<p><strong>ಶ್ರೀನಗರ:</strong> ಇರಾನ್ ಸರ್ವೊಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ಹತ್ಯೆ ಬಳಿಕ ಭಾರಿ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಕಾಶ್ಮೀರದಲ್ಲಿ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.</p>.ಖಮೇನಿ ಹತ್ಯೆ ಬೆನ್ನಲ್ಲೇ ಕಾಶ್ಮೀರ ಸೇರಿ ಹಲವು ಕಡೆಗಳಲ್ಲಿ ಭುಗಿಲೆದ್ದ ಪ್ರತಿಭಟನೆ.<p>ಕಾಶ್ಮೀರದ ಹಲವು ಕಡೆಗಳಲ್ಲಿ ಕಠಿಣ ನಿರ್ಬಂಧ ಹೇರಲಾಗಿದೆ. ಲಾಲ್ಚೌಕ್ನಲ್ಲಿರುವ ಐತಿಹಾಸಿಕ ‘ಘಂಟಾ ಘರ್’ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೀಲ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ನಗರದಾದ್ಯಂತ ಪ್ರತಿಭಟನೆ ಹಾಗೂ ಸಮಾವೇಶವನ್ನು ತಡೆಯಲು ದೊಡ್ಡ ಸಂಖ್ಯೆಯ ಪೊಲೀಸ್ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಲಾಗಿದೆ.</p><p>ಕಾಶ್ಮೀರದಲ್ಲಿ ಸುಮಾರು 15 ಲಕ್ಷದಷ್ಟು ಶಿಯಾ ಮುಸ್ಲಿಮರಿದ್ದು, ಖಮೇನಿ ಹತ್ಯೆ ಬಳಿಕ ಲಾಲ್ ಚೌಕ, ಸೈದಾ ಕಡಲ್, ಬುದ್ಗಾವ್, ಬಂಡಿಪೊರ, ಅನಂತ್ನಾಗ್ ಹಾಗೂ ಪುಲ್ವಮಾದಲ್ಲಿ ಪ್ರತಿಭಟನೆಗಳು ನಡೆದಿದ್ದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.Ranji Trophy 2026: ದೇಶಿ ಕ್ರಿಕೆಟ್ಗೆ ಹೊಸ ‘ರಾಜ’ ಜಮ್ಮು–ಕಾಶ್ಮೀರ.<p>ಪ್ರತಿಭಟನಾಕಾರರು ತಮ್ಮ ಎದೆಗೆ ಹೊಡೆದುಕೊಂಡು ಅಮೆರಿಕ ಹಾಗೂ ಇಸ್ರೇಲ್ ವಿರೋಧಿ ಘೋಷಣೆಗಳನ್ನು ಕೂಗಿದ್ದರು.</p><p>ಕಾನೂನು ಸುವ್ಯವಸ್ಥೆ ಕಾಪಾಡಲೋಸುಗ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧಗಳನ್ನು ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಾಂಕ್ರಿಟ್ ವೈರ್ ಹಾಗೂ ಬ್ಯಾರಿಕೇಡ್ಗಳ ಮೂಲಕ ನಗರಕ್ಕೆ ಬರುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಶಿಯಾ ಪ್ರಾಬಲ್ಯ ಇರುವ ಹಲವು ಪ್ರದೇಶಗಳಲ್ಲಿ ಇಂತಹದೇ ನಿರ್ಬಂಧ ಹೇರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಮುತಾಹಿದ ಮಜ್ಲಿಸ್–ಎ–ಉಲಮಾ ಸಂಘಟನೆಯ ಮುಖ್ಯಸ್ಥ ಮಿರ್ವಾಯಜ್ ಉಮರ್ ಫಾರೂಕ್ ಅವರು ಒಂದು ದಿನದ ಮುಷ್ಕರ ಕರೆಕೊಟ್ಟ ಬೆನ್ನಲ್ಲೇ ಈ ನಿರ್ಬಂಧಗಳನ್ನು ಜೇರಲಾಗಿದೆ.</p><p>ಈ ಮುಷ್ಕರಕ್ಕೆ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಸೇರಿ ಹಲವು ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ.</p>.ಇರಾನ್ ಮೇಲೆ ದಾಳಿ ನಡೆಸಲು ಆಂಥ್ರೋಪಿಕ್ನ ‘ಕ್ಲಾಡ್’ ಎ.ಐ ಬಳಸಿದ ಅಮೆರಿಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಇರಾನ್ ಸರ್ವೊಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ಹತ್ಯೆ ಬಳಿಕ ಭಾರಿ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಕಾಶ್ಮೀರದಲ್ಲಿ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.</p>.ಖಮೇನಿ ಹತ್ಯೆ ಬೆನ್ನಲ್ಲೇ ಕಾಶ್ಮೀರ ಸೇರಿ ಹಲವು ಕಡೆಗಳಲ್ಲಿ ಭುಗಿಲೆದ್ದ ಪ್ರತಿಭಟನೆ.<p>ಕಾಶ್ಮೀರದ ಹಲವು ಕಡೆಗಳಲ್ಲಿ ಕಠಿಣ ನಿರ್ಬಂಧ ಹೇರಲಾಗಿದೆ. ಲಾಲ್ಚೌಕ್ನಲ್ಲಿರುವ ಐತಿಹಾಸಿಕ ‘ಘಂಟಾ ಘರ್’ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೀಲ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ನಗರದಾದ್ಯಂತ ಪ್ರತಿಭಟನೆ ಹಾಗೂ ಸಮಾವೇಶವನ್ನು ತಡೆಯಲು ದೊಡ್ಡ ಸಂಖ್ಯೆಯ ಪೊಲೀಸ್ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಲಾಗಿದೆ.</p><p>ಕಾಶ್ಮೀರದಲ್ಲಿ ಸುಮಾರು 15 ಲಕ್ಷದಷ್ಟು ಶಿಯಾ ಮುಸ್ಲಿಮರಿದ್ದು, ಖಮೇನಿ ಹತ್ಯೆ ಬಳಿಕ ಲಾಲ್ ಚೌಕ, ಸೈದಾ ಕಡಲ್, ಬುದ್ಗಾವ್, ಬಂಡಿಪೊರ, ಅನಂತ್ನಾಗ್ ಹಾಗೂ ಪುಲ್ವಮಾದಲ್ಲಿ ಪ್ರತಿಭಟನೆಗಳು ನಡೆದಿದ್ದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.Ranji Trophy 2026: ದೇಶಿ ಕ್ರಿಕೆಟ್ಗೆ ಹೊಸ ‘ರಾಜ’ ಜಮ್ಮು–ಕಾಶ್ಮೀರ.<p>ಪ್ರತಿಭಟನಾಕಾರರು ತಮ್ಮ ಎದೆಗೆ ಹೊಡೆದುಕೊಂಡು ಅಮೆರಿಕ ಹಾಗೂ ಇಸ್ರೇಲ್ ವಿರೋಧಿ ಘೋಷಣೆಗಳನ್ನು ಕೂಗಿದ್ದರು.</p><p>ಕಾನೂನು ಸುವ್ಯವಸ್ಥೆ ಕಾಪಾಡಲೋಸುಗ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧಗಳನ್ನು ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಾಂಕ್ರಿಟ್ ವೈರ್ ಹಾಗೂ ಬ್ಯಾರಿಕೇಡ್ಗಳ ಮೂಲಕ ನಗರಕ್ಕೆ ಬರುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಶಿಯಾ ಪ್ರಾಬಲ್ಯ ಇರುವ ಹಲವು ಪ್ರದೇಶಗಳಲ್ಲಿ ಇಂತಹದೇ ನಿರ್ಬಂಧ ಹೇರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಮುತಾಹಿದ ಮಜ್ಲಿಸ್–ಎ–ಉಲಮಾ ಸಂಘಟನೆಯ ಮುಖ್ಯಸ್ಥ ಮಿರ್ವಾಯಜ್ ಉಮರ್ ಫಾರೂಕ್ ಅವರು ಒಂದು ದಿನದ ಮುಷ್ಕರ ಕರೆಕೊಟ್ಟ ಬೆನ್ನಲ್ಲೇ ಈ ನಿರ್ಬಂಧಗಳನ್ನು ಜೇರಲಾಗಿದೆ.</p><p>ಈ ಮುಷ್ಕರಕ್ಕೆ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಸೇರಿ ಹಲವು ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ.</p>.ಇರಾನ್ ಮೇಲೆ ದಾಳಿ ನಡೆಸಲು ಆಂಥ್ರೋಪಿಕ್ನ ‘ಕ್ಲಾಡ್’ ಎ.ಐ ಬಳಸಿದ ಅಮೆರಿಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>