<p><strong>ನವದೆಹಲಿ:</strong> ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸಾಗುತ್ತಿರುವ ಮಹಾಕುಂಭಮೇಳದಲ್ಲಿ ಇಂದು (ಬುಧವಾರ) ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ ವಿಪಕ್ಷಗಳ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. </p><p>'ವಿಐಪಿ ಸಂಪ್ರದಾಯ'ಕ್ಕೆ ಸಂಪೂರ್ಣ ಲಗಾಮು ಹಾಕಬೇಕಿದ್ದು, ಭಕ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕಿದೆ' ಎಂದು ಲೋಕಸಭೆ ವಿರೋಧ ಪಕ್ಷಗಳ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, 'ಪ್ರಯಾಗ್ರಾಜ್ನಲ್ಲಿ ಮಹಾಕುಂಭಮೇಳದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟು ಅನೇಕರು ಗಾಯಗೊಂಡಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ' ಎಂದು ಹಾರೈಸಿದ್ದಾರೆ. </p><p>'ಅಸಮರ್ಪಕ ವ್ಯವಸ್ಥೆ ಮತ್ತು ಸಾಮಾನ್ಯ ಭಕ್ತರ ಬದಲಿಗೆ ವಿಐಪಿ ಚಲನವಲನಕ್ಕೆ ವಿಶೇಷ ಆದ್ಯತೆ ನೀಡಿರುವುದು ಈ ದುರಂತಕ್ಕೆ ಕಾರಣವಾಗಿದೆ' ಎಂದು ಅವರು ಆರೋಪಿಸಿದ್ದಾರೆ. </p><p>'ಕುಂಭಮೇಳದಲ್ಲಿ ಮಹಾಸ್ನಾನ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಈಗಲೂ ಕಾಲ ಮಿಂಚಿಲ್ಲ. ಸರ್ಕಾರವು ಇಂತಹ ಅಹಿತಕರ ಘಟನೆಗಳನ್ನು ತಡೆಯಲು ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಿದೆ' ಎಂದು ಅವರು ಮನವಿ ಮಾಡಿದ್ದಾರೆ. </p><p>ಸಂತ್ರಸ್ತರಿಗೆ ನೆರವಾಗುವಂತೆಯೂ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಕರೆ ನೀಡಿದ್ದಾರೆ. </p>. <p>ಕಾಂಗ್ರೆಸ್ ಸಂಸದೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಹ 'ಮೃತರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿದ್ದು, ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ' ಎಂದು ಹಾರೈಸಿದ್ದಾರೆ. </p><p>'ಮಹಾಕುಂಭನಗರಕ್ಕೆ ಭೇಟಿ ನೀಡುವ ಭಕ್ತರು ಅವ್ಯವಸ್ಥೆಯ ಬಗ್ಗೆ ನಿರಂತರವಾಗಿ ದೂರು ನೀಡುತ್ತಿದ್ದರೂ ಸರ್ಕಾರವು ಯಾವುದೇ ಕ್ರಮ ಕೈಗೊಂಡಿಲ್ಲ, ನಿರ್ಲಕ್ಷ್ಯವನ್ನು ತೋರಿದೆ' ಎಂದು ಅವರು ದೂರಿದ್ದಾರೆ. </p><p>'ಗಾಯಾಳುಗಳನ್ನು ಏರ್ ಲಿಫ್ಟ್ ಮಾಡಿ ತಕ್ಷಣ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆಯೇ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ. </p><p>ಮಹಾಕುಂಭಮೇಳದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಅತ್ಯಂತ ದುಃಖಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. </p><p>ಭಕ್ತರು ತಾಳ್ಮೆಯನ್ನು ಕಾಪಾಡಿಕೊಂಡು ಆಡಳಿತದ ಸೂಚನೆಯನ್ನು ಅನುಸರಿಸುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ. </p><p>ಘಟನೆಗೆ ಬಿಎಸ್ಪಿ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಹ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. 'ಇಂತಹ ಘಟನೆಗಳಿಂದ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ. ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ' ಎಂದು ಮನವಿ ಮಾಡಿದ್ದಾರೆ. </p>.Maha Kumbh Stampede | ಕಾಲ್ತುಳಿತಕ್ಕೆ ಕೇಂದ್ರ, ಯೋಗಿ ಸರ್ಕಾರ ಹೊಣೆ: ಖರ್ಗೆ.PHOTOS | ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಈ ಚಿತ್ರಗಳೇ ಘಟನೆಯ ಭಯಾನಕತೆಗೆ ಸಾಕ್ಷಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸಾಗುತ್ತಿರುವ ಮಹಾಕುಂಭಮೇಳದಲ್ಲಿ ಇಂದು (ಬುಧವಾರ) ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ ವಿಪಕ್ಷಗಳ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. </p><p>'ವಿಐಪಿ ಸಂಪ್ರದಾಯ'ಕ್ಕೆ ಸಂಪೂರ್ಣ ಲಗಾಮು ಹಾಕಬೇಕಿದ್ದು, ಭಕ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕಿದೆ' ಎಂದು ಲೋಕಸಭೆ ವಿರೋಧ ಪಕ್ಷಗಳ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, 'ಪ್ರಯಾಗ್ರಾಜ್ನಲ್ಲಿ ಮಹಾಕುಂಭಮೇಳದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟು ಅನೇಕರು ಗಾಯಗೊಂಡಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ' ಎಂದು ಹಾರೈಸಿದ್ದಾರೆ. </p><p>'ಅಸಮರ್ಪಕ ವ್ಯವಸ್ಥೆ ಮತ್ತು ಸಾಮಾನ್ಯ ಭಕ್ತರ ಬದಲಿಗೆ ವಿಐಪಿ ಚಲನವಲನಕ್ಕೆ ವಿಶೇಷ ಆದ್ಯತೆ ನೀಡಿರುವುದು ಈ ದುರಂತಕ್ಕೆ ಕಾರಣವಾಗಿದೆ' ಎಂದು ಅವರು ಆರೋಪಿಸಿದ್ದಾರೆ. </p><p>'ಕುಂಭಮೇಳದಲ್ಲಿ ಮಹಾಸ್ನಾನ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಈಗಲೂ ಕಾಲ ಮಿಂಚಿಲ್ಲ. ಸರ್ಕಾರವು ಇಂತಹ ಅಹಿತಕರ ಘಟನೆಗಳನ್ನು ತಡೆಯಲು ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಿದೆ' ಎಂದು ಅವರು ಮನವಿ ಮಾಡಿದ್ದಾರೆ. </p><p>ಸಂತ್ರಸ್ತರಿಗೆ ನೆರವಾಗುವಂತೆಯೂ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಕರೆ ನೀಡಿದ್ದಾರೆ. </p>. <p>ಕಾಂಗ್ರೆಸ್ ಸಂಸದೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಹ 'ಮೃತರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿದ್ದು, ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ' ಎಂದು ಹಾರೈಸಿದ್ದಾರೆ. </p><p>'ಮಹಾಕುಂಭನಗರಕ್ಕೆ ಭೇಟಿ ನೀಡುವ ಭಕ್ತರು ಅವ್ಯವಸ್ಥೆಯ ಬಗ್ಗೆ ನಿರಂತರವಾಗಿ ದೂರು ನೀಡುತ್ತಿದ್ದರೂ ಸರ್ಕಾರವು ಯಾವುದೇ ಕ್ರಮ ಕೈಗೊಂಡಿಲ್ಲ, ನಿರ್ಲಕ್ಷ್ಯವನ್ನು ತೋರಿದೆ' ಎಂದು ಅವರು ದೂರಿದ್ದಾರೆ. </p><p>'ಗಾಯಾಳುಗಳನ್ನು ಏರ್ ಲಿಫ್ಟ್ ಮಾಡಿ ತಕ್ಷಣ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆಯೇ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ. </p><p>ಮಹಾಕುಂಭಮೇಳದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಅತ್ಯಂತ ದುಃಖಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. </p><p>ಭಕ್ತರು ತಾಳ್ಮೆಯನ್ನು ಕಾಪಾಡಿಕೊಂಡು ಆಡಳಿತದ ಸೂಚನೆಯನ್ನು ಅನುಸರಿಸುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ. </p><p>ಘಟನೆಗೆ ಬಿಎಸ್ಪಿ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಹ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. 'ಇಂತಹ ಘಟನೆಗಳಿಂದ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ. ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ' ಎಂದು ಮನವಿ ಮಾಡಿದ್ದಾರೆ. </p>.Maha Kumbh Stampede | ಕಾಲ್ತುಳಿತಕ್ಕೆ ಕೇಂದ್ರ, ಯೋಗಿ ಸರ್ಕಾರ ಹೊಣೆ: ಖರ್ಗೆ.PHOTOS | ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಈ ಚಿತ್ರಗಳೇ ಘಟನೆಯ ಭಯಾನಕತೆಗೆ ಸಾಕ್ಷಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>