<p><strong>ಕೊಚ್ಚಿ(ಕೇರಳ):</strong> ಬೃಹತ್ ನೀರಿನ ಟ್ಯಾಂಕ್ವೊಂದು ಕುಸಿದು ಬಿದ್ದ ಘಟನೆ ಕೊಚ್ಚಿಯ ತಮ್ಮನಂ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಟ್ಯಾಂಕ್ನಲ್ಲಿದ್ದ ನೀರು ಹತ್ತಿರದ ಮನೆಗಳಿಗೆ ನುಗ್ಗಿದ್ದು, ನೀರಿನ ಪ್ರವಾಹದಲ್ಲಿ ವಾಹನಗಳು ಕೊಚ್ಚಿಕೊಂಡು ಹೋಗಿವೆ.</p><p>ಕೇರಳ ಜಲ ಪ್ರಾಧಿಕಾರಕ್ಕೆ ಸೇರಿದ ಈ ಟ್ಯಾಂಕ್ ಮುಂಜಾನೆ 2 ಗಂಟೆಯ ಸುಮಾರಿಗೆ ಕುಸಿದಿದೆ. ಈ ಟ್ಯಾಂಕ್ 1.38 ಕೋಟಿ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸುಮಾರು 10 ಮನೆಗಳಿಗೆ ನೀರು ನುಗ್ಗಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.</p><p>‘ನೀರಿನ ರಭಸಕ್ಕೆ ಇಲ್ಲಿ ನಿಲ್ಲಿಸಿದ್ದ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಮನೆಗಳಿಗೂ ನೀರು ನುಗ್ಗಿದ್ದು ನೆಲಮಹಡಿಯಲ್ಲಿದ್ದ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳು, ಪೀಠೋಪಕರಣಗಳು ಹಾನಿಯಾಗಿವೆ. ಹತ್ತಿರದ ಆರೋಗ್ಯ ಕೇಂದ್ರಕ್ಕೂ ನೀರು ನುಗ್ಗಿದ್ದರಿಂದ ಔಷಧಗಳು ಹಾಳಾಗಿವೆ’ ಎಂದು ಎರ್ನಾಕುಲಂ ಶಾಸಕ ಟಿ. ಜೆ. ವಿನೋದ್ ಹೇಳಿದ್ದಾರೆ.</p><p>‘ಈ ಟ್ಯಾಂಕ್ ಅನ್ನು 50 ವರ್ಷಗಳ ಹಿಂದೆಯೇ ನಿರ್ಮಿಸಲಾಗಿದೆ. ಕೊಚ್ಚಿ ನಗರ ಮತ್ತು ತ್ರಿಪುನಿತುರ ಪ್ರದೇಶಗಳಿಗೆ ಇಲ್ಲಿಂದಲೇ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ</p><p>‘ಘಟನೆಯಲ್ಲಿ ಮೂರು ಮನೆಗಳ ಕಾಂಪೌಂಡ್ ಗೋಡೆಗಳು ಹಾನಿಗೊಳಗಾಗಿವೆ. ತಕ್ಷಣ ಪರಿಹಾರ ನೀಡಬೇಕು’ ಎಂದು ನಿವಾಸಿಯೊಬ್ಬರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ(ಕೇರಳ):</strong> ಬೃಹತ್ ನೀರಿನ ಟ್ಯಾಂಕ್ವೊಂದು ಕುಸಿದು ಬಿದ್ದ ಘಟನೆ ಕೊಚ್ಚಿಯ ತಮ್ಮನಂ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಟ್ಯಾಂಕ್ನಲ್ಲಿದ್ದ ನೀರು ಹತ್ತಿರದ ಮನೆಗಳಿಗೆ ನುಗ್ಗಿದ್ದು, ನೀರಿನ ಪ್ರವಾಹದಲ್ಲಿ ವಾಹನಗಳು ಕೊಚ್ಚಿಕೊಂಡು ಹೋಗಿವೆ.</p><p>ಕೇರಳ ಜಲ ಪ್ರಾಧಿಕಾರಕ್ಕೆ ಸೇರಿದ ಈ ಟ್ಯಾಂಕ್ ಮುಂಜಾನೆ 2 ಗಂಟೆಯ ಸುಮಾರಿಗೆ ಕುಸಿದಿದೆ. ಈ ಟ್ಯಾಂಕ್ 1.38 ಕೋಟಿ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸುಮಾರು 10 ಮನೆಗಳಿಗೆ ನೀರು ನುಗ್ಗಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.</p><p>‘ನೀರಿನ ರಭಸಕ್ಕೆ ಇಲ್ಲಿ ನಿಲ್ಲಿಸಿದ್ದ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಮನೆಗಳಿಗೂ ನೀರು ನುಗ್ಗಿದ್ದು ನೆಲಮಹಡಿಯಲ್ಲಿದ್ದ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳು, ಪೀಠೋಪಕರಣಗಳು ಹಾನಿಯಾಗಿವೆ. ಹತ್ತಿರದ ಆರೋಗ್ಯ ಕೇಂದ್ರಕ್ಕೂ ನೀರು ನುಗ್ಗಿದ್ದರಿಂದ ಔಷಧಗಳು ಹಾಳಾಗಿವೆ’ ಎಂದು ಎರ್ನಾಕುಲಂ ಶಾಸಕ ಟಿ. ಜೆ. ವಿನೋದ್ ಹೇಳಿದ್ದಾರೆ.</p><p>‘ಈ ಟ್ಯಾಂಕ್ ಅನ್ನು 50 ವರ್ಷಗಳ ಹಿಂದೆಯೇ ನಿರ್ಮಿಸಲಾಗಿದೆ. ಕೊಚ್ಚಿ ನಗರ ಮತ್ತು ತ್ರಿಪುನಿತುರ ಪ್ರದೇಶಗಳಿಗೆ ಇಲ್ಲಿಂದಲೇ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ</p><p>‘ಘಟನೆಯಲ್ಲಿ ಮೂರು ಮನೆಗಳ ಕಾಂಪೌಂಡ್ ಗೋಡೆಗಳು ಹಾನಿಗೊಳಗಾಗಿವೆ. ತಕ್ಷಣ ಪರಿಹಾರ ನೀಡಬೇಕು’ ಎಂದು ನಿವಾಸಿಯೊಬ್ಬರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>