<p><strong>ನವದೆಹಲಿ</strong>: ರಾಜ್ಯದಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಸಂಬಂಧ ಬಿಜೆಪಿ ಸದಸ್ಯರು ಇಂದು ಲೋಕಸಭೆಯಲ್ಲಿ ಪದೇ ಪದೇ ಗದ್ದಲ ಎಬ್ಬಿಸಿದರು.</p><p> ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಮುಸ್ಲಿಮರಿಗೆ ಮೀಸಲಾತಿ ವಿಚಾರವಾಗಿ ಗದ್ದಲ ಎಬ್ಬಿಸಿದರು.</p><p>ಈ ಮಧ್ಯೆ, ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಷಯಗಳನ್ನು ಪ್ರಸ್ತಾಪಿಸುತ್ತಾ ಸಮಾಜವಾದಿ ಪಕ್ಷದ ಸದಸ್ಯರು ಸಹ ಸದಬದ ಬಾವಿಗೆ ಧಾವಿಸಿ ಪೋಸ್ಟರ್ಗಳನ್ನು ಹಿಡಿದು ಪ್ರತಿಭಟಿಸಿದರು.</p><p>ಎಸ್ಪಿ ಸದಸ್ಯರು ಸದನಕ್ಕೆ ಪೋಸ್ಟರ್ಗಳನ್ನು ತಂದಿದ್ದಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಾಹ್ನ 12 ಗಂಟೆಯವರೆಗೆ ಕಲಾಪವನ್ನು ಮುಂದೂಡಿದರು.</p><p>ಸದನ ಮತ್ತೆ ಸಮಾವೇಶಗೊಂಡಾಗ, ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನವನ್ನು ಬದಲಾಯಿಸುವಂತೆ ನೀಡಿದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದರು.</p><p>‘ಸದನವು ಮೌನವಾಗಿ ಹೇಗೆ ಇದನ್ನು ವೀಕ್ಷಿಸಲು ಸಾಧ್ಯ? ಈ ಬಗ್ಗೆ ಗಸ್ ಸ್ಪಷ್ಟಪಡಿಸಬೇಕು. ಆ ವ್ಯಕ್ತಿಯನ್ನು ವಜಾಗೊಳಿಸಬೇಕು. ನೀವು ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳಿಕೊಂಡು ಬಾಬಾಸಾಹೇಬ್ ಅಂಬೇಡ್ಕರ್ ಅವರ ಛಾಯಾಚಿತ್ರ ಮತ್ತು ಸಂವಿಧಾನದ ಪ್ರತಿಯನ್ನು ನಿಮ್ಮ ಜೇಬಿನಲ್ಲಿ ಹೊತ್ತುಕೊಂಡು ನಾಟಕವಾಡುತ್ತೀರಿ’ಎಂದು ರಿಜಿಜು ಹೇಳಿದರು.</p><p>ಕೆಲ ಕಾಂಗ್ರೆಸ್ ಸದಸ್ಯರು ಬಿಜೆಪಿಗೆ ಪ್ರತಿಕ್ರಿಯೆ ನೀಡಲು ಯತ್ನಿಸಿದರು.</p><p>ಸಭಾಪತಿ ಸ್ಥಾನದಲ್ಲಿದ್ದ ಬಿಜೆಪಿ ಸದಸ್ಯೆ ಜಗದಾಂಬಿಕಾ ಪಾಲ್, ಗದ್ದಲ ನಿಯಂತ್ರಿಸಲು ಪ್ರಯತ್ನಿಸಿದರು. ನಂತರ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.</p><p>ಲೋಕಸಭೆ ಇಂದು ಹಣಕಾಸು ಮಸೂದೆಯನ್ನು ಚರ್ಚೆಗೆ ಕೈಗೆತ್ತಿಕೊಳ್ಳಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜ್ಯದಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಸಂಬಂಧ ಬಿಜೆಪಿ ಸದಸ್ಯರು ಇಂದು ಲೋಕಸಭೆಯಲ್ಲಿ ಪದೇ ಪದೇ ಗದ್ದಲ ಎಬ್ಬಿಸಿದರು.</p><p> ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಮುಸ್ಲಿಮರಿಗೆ ಮೀಸಲಾತಿ ವಿಚಾರವಾಗಿ ಗದ್ದಲ ಎಬ್ಬಿಸಿದರು.</p><p>ಈ ಮಧ್ಯೆ, ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಷಯಗಳನ್ನು ಪ್ರಸ್ತಾಪಿಸುತ್ತಾ ಸಮಾಜವಾದಿ ಪಕ್ಷದ ಸದಸ್ಯರು ಸಹ ಸದಬದ ಬಾವಿಗೆ ಧಾವಿಸಿ ಪೋಸ್ಟರ್ಗಳನ್ನು ಹಿಡಿದು ಪ್ರತಿಭಟಿಸಿದರು.</p><p>ಎಸ್ಪಿ ಸದಸ್ಯರು ಸದನಕ್ಕೆ ಪೋಸ್ಟರ್ಗಳನ್ನು ತಂದಿದ್ದಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಾಹ್ನ 12 ಗಂಟೆಯವರೆಗೆ ಕಲಾಪವನ್ನು ಮುಂದೂಡಿದರು.</p><p>ಸದನ ಮತ್ತೆ ಸಮಾವೇಶಗೊಂಡಾಗ, ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನವನ್ನು ಬದಲಾಯಿಸುವಂತೆ ನೀಡಿದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದರು.</p><p>‘ಸದನವು ಮೌನವಾಗಿ ಹೇಗೆ ಇದನ್ನು ವೀಕ್ಷಿಸಲು ಸಾಧ್ಯ? ಈ ಬಗ್ಗೆ ಗಸ್ ಸ್ಪಷ್ಟಪಡಿಸಬೇಕು. ಆ ವ್ಯಕ್ತಿಯನ್ನು ವಜಾಗೊಳಿಸಬೇಕು. ನೀವು ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳಿಕೊಂಡು ಬಾಬಾಸಾಹೇಬ್ ಅಂಬೇಡ್ಕರ್ ಅವರ ಛಾಯಾಚಿತ್ರ ಮತ್ತು ಸಂವಿಧಾನದ ಪ್ರತಿಯನ್ನು ನಿಮ್ಮ ಜೇಬಿನಲ್ಲಿ ಹೊತ್ತುಕೊಂಡು ನಾಟಕವಾಡುತ್ತೀರಿ’ಎಂದು ರಿಜಿಜು ಹೇಳಿದರು.</p><p>ಕೆಲ ಕಾಂಗ್ರೆಸ್ ಸದಸ್ಯರು ಬಿಜೆಪಿಗೆ ಪ್ರತಿಕ್ರಿಯೆ ನೀಡಲು ಯತ್ನಿಸಿದರು.</p><p>ಸಭಾಪತಿ ಸ್ಥಾನದಲ್ಲಿದ್ದ ಬಿಜೆಪಿ ಸದಸ್ಯೆ ಜಗದಾಂಬಿಕಾ ಪಾಲ್, ಗದ್ದಲ ನಿಯಂತ್ರಿಸಲು ಪ್ರಯತ್ನಿಸಿದರು. ನಂತರ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.</p><p>ಲೋಕಸಭೆ ಇಂದು ಹಣಕಾಸು ಮಸೂದೆಯನ್ನು ಚರ್ಚೆಗೆ ಕೈಗೆತ್ತಿಕೊಳ್ಳಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>