<p><strong>ಚೆನ್ನೈ:</strong> ‘ಭಾಷೆಯ ಹೋರಾಟ ಮತ್ತು ಕ್ಷೇತ್ರ ಪುನರ್ವಿಂಗಡನೆ ನಮ್ಮ ಎದುರು ಇರುವ ಪ್ರಮುಖ ಸವಾಲುಗಳಾಗಿದ್ದು, ತಮಿಳಿಗರು ತಮ್ಮ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಡಬೇಕಿದೆ’ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಕರೆ ನೀಡಿದ್ದಾರೆ.</p>.<p>‘ಭಾಷೆಯು ತಮಿಳರ ಜೀವನಾಡಿಯಾಗಿದ್ದರೆ, ನ್ಯಾಯಬದ್ಧ ಕ್ಷೇತ್ರ ಪುನರ್ವಿಂಗಡನೆ ನಮ್ಮ ಹಕ್ಕಾಗಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p>ತಮ್ಮ 72ನೇ ಹುಟ್ಟಹಬ್ಬದ ಮುನ್ನಾದಿನ ಡಿಎಂಕೆ ಕಾರ್ಯಕರ್ತರಿಗೆ ವಿಡಿಯೊ ಸಂದೇಶ ಕಳುಹಿಸಿರುವ ಅವರು, ಈ ಎರಡೂ ಸವಾಲುಗಳ ವಿರುದ್ಧ ತಮಿಳುನಾಡು ಮತ್ತು ಡಿಎಂಕೆ ಬದ್ಧತೆಯಿಂದ ಹೋರಾಟ ನಡೆಸುತ್ತದೆ ಎಂದು ಹೇಳಿದ್ದಾರೆ. ಜನಸಂಖ್ಯೆಯನ್ನು ಮಾತ್ರವೇ ಆಧರಿಸಿ ಸಂಸದೀಯ ಕ್ಷೇತ್ರಗಳ ಸಂಖ್ಯೆಯನ್ನು ನಿರ್ಧರಿಸಬಾರದು ಎಂಬುದು ತಮಿಳುನಾಡಿನ ಬೇಡಿಕೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>ತಮಿಳುನಾಡಿನ ಲೋಕಸಭಾ ಸ್ಥಾನಗಳ ಸಂಖ್ಯೆ ಕಡಿಮೆ ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ, ಇತರ ರಾಜ್ಯಗಳ ಪ್ರಾತಿನಿಧ್ಯದಲ್ಲಿ ಅಸಮಾನ ಹೆಚ್ಚಳ ಆಗುವುದಿಲ್ಲ ಎಂಬ ಭರವಸೆಯನ್ನು ಅದು ಏಕೆ ನೀಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಈ ಮೂಲಕ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿ, ಆ ಪಕ್ಷವನ್ನು ತಮಿಳುನಾಡು ವಿರೋಧಿ ಎಂದು ಬಿಂಬಿಸುವುದನ್ನು ಮುಂದುವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ‘ಭಾಷೆಯ ಹೋರಾಟ ಮತ್ತು ಕ್ಷೇತ್ರ ಪುನರ್ವಿಂಗಡನೆ ನಮ್ಮ ಎದುರು ಇರುವ ಪ್ರಮುಖ ಸವಾಲುಗಳಾಗಿದ್ದು, ತಮಿಳಿಗರು ತಮ್ಮ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಡಬೇಕಿದೆ’ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಕರೆ ನೀಡಿದ್ದಾರೆ.</p>.<p>‘ಭಾಷೆಯು ತಮಿಳರ ಜೀವನಾಡಿಯಾಗಿದ್ದರೆ, ನ್ಯಾಯಬದ್ಧ ಕ್ಷೇತ್ರ ಪುನರ್ವಿಂಗಡನೆ ನಮ್ಮ ಹಕ್ಕಾಗಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p>ತಮ್ಮ 72ನೇ ಹುಟ್ಟಹಬ್ಬದ ಮುನ್ನಾದಿನ ಡಿಎಂಕೆ ಕಾರ್ಯಕರ್ತರಿಗೆ ವಿಡಿಯೊ ಸಂದೇಶ ಕಳುಹಿಸಿರುವ ಅವರು, ಈ ಎರಡೂ ಸವಾಲುಗಳ ವಿರುದ್ಧ ತಮಿಳುನಾಡು ಮತ್ತು ಡಿಎಂಕೆ ಬದ್ಧತೆಯಿಂದ ಹೋರಾಟ ನಡೆಸುತ್ತದೆ ಎಂದು ಹೇಳಿದ್ದಾರೆ. ಜನಸಂಖ್ಯೆಯನ್ನು ಮಾತ್ರವೇ ಆಧರಿಸಿ ಸಂಸದೀಯ ಕ್ಷೇತ್ರಗಳ ಸಂಖ್ಯೆಯನ್ನು ನಿರ್ಧರಿಸಬಾರದು ಎಂಬುದು ತಮಿಳುನಾಡಿನ ಬೇಡಿಕೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>ತಮಿಳುನಾಡಿನ ಲೋಕಸಭಾ ಸ್ಥಾನಗಳ ಸಂಖ್ಯೆ ಕಡಿಮೆ ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ, ಇತರ ರಾಜ್ಯಗಳ ಪ್ರಾತಿನಿಧ್ಯದಲ್ಲಿ ಅಸಮಾನ ಹೆಚ್ಚಳ ಆಗುವುದಿಲ್ಲ ಎಂಬ ಭರವಸೆಯನ್ನು ಅದು ಏಕೆ ನೀಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಈ ಮೂಲಕ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿ, ಆ ಪಕ್ಷವನ್ನು ತಮಿಳುನಾಡು ವಿರೋಧಿ ಎಂದು ಬಿಂಬಿಸುವುದನ್ನು ಮುಂದುವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>