<p><strong>ಪ್ರಯಾಗರಾಜ್ (ಉತ್ತರ ಪ್ರದೇಶ):</strong> ಮಹಾಶಿವರಾತ್ರಿಯ ಅಂಗವಾಗಿ ನಡೆಯುತ್ತಿರುವ ಮಾಘ ಮೇಳದ ಕೊನೆಯ ದಿನವಾದ ಭಾನುವಾರ ಬೆಳಿಗ್ಗೆ 10 ಗಂಟೆಯ ಒಳಗೆ ಸುಮಾರು 21 ಲಕ್ಷ ಭಕ್ತರು ಗಂಗಾ ನದಿ ಮತ್ತು ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಶನಿವಾರ ರಾತ್ರಿಯಿಂದಲೇ ಭಕ್ತರು ಮೇಳ ಪ್ರದೇಶಕ್ಕೆ ಆಗಮಿಸಿ ಸ್ನಾನ ಮಾಡುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವೇಳೆಗೆ 21 ಲಕ್ಷ ಮಂದಿ ಗಂಗಾ ಮತ್ತು ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಎಂದು ಮಾಘ ಮೇಳದ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಮಾಘಮೇಳ: 4.52 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ.ಕೊನಾರ್ಕ್: ಮೇಘ ಸಪ್ತಮಿ, 5ಲಕ್ಷ ಭಕ್ತರಿಂದ ಪುಣ್ಯಸ್ನಾನ.<p>ಎಲ್ಲಾ ಘಾಟ್ಗಳಲ್ಲಿ ಸಮರ್ಪಕ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ ದೋಣಿಗಳು ಮತ್ತು ಈಜುಗಾರರನ್ನೂ ನಿಯೋಜಿಸಲಾಗಿದೆ ಎಂದು ಪ್ರಯಾಗರಾಜ್ ಜಿಲ್ಲಾಧಿಕಾರಿ ಮನೀಶ್ ಕುಮಾರ್ ವರ್ಮಾ ತಿಳಿಸಿದ್ದಾರೆ, </p><p>ಎಲ್ಲಾ ಘಾಟ್ಗಳಲ್ಲಿ ಭಕ್ತರಿಗೆ ಕೊಠಡಿ, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಮೇಳದ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಡ್ರೋನ್ಗಳ ಮೂಲಕ ನಿಗಾ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್ (ಉತ್ತರ ಪ್ರದೇಶ):</strong> ಮಹಾಶಿವರಾತ್ರಿಯ ಅಂಗವಾಗಿ ನಡೆಯುತ್ತಿರುವ ಮಾಘ ಮೇಳದ ಕೊನೆಯ ದಿನವಾದ ಭಾನುವಾರ ಬೆಳಿಗ್ಗೆ 10 ಗಂಟೆಯ ಒಳಗೆ ಸುಮಾರು 21 ಲಕ್ಷ ಭಕ್ತರು ಗಂಗಾ ನದಿ ಮತ್ತು ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಶನಿವಾರ ರಾತ್ರಿಯಿಂದಲೇ ಭಕ್ತರು ಮೇಳ ಪ್ರದೇಶಕ್ಕೆ ಆಗಮಿಸಿ ಸ್ನಾನ ಮಾಡುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವೇಳೆಗೆ 21 ಲಕ್ಷ ಮಂದಿ ಗಂಗಾ ಮತ್ತು ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಎಂದು ಮಾಘ ಮೇಳದ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಮಾಘಮೇಳ: 4.52 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ.ಕೊನಾರ್ಕ್: ಮೇಘ ಸಪ್ತಮಿ, 5ಲಕ್ಷ ಭಕ್ತರಿಂದ ಪುಣ್ಯಸ್ನಾನ.<p>ಎಲ್ಲಾ ಘಾಟ್ಗಳಲ್ಲಿ ಸಮರ್ಪಕ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ ದೋಣಿಗಳು ಮತ್ತು ಈಜುಗಾರರನ್ನೂ ನಿಯೋಜಿಸಲಾಗಿದೆ ಎಂದು ಪ್ರಯಾಗರಾಜ್ ಜಿಲ್ಲಾಧಿಕಾರಿ ಮನೀಶ್ ಕುಮಾರ್ ವರ್ಮಾ ತಿಳಿಸಿದ್ದಾರೆ, </p><p>ಎಲ್ಲಾ ಘಾಟ್ಗಳಲ್ಲಿ ಭಕ್ತರಿಗೆ ಕೊಠಡಿ, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಮೇಳದ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಡ್ರೋನ್ಗಳ ಮೂಲಕ ನಿಗಾ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>