<p><strong>ನವದೆಹಲಿ:</strong> 2014ರಿಂದ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿರುವ ‘ಕಪ್ಪು ಪತ್ರ’ವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಇಲ್ಲಿ ಬಿಡುಗಡೆ ಮಾಡಿದರು.</p><p>’10 ವರ್ಷಗಳ ಅನ್ಯಾಯ ಕಾಲ’ ಎಂದು ಈ ‘ಕಪ್ಪು ಪತ್ರ’ಕ್ಕೆ ಹೆಸರಿಡಲಾಗಿದೆ.</p>.ರಾಜ್ಯಸಭೆ: ಕೈಬಿಟ್ಟ ಭಾಷಣದ ತುಣುಕುಗಳನ್ನು ಕಡತಕ್ಕೆ ಸೇರಿಸಲು ಖರ್ಗೆ ಆಗ್ರಹ.<p>ಯುಪಿಎ ಸರ್ಕಾರದ ಅವಧಿಯ ಶ್ವೇತ ಪತ್ರವನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ‘ಕಪ್ಪು ಪತ್ರ’ ಬಿಡುಗಡೆಗೊಳಿಸಿದೆ.</p><p>‘ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ. ಅನುದಾನ ಬಿಡುಗಡೆ ಮಾಡಿದರೂ, ರಾಜ್ಯಗಳು ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಆರೋಪಿಸುತ್ತದೆ’ ಎಂದು ‘ಕಪ್ಪು ಪತ್ರ' ಬಿಡುಗಡೆ ವೇಳೆ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯ ಬುಡಮೇಲು: ಖರ್ಗೆ.<p>ಹಣದುಬ್ಬರ ಹೆಚ್ಚಳವಾಗಿದೆ. ಕಾಂಗ್ರೆಸ್ ಇತಿಹಾಸವನ್ನು ಕೆದಕುವುದರಿಂದ ಏನೂ ಬದಲಾವಣೆ ಆಗದು ಎಂದು ಅವರು ಹೇಳಿದರು.</p><p>ಈ ವೇಳೆ ಕಾಂಗ್ರೆಸ್ ನಾಯಕರಾದ ಪವನ್ ಖೇರಾ, ರಾಜ್ಯಸಭಾ ಸಂಸದ ನಾಸಿರ್ ಹುಸೇನ್ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಇದ್ದರು.</p> .ಮೋದಿ ಸರ್ಕಾರದ ನಿರ್ಲಕ್ಷ್ಯ; ಭರ್ತಿಯಾಗದ 30 ಲಕ್ಷ ಸರ್ಕಾರಿ ಉದ್ಯೋಗಗಳು: ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2014ರಿಂದ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿರುವ ‘ಕಪ್ಪು ಪತ್ರ’ವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಇಲ್ಲಿ ಬಿಡುಗಡೆ ಮಾಡಿದರು.</p><p>’10 ವರ್ಷಗಳ ಅನ್ಯಾಯ ಕಾಲ’ ಎಂದು ಈ ‘ಕಪ್ಪು ಪತ್ರ’ಕ್ಕೆ ಹೆಸರಿಡಲಾಗಿದೆ.</p>.ರಾಜ್ಯಸಭೆ: ಕೈಬಿಟ್ಟ ಭಾಷಣದ ತುಣುಕುಗಳನ್ನು ಕಡತಕ್ಕೆ ಸೇರಿಸಲು ಖರ್ಗೆ ಆಗ್ರಹ.<p>ಯುಪಿಎ ಸರ್ಕಾರದ ಅವಧಿಯ ಶ್ವೇತ ಪತ್ರವನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ‘ಕಪ್ಪು ಪತ್ರ’ ಬಿಡುಗಡೆಗೊಳಿಸಿದೆ.</p><p>‘ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ. ಅನುದಾನ ಬಿಡುಗಡೆ ಮಾಡಿದರೂ, ರಾಜ್ಯಗಳು ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಆರೋಪಿಸುತ್ತದೆ’ ಎಂದು ‘ಕಪ್ಪು ಪತ್ರ' ಬಿಡುಗಡೆ ವೇಳೆ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.ರಾಜ್ಯಗಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯ ಬುಡಮೇಲು: ಖರ್ಗೆ.<p>ಹಣದುಬ್ಬರ ಹೆಚ್ಚಳವಾಗಿದೆ. ಕಾಂಗ್ರೆಸ್ ಇತಿಹಾಸವನ್ನು ಕೆದಕುವುದರಿಂದ ಏನೂ ಬದಲಾವಣೆ ಆಗದು ಎಂದು ಅವರು ಹೇಳಿದರು.</p><p>ಈ ವೇಳೆ ಕಾಂಗ್ರೆಸ್ ನಾಯಕರಾದ ಪವನ್ ಖೇರಾ, ರಾಜ್ಯಸಭಾ ಸಂಸದ ನಾಸಿರ್ ಹುಸೇನ್ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಇದ್ದರು.</p> .ಮೋದಿ ಸರ್ಕಾರದ ನಿರ್ಲಕ್ಷ್ಯ; ಭರ್ತಿಯಾಗದ 30 ಲಕ್ಷ ಸರ್ಕಾರಿ ಉದ್ಯೋಗಗಳು: ಖರ್ಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>