ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ಸಂವಿಧಾನದಲ್ಲಿ ಅಗತ್ಯ ತಿದ್ದುಪಡಿ ತರುವುದು ಹಾಗೂ ಮಾರ್ಗಸೂಚಿಗಳ ಬಗ್ಗೆ ಆಯೋಗವು ತನ್ನ ಅಭಿಪ್ರಾಯ ತಿಳಿಸಿತು. ಆದರೆ, ಈ ವಿಷಯಕ್ಕೆ ಸಂಬಂಧಿಸಿ ಮತ್ತಷ್ಟು ವಿವರಣೆಯ ಅಗತ್ಯವಿದೆ ಎಂದು ಸಮಿತಿ ಹೇಳಿದೆ. ಹಾಗಾಗಿ, ಮತ್ತೊಮ್ಮೆ ಆಯೋಗವನ್ನು ಚರ್ಚೆಗೆ ಆಹ್ವಾನಿಸುವ ಸಾಧ್ಯತೆ ಇದೆ. ಅಲ್ಲದೇ, ‘ಒಂದು ದೇಶ ಒಂದು ಚುನಾವಣೆ’ ಸಂಬಂಧ ಆಯೋಗವು ಕೇಂದ್ರ ಸರ್ಕಾರಕ್ಕೂ ವರದಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.