<p><strong>ಸಹರಾನ್ಪುರ (ಉತ್ತರಪ್ರದೇಶ):</strong> 10 ವರ್ಷಗಳ ಹಿಂದೆ ಭೂ ವಿವಾದ ಸಂಬಂಧ ಇಬ್ಬರು ಸಹೋದರರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.</p><p>ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿಕಾಸ್ ಗುಪ್ತಾ ನೇತೃತ್ವದ ನ್ಯಾಯಪೀಠವು ಅಪರಾಧಿಗಳಿಗೆ ₹10.73 ಲಕ್ಷ ದಂಡ ವಿಧಿಸಿದೆ ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ (ಎಡಿಜಿಸಿ) ದೀಪಕ್ ಸೈನಿ ತಿಳಿಸಿದ್ದಾರೆ.</p><p>ನ್ಯಾಯಾಲಯವು ಶಿಕ್ಷೆ ವಿಧಿಸಿದ 13 ಆರೋಪಿಗಳ ಪೈಕಿ ಮುನಾವರ್, ಮುಸ್ತಫಾ, ಸನಾವರ್ ಮತ್ತು ಸ್ಟಾಕೀಮ್ ನಾಲ್ವರು ಸಹೋದರರು. ಇವರೆಲ್ಲರೂ ಸುಬ್ಬಾ ಅವರ ಪುತ್ರರು. ಮುಸ್ತಫಾ ಅವರ ಇಬ್ಬರು ಪುತ್ರರಾದ ಶೌಕೀನ್ ಮತ್ತು ಮೊಹ್ಸಿನ್ ಅವರಿಗೂ ಶಿಕ್ಷೆ ವಿಧಿಸಲಾಗಿದೆ.</p><p>ಅನ್ವರ್, ಇಸ್ಲಾಂ, ಗುಲ್ಜಾರ್, ಜಮ್ಶೆಡ್, ಪರ್ವೇಜ್, ಅನ್ವರ್ ಮತ್ತು ಶಕೀಬ್ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಇತರ ಅಪರಾಧಿಗಳು. </p><p>2016ರ ನವೆಂಬರ್ 12ರಂದು ಇಸ್ರಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಭೂ ವಿವಾದದ ಹಿನ್ನೆಲೆಯಲ್ಲಿ ಇಸ್ರಾರ್ ಅವರ ತಂದೆ ಯಾಸಿನ್ ಮತ್ತು ಚಿಕ್ಕಪ್ಪ ತಾಸಿನ್ ಅವರನ್ನು ಜನರ ಗುಂಪೊಂದು ಹತ್ಯೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಹರಾನ್ಪುರ (ಉತ್ತರಪ್ರದೇಶ):</strong> 10 ವರ್ಷಗಳ ಹಿಂದೆ ಭೂ ವಿವಾದ ಸಂಬಂಧ ಇಬ್ಬರು ಸಹೋದರರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.</p><p>ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿಕಾಸ್ ಗುಪ್ತಾ ನೇತೃತ್ವದ ನ್ಯಾಯಪೀಠವು ಅಪರಾಧಿಗಳಿಗೆ ₹10.73 ಲಕ್ಷ ದಂಡ ವಿಧಿಸಿದೆ ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ (ಎಡಿಜಿಸಿ) ದೀಪಕ್ ಸೈನಿ ತಿಳಿಸಿದ್ದಾರೆ.</p><p>ನ್ಯಾಯಾಲಯವು ಶಿಕ್ಷೆ ವಿಧಿಸಿದ 13 ಆರೋಪಿಗಳ ಪೈಕಿ ಮುನಾವರ್, ಮುಸ್ತಫಾ, ಸನಾವರ್ ಮತ್ತು ಸ್ಟಾಕೀಮ್ ನಾಲ್ವರು ಸಹೋದರರು. ಇವರೆಲ್ಲರೂ ಸುಬ್ಬಾ ಅವರ ಪುತ್ರರು. ಮುಸ್ತಫಾ ಅವರ ಇಬ್ಬರು ಪುತ್ರರಾದ ಶೌಕೀನ್ ಮತ್ತು ಮೊಹ್ಸಿನ್ ಅವರಿಗೂ ಶಿಕ್ಷೆ ವಿಧಿಸಲಾಗಿದೆ.</p><p>ಅನ್ವರ್, ಇಸ್ಲಾಂ, ಗುಲ್ಜಾರ್, ಜಮ್ಶೆಡ್, ಪರ್ವೇಜ್, ಅನ್ವರ್ ಮತ್ತು ಶಕೀಬ್ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಇತರ ಅಪರಾಧಿಗಳು. </p><p>2016ರ ನವೆಂಬರ್ 12ರಂದು ಇಸ್ರಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಭೂ ವಿವಾದದ ಹಿನ್ನೆಲೆಯಲ್ಲಿ ಇಸ್ರಾರ್ ಅವರ ತಂದೆ ಯಾಸಿನ್ ಮತ್ತು ಚಿಕ್ಕಪ್ಪ ತಾಸಿನ್ ಅವರನ್ನು ಜನರ ಗುಂಪೊಂದು ಹತ್ಯೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>