಳಾಗಿವೆ’ ಎಂದು ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 9 ವರ್ಷದ ಬಾಲಕನ ತಾಯಿ ಶರ್ಮಿಳಾ ಹೇಳಿದ್ದಾರೆ.</p><p>‘ಪರಿಹಾರ ಮತ್ತು ಮಗನಿಗೆ ಉದ್ಯೋಗ ಸಿಗುತ್ತದೆ ಎಂಬ ಆಶಯದೊಂದಿಗೆ ಕೆಲವು ಕಾಗದಪತ್ರಗಳಿಗೆ ಸಹಿ ಹಾಕಿದ್ದೇನೆ’ ಎಂದು ದುರ್ಘಟನೆಯಲ್ಲಿ ಪತ್ನಿಯನ್ನು ಕಳೆದುಕೊಂಡಿರುವ ದಿನಗೂಲಿ ನೌಕರ ಪಿ.ಸೆಲ್ವರಾಜ್ ಹೇಳಿದ್ದಾರೆ.</p><p><strong>ಆದೇಶ ರದ್ದುಗೊಳಿಸಲೂಬಹುದು: ಡಿಎಂಕೆ</strong></p><p>ಕರೂರ್ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಿ ತಾನು ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸುವ ಸಾಧ್ಯತೆಗಳಿವೆ ಎಂದು ಡಿಎಂಕೆ ಸೋಮವಾರ ಹೇಳಿದೆ.</p><p>‘ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸಿದ್ದು ಅರಿವಿಗೆ ಬಂದಿಲ್ಲ ಎಂದು ಇಬ್ಬರು ವ್ಯಕ್ತಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ’ ಎಂದು ತಮಿಳುನಾಡು ಸರ್ಕಾರವನ್ನು ಪ್ರತಿನಿಧಿಸಿದ ಡಿಎಂಕೆ ರಾಜ್ಯಸಭಾ ಸದಸ್ಯ ಮತ್ತು ವಕೀಲ ಪಿ. ವಿಲ್ಸನ್ ತಿಳಿಸಿದರು.</p><p>ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಅರ್ಜಿಗಳನ್ನು ಮೋಸದಿಂದ ಸಲ್ಲಿಸಲಾಗಿದೆ ಎಂಬುದು ಸಾಬೀತಾದರೆ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ರದ್ದುಗೊಳಿಸುವ ಸಾಧ್ಯತೆಯಿದೆ’ ಎಂದರು. </p>.ತಪ್ಪೊಪ್ಪಿಕೊಂಡು, ಕ್ಷಮೆಯಾಚಿಸುವ ಸಮಯ: ಕರೂರು ಕಾಲ್ತುಳಿತ ಸ್ಥಳಕ್ಕೆ ಕಮಲ್ ಭೇಟಿ.ಕರೂರು ಕಾಲ್ತುಳಿತ ಪ್ರಕರಣ: ವಿಜಯ್ ಜೊತೆ ಸಖ್ಯ ಬೆಳೆಸಲು ಎಐಎಡಿಎಂಕೆ, BJP ಕಸರತ್ತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್ ಅವರ ರ್ಯಾಲಿ ವೇಳೆ ಕರೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.</p><p>ನ್ಯಾಯಮೂರ್ತಿಗಳಾದ ಜೆ.ಕೆ ಮಾಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು, ಸಿಬಿಐ ತನಿಖೆಯ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ಸಮಿತಿಯನ್ನೂ ನೇಮಿಸಿದೆ.</p><p>ವಿಜಯ್ ಅವರು ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ್ಯಾಲಿ ನಡೆಸಿದ್ದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟಿದ್ದರು.</p><p>ಎಸ್ಐಟಿ ರಚನೆಗೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಪಕ್ಷ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 10ರಂದು ನಡೆಸಿದ್ದ ಪೀಠ, ಆದೇಶವನ್ನು ಕಾಯ್ದಿರಿಸಿತ್ತು.</p><p>ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸಿದ್ದಕ್ಕೆ ಮತ್ತು ಎಸ್ಐಟಿ ತನಿಖೆಗೆ ಆದೇಶಿಸಿದ್ದಕ್ಕಾಗಿ ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿ ಎನ್.ಸೆಂಥಿಲ್ಕುಮಾರ್ ಅವರನ್ನು ಪೀಠವು ತರಾಟೆಗೆ ತೆಗೆದುಕೊಂಡಿತು.</p><p>‘ಪ್ರಕರಣದ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿಗಳು ಮದುರೈ ಪೀಠದ ಮುಂದೆ ಬಾಕಿ ಇರುವಾಗ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಆದೇಶವಿಲ್ಲದೆಯೇ ಅರ್ಜಿಗಳನ್ನು ಪುರಸ್ಕರಿಸಲು ಸೆಂಥಿಲ್ಕುಮಾರ್ ಅವರಿಗೆ ಯಾವುದೇ ಅವಕಾಶವಿರಲಿಲ್ಲ’ ಎಂದು ಹೇಳಿತು.</p><p>ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಟಿವಿಕೆ ಆಗ್ರಹಿಸಿತ್ತು. ‘ಎಸ್ಐಟಿಯಲ್ಲಿ ತಮಿಳುನಾಡಿನ ಪೊಲೀಸ್ ಅಧಿಕಾರಿಗಳು ಮಾತ್ರ ಇದ್ದಾರೆ. ಅವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ’ ಎಂದು ಹೇಳಿತ್ತು.</p>.ಕರೂರು ಕಾಲ್ತುಳಿತ: ಎಸ್ಐಟಿ ರಚನೆ ಪ್ರಶ್ನಿಸಿ ಟಿವಿಕೆ ಪಕ್ಷ ಸುಪ್ರೀಂ ಕೋರ್ಟ್ಗೆ.ಕರೂರು ಕಾಲ್ತುಳಿತ| ನ್ಯಾಯಾಂಗ ನಿಂದನೆ ಪೋಸ್ಟ್ ಮಾಡಿದ್ದ ರಾಜಕೀಯ ಕಾರ್ಯಕರ್ತನ ಬಂಧನ.<p><strong>‘ತಪ್ಪು ಮಾಹಿತಿ ನೀಡಲಾಗಿದೆ’</strong></p><p><strong>ಚೆನ್ನೈ</strong>: ಕಾಲ್ತುಳಿತ ಬಗ್ಗೆ ಸಿಬಿಐ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸುವಾಗ ತಮಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಎರಡು ಸಂತ್ರಸ್ತ ಕುಟುಂಬಗಳು ಆರೋಪಿಸಿವೆ.</p><p>‘ಕುಟುಂಬದ ಸದಸ್ಯರಿಗೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಕ್ಕೆ ಸಂಬಂಧಿಸಿದ ಅರ್ಜಿ ಎಂದು ಭಾವಿಸಿ ಸಹಿ ಹಾಕಿದ್ದೇವೆ. ಅದು ಸಿಬಿಐ ತನಿಖೆ ಕೋರಿರುವ ಅರ್ಜಿ ಎಂಬ ಮಾಹಿತಿ ಇರಲಿಲ್ಲ’ ಎಂದು ಹೇಳಿವೆ.</p><p>‘ನಮ್ಮ ಪರವಾಗಿ ಸಿಬಿಐ ತನಿಖೆಗೆ ಕೋರಲಾಗಿದೆ ಎಂಬುದು ತಿಳಿದಿರಲಿಲ್ಲ. ಅರ್ಜಿಗೆ ಸಹಿ ಹಾಕಿರುವ ನನ್ನ ಪತಿ ಪನ್ನೀರಸೆಲ್ವಂ ಅವರು ನಮ್ಮನ್ನು ತೊರೆದು 9 ವರ್ಷಗಳಾಗಿವೆ’ ಎಂದು ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 9 ವರ್ಷದ ಬಾಲಕನ ತಾಯಿ ಶರ್ಮಿಳಾ ಹೇಳಿದ್ದಾರೆ.</p><p>‘ಪರಿಹಾರ ಮತ್ತು ಮಗನಿಗೆ ಉದ್ಯೋಗ ಸಿಗುತ್ತದೆ ಎಂಬ ಆಶಯದೊಂದಿಗೆ ಕೆಲವು ಕಾಗದಪತ್ರಗಳಿಗೆ ಸಹಿ ಹಾಕಿದ್ದೇನೆ’ ಎಂದು ದುರ್ಘಟನೆಯಲ್ಲಿ ಪತ್ನಿಯನ್ನು ಕಳೆದುಕೊಂಡಿರುವ ದಿನಗೂಲಿ ನೌಕರ ಪಿ.ಸೆಲ್ವರಾಜ್ ಹೇಳಿದ್ದಾರೆ.</p><p><strong>ಆದೇಶ ರದ್ದುಗೊಳಿಸಲೂಬಹುದು: ಡಿಎಂಕೆ</strong></p><p>ಕರೂರ್ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಿ ತಾನು ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸುವ ಸಾಧ್ಯತೆಗಳಿವೆ ಎಂದು ಡಿಎಂಕೆ ಸೋಮವಾರ ಹೇಳಿದೆ.</p><p>‘ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸಿದ್ದು ಅರಿವಿಗೆ ಬಂದಿಲ್ಲ ಎಂದು ಇಬ್ಬರು ವ್ಯಕ್ತಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ’ ಎಂದು ತಮಿಳುನಾಡು ಸರ್ಕಾರವನ್ನು ಪ್ರತಿನಿಧಿಸಿದ ಡಿಎಂಕೆ ರಾಜ್ಯಸಭಾ ಸದಸ್ಯ ಮತ್ತು ವಕೀಲ ಪಿ. ವಿಲ್ಸನ್ ತಿಳಿಸಿದರು.</p><p>ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಅರ್ಜಿಗಳನ್ನು ಮೋಸದಿಂದ ಸಲ್ಲಿಸಲಾಗಿದೆ ಎಂಬುದು ಸಾಬೀತಾದರೆ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ರದ್ದುಗೊಳಿಸುವ ಸಾಧ್ಯತೆಯಿದೆ’ ಎಂದರು. </p>.ತಪ್ಪೊಪ್ಪಿಕೊಂಡು, ಕ್ಷಮೆಯಾಚಿಸುವ ಸಮಯ: ಕರೂರು ಕಾಲ್ತುಳಿತ ಸ್ಥಳಕ್ಕೆ ಕಮಲ್ ಭೇಟಿ.ಕರೂರು ಕಾಲ್ತುಳಿತ ಪ್ರಕರಣ: ವಿಜಯ್ ಜೊತೆ ಸಖ್ಯ ಬೆಳೆಸಲು ಎಐಎಡಿಎಂಕೆ, BJP ಕಸರತ್ತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>