‘ದೇಶದ ಎಲ್ಲ ವಲಯಗಳಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಸಿಗುತ್ತಿಲ್ಲ. ದಲಿತ, ಹಿಂದುಳಿದ ವರ್ಗ, ಬುಡಕಟ್ಟು ಹಾಗೂ ಇನ್ನಿತರ ಸಮುದಾಯಗಳ ಜನಸಂಖ್ಯೆ ತಿಳಿದುಕೊಳ್ಳಲು ದೇಶದಲ್ಲಿ ಜಾತಿಗಣತಿ ನಡೆಸುವ ಅಗತ್ಯ ಇದೆ‘ ಎಂದು ಇಲ್ಲಿನ ರಂಗಭೂಮಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡಿದ ಅವರು, ‘ಅಲ್ಲಿ ನಾಗರಿಕ ಯುದ್ಧದ ಸನ್ನಿವೇಶ ಇದೆ. ಇನ್ನೂ ಅಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲ್ಲ’ ಎಂದು ಕಿಡಿಕಾರಿದ್ದಾರೆ.