<p>ಕೇದಾರನಾಥ (ಉತ್ತರಾಖಂಡ): ಹಿಮಾಲಯದ ಮಡಿಲಲ್ಲಿರುವ ಕೇದಾರನಾಥ ದೇಗುಲವನ್ನು ಶುಕ್ರವಾರ ತೆರೆದಿದ್ದು, 12 ಸಾವಿರಕ್ಕೂ ಹೆಚ್ಚು ಯಾತ್ರಿಕರು ದರ್ಶನ ಪಡೆದರು.</p><p>ನಸುಕಿನ ಜಾವ ಐದಕ್ಕೆ ದೇಗುಲದ ದ್ವಾರ ತೆರೆಯುವ ಧಾರ್ಮಿಕ ವಿಧಿ–ವಿಧಾನ ಆರಂಭಗೊಂಡವು. ಏಳು ಗಂಟೆಗೆ ವಿಧ್ಯುಕ್ತವಾಗಿ ತೆರೆಯಲಾಯಿತು ಎಂದು ಬದರಿನಾಥ–ಕೇದಾರನಾಥ ದೇಗುಲ ಸಮಿತಿ (ಬಿಕೆಟಿಸಿ) ತಿಳಿಸಿದೆ.</p><p>11 ಸಾವಿರ ಅಡಿ ಎತ್ತರದಲ್ಲಿರುವ ದೇವಳವನ್ನು 108 ಟನ್ ಪುಷ್ಪಗಳಿಂದ ಅಲಂಕರಿಸಲಾಗಿದೆ. ಇದಕ್ಕಾಗಿಯೇ ನೇಪಾಳ, ಥೈಲ್ಯಾಂಡ್, ಶ್ರೀಲಂಕಾ ಸೇರಿದಂತೆ ವಿವಿಧ ದೇಶಗಳಿಂದ ಗುಲಾಬಿ, ಮಾರಿಗೋಲ್ಡ್ ಸೇರಿದಂತೆ 54 ತರಹೇವಾರಿ ಪುಷ್ಪಗಳನ್ನು ತರಿಸಿಕೊಳ್ಳಲಾಗಿತ್ತು ಎಂದು ಬಿಕೆಟಿಸಿ ಮಾಧ್ಯಮ ವಕ್ತಾರ ಹರೀಶ್ ಗೌರ್ ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪಾಲ್ಗೊಂಡಿದ್ದರು.</p><p><strong>ಆರತಿ</strong> </p><p>ಮಂದಾಕಿನಿ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಈ ವರ್ಷದಿಂದ ಗಂಗಾರತಿ ಮಾದರಿಯಲ್ಲೇ ಆರತಿ ನಡೆಸಲಾಗುವುದು ಎಂದು ಬಿಕೆಟಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯ್ ಪ್ರಸಾದ್ ಥಾಪ್ಲಿಯಾಲ್ ತಿಳಿಸಿದ್ದು, ಭಕ್ತರು ಈ ದೃಶ್ಯ ವೈಭವ ಕಣ್ತುಂಬಿಕೊಳ್ಳಲು ಮೂರುಕಡೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.</p><p>ಗಂಗೋತ್ರಿ, ಯಮುನೋತ್ರಿ ದೇಗುಲಗಳ ದ್ವಾರ ಏ. 30ರಂದು ತೆರೆದಿದ್ದು, ಬದರಿನಾಥದ ಬಾಗಿಲು ಮೇ 4ರಂದು ತೆರೆಯಲಿದೆ.</p><p>ಚಾರ್ ಧಾಮ್ ಯಾತ್ರೆಯ ನಾಲ್ಕು ದೇಗುಲಗಳಲ್ಲಿ ಮೂರನೇ ದೇವಾಲಯವಾಗಿರುವ ಕೇದಾರನಾಥವು ಪ್ರಮುಖವಾದದ್ದು. ಅಪಾರ ಸಂಖ್ಯೆಯ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ. ಇದು 11ನೇ ಜ್ಯೋತಿರ್ಲಿಂಗವೂ ಆಗಿದೆ. ಚಳಿಗಾಲದಲ್ಲಿ ಮುಚ್ಚಲ್ಪಟ್ಟಿದ್ದ ದೇಗುಲ ಇದೀಗ ತೆರೆದಿದೆ.</p><p>ಏ. 30ರಂದೇ ದ್ವಾರ ತೆರೆದ ಗಂಗೋತ್ರಿ, ಯಮುನೋತ್ರಿ ಬದರಿನಾಥನ ಬಾಗಿಲು ತೆರೆಯುವಿಕೆ ನಾಳೆ ಕೇದಾರನಾಥದಲ್ಲಿ ಈ ವರ್ಷದಿಂದಲೇ ಆರತಿ</p>.ತಿರುಪತಿ: ಭಕ್ತರ ಅಭಿಪ್ರಾಯ ಸಂಗ್ರಹಕ್ಕೆ ವಾಟ್ಸ್ಆ್ಯಪ್ ಆಧಾರಿತ ವ್ಯವಸ್ಥೆ ಜಾರಿ.ಗುಡುಗು ಸಹಿತ ಭಾರಿ ಮಳೆ: ದೆಹಲಿಯಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಸಂಚಾರ ವ್ಯತ್ಯಯ.ಹಮ್ದರ್ದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲ್ಲ: ಕೋರ್ಟ್ಗೆ ರಾಮದೇವ ಭರವಸೆ.ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್ಗೆ ಕೋರ್ಟ್ ನೋಟಿಸ್. <p>ಕಳೆದ ವರ್ಷ 48 ಲಕ್ಷ ಯಾತ್ರಿಕರು ಚಾರ್ ಧಾಮ್ ಯಾತ್ರೆಯಲ್ಲಿ ಭಾಗಿಯಾಗಿದ್ದರೆ, ಪ್ರಸ್ತುತ ವರ್ಷ ಈ ಸಂಖ್ಯೆ 60 ಲಕ್ಷ ತಲುಪುವ ನಿರೀಕ್ಷೆಯಿದೆ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೇದಾರನಾಥ (ಉತ್ತರಾಖಂಡ): ಹಿಮಾಲಯದ ಮಡಿಲಲ್ಲಿರುವ ಕೇದಾರನಾಥ ದೇಗುಲವನ್ನು ಶುಕ್ರವಾರ ತೆರೆದಿದ್ದು, 12 ಸಾವಿರಕ್ಕೂ ಹೆಚ್ಚು ಯಾತ್ರಿಕರು ದರ್ಶನ ಪಡೆದರು.</p><p>ನಸುಕಿನ ಜಾವ ಐದಕ್ಕೆ ದೇಗುಲದ ದ್ವಾರ ತೆರೆಯುವ ಧಾರ್ಮಿಕ ವಿಧಿ–ವಿಧಾನ ಆರಂಭಗೊಂಡವು. ಏಳು ಗಂಟೆಗೆ ವಿಧ್ಯುಕ್ತವಾಗಿ ತೆರೆಯಲಾಯಿತು ಎಂದು ಬದರಿನಾಥ–ಕೇದಾರನಾಥ ದೇಗುಲ ಸಮಿತಿ (ಬಿಕೆಟಿಸಿ) ತಿಳಿಸಿದೆ.</p><p>11 ಸಾವಿರ ಅಡಿ ಎತ್ತರದಲ್ಲಿರುವ ದೇವಳವನ್ನು 108 ಟನ್ ಪುಷ್ಪಗಳಿಂದ ಅಲಂಕರಿಸಲಾಗಿದೆ. ಇದಕ್ಕಾಗಿಯೇ ನೇಪಾಳ, ಥೈಲ್ಯಾಂಡ್, ಶ್ರೀಲಂಕಾ ಸೇರಿದಂತೆ ವಿವಿಧ ದೇಶಗಳಿಂದ ಗುಲಾಬಿ, ಮಾರಿಗೋಲ್ಡ್ ಸೇರಿದಂತೆ 54 ತರಹೇವಾರಿ ಪುಷ್ಪಗಳನ್ನು ತರಿಸಿಕೊಳ್ಳಲಾಗಿತ್ತು ಎಂದು ಬಿಕೆಟಿಸಿ ಮಾಧ್ಯಮ ವಕ್ತಾರ ಹರೀಶ್ ಗೌರ್ ತಿಳಿಸಿದ್ದಾರೆ.</p><p>ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪಾಲ್ಗೊಂಡಿದ್ದರು.</p><p><strong>ಆರತಿ</strong> </p><p>ಮಂದಾಕಿನಿ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಈ ವರ್ಷದಿಂದ ಗಂಗಾರತಿ ಮಾದರಿಯಲ್ಲೇ ಆರತಿ ನಡೆಸಲಾಗುವುದು ಎಂದು ಬಿಕೆಟಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯ್ ಪ್ರಸಾದ್ ಥಾಪ್ಲಿಯಾಲ್ ತಿಳಿಸಿದ್ದು, ಭಕ್ತರು ಈ ದೃಶ್ಯ ವೈಭವ ಕಣ್ತುಂಬಿಕೊಳ್ಳಲು ಮೂರುಕಡೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.</p><p>ಗಂಗೋತ್ರಿ, ಯಮುನೋತ್ರಿ ದೇಗುಲಗಳ ದ್ವಾರ ಏ. 30ರಂದು ತೆರೆದಿದ್ದು, ಬದರಿನಾಥದ ಬಾಗಿಲು ಮೇ 4ರಂದು ತೆರೆಯಲಿದೆ.</p><p>ಚಾರ್ ಧಾಮ್ ಯಾತ್ರೆಯ ನಾಲ್ಕು ದೇಗುಲಗಳಲ್ಲಿ ಮೂರನೇ ದೇವಾಲಯವಾಗಿರುವ ಕೇದಾರನಾಥವು ಪ್ರಮುಖವಾದದ್ದು. ಅಪಾರ ಸಂಖ್ಯೆಯ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ. ಇದು 11ನೇ ಜ್ಯೋತಿರ್ಲಿಂಗವೂ ಆಗಿದೆ. ಚಳಿಗಾಲದಲ್ಲಿ ಮುಚ್ಚಲ್ಪಟ್ಟಿದ್ದ ದೇಗುಲ ಇದೀಗ ತೆರೆದಿದೆ.</p><p>ಏ. 30ರಂದೇ ದ್ವಾರ ತೆರೆದ ಗಂಗೋತ್ರಿ, ಯಮುನೋತ್ರಿ ಬದರಿನಾಥನ ಬಾಗಿಲು ತೆರೆಯುವಿಕೆ ನಾಳೆ ಕೇದಾರನಾಥದಲ್ಲಿ ಈ ವರ್ಷದಿಂದಲೇ ಆರತಿ</p>.ತಿರುಪತಿ: ಭಕ್ತರ ಅಭಿಪ್ರಾಯ ಸಂಗ್ರಹಕ್ಕೆ ವಾಟ್ಸ್ಆ್ಯಪ್ ಆಧಾರಿತ ವ್ಯವಸ್ಥೆ ಜಾರಿ.ಗುಡುಗು ಸಹಿತ ಭಾರಿ ಮಳೆ: ದೆಹಲಿಯಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಸಂಚಾರ ವ್ಯತ್ಯಯ.ಹಮ್ದರ್ದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲ್ಲ: ಕೋರ್ಟ್ಗೆ ರಾಮದೇವ ಭರವಸೆ.ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್ಗೆ ಕೋರ್ಟ್ ನೋಟಿಸ್. <p>ಕಳೆದ ವರ್ಷ 48 ಲಕ್ಷ ಯಾತ್ರಿಕರು ಚಾರ್ ಧಾಮ್ ಯಾತ್ರೆಯಲ್ಲಿ ಭಾಗಿಯಾಗಿದ್ದರೆ, ಪ್ರಸ್ತುತ ವರ್ಷ ಈ ಸಂಖ್ಯೆ 60 ಲಕ್ಷ ತಲುಪುವ ನಿರೀಕ್ಷೆಯಿದೆ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>