<p><strong>ಕೋಲ್ಕತ್ತ</strong>: ನುಸುಳುಕೋರರಿಗೆ ರಾಜ್ಯ ಪ್ರವೇಶಿಸಲು ಗಡಿ ಭದ್ರತಾ ಪಡೆ (ಬಿಎಸ್ಎಫ್) ನೆರವಾಗುತ್ತಿದೆ ಎಂಬ ಆರೋಪವನ್ನು ಟೀಕಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ. ಹೇಳಿಕೆಯು ಭದ್ರತಾ ಪಡೆಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಹೇಳಿದ್ದಾರೆ.</p><p>ಅಕ್ರಮ ವಲಸೆಯನ್ನು ತಡೆಗಟ್ಟಲು ಬಿಜೆಪಿ ಆಡಳಿತದ ಅಸ್ಸಾಂ ಸರ್ಕಾರ ಭದ್ರತಾ ಪಡೆಗಳೊಂದಿಗೆ ಕೆಲಸ ಮಾಡಿದೆ. ಆದರೆ, ಪಶ್ಚಿಮ ಬಂಗಾಳ ಸರ್ಕಾರ ನುಸುಳುಕೋರರನ್ನು ಮತ ಬ್ಯಾಂಕ್ಗಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.</p><p>ಬ್ಯಾನರ್ಜಿ ತಮ್ಮ ಮತ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಕೆಳಮಟ್ಟದ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿ ಆರೋಪಿಸಿದ್ದಾರೆ.</p><p>ಪಶ್ಚಿಮ ಬಂಗಾಳದ ಒಳನುಸುಳುವಿಕೆಗೆ ಗಡಿ ಭದ್ರತಾ ಪಡೆಯನ್ನು ದೂಷಿಸುವುದು ‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) 75,000 ಸಿಬ್ಬಂದಿ ಮತ್ತು ಬಂಗಾಳದಲ್ಲಿರುವ 33,000 ಬಿಎಸ್ಎಫ್ ಸಿಬ್ಬಂದಿಗೆ ಮಾಡಿದ ಅವಮಾನ’ ಎಂದು ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>‘ರಾಜಕೀಯದಲ್ಲಿ ಆರೋಪಗಳು ಮತ್ತು ಪ್ರತ್ಯಾರೋಪಗಳು ನಡೆಯುತ್ತವೆ. ಆದರೆ, ಭದ್ರತಾ ಪಡೆಗಳನ್ನು ಅದರೊಳಗೆ ಎಳೆದುಕೊಳ್ಳುವುದು, ಅವರನ್ನು ಅವಮಾನಿಸುವುದು ಮತ್ತು ನಿಮ್ಮ ವೈಫಲ್ಯಗಳ ಹೊಣೆಯನ್ನು ಅವರಿಗೆ ವರ್ಗಾಯಿಸುವುದು ಕೀಳು ರಾಜಕೀಯವಲ್ಲದೆ ಬೇರೇನೂ ಅಲ್ಲ’ ಎಂದು ಬ್ಯಾನರ್ಜಿಗೆ ಪತ್ರದಲ್ಲಿ ಅಧಿಕಾರಿ ಬರೆದಿದ್ದಾರೆ.</p><p>ಗಡಿ ಸಂಬಂಧಿತ ವಿಷಯಗಳಲ್ಲಿ ಬಿಎಸ್ಎಫ್ನೊಂದಿಗಿನ ಅಸಹಕಾರಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರವನ್ನು ಸುವೇಂದು ಅಧಿಕಾರಿ ದೂಷಿಸಿದ್ದಾರೆ.</p><p>ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಸುವ ದುರುದ್ದೇಶದಿಂದ ನುಸುಳುಕೋರರಿಗೆ ರಾಜ್ಯ ಪ್ರವೇಶಿಸಲು ಗಡಿ ಭದ್ರತಾ ಪಡೆ (BSF) ನೆರವಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇರ ಆರೋಪ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ನುಸುಳುಕೋರರಿಗೆ ರಾಜ್ಯ ಪ್ರವೇಶಿಸಲು ಗಡಿ ಭದ್ರತಾ ಪಡೆ (ಬಿಎಸ್ಎಫ್) ನೆರವಾಗುತ್ತಿದೆ ಎಂಬ ಆರೋಪವನ್ನು ಟೀಕಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ. ಹೇಳಿಕೆಯು ಭದ್ರತಾ ಪಡೆಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಹೇಳಿದ್ದಾರೆ.</p><p>ಅಕ್ರಮ ವಲಸೆಯನ್ನು ತಡೆಗಟ್ಟಲು ಬಿಜೆಪಿ ಆಡಳಿತದ ಅಸ್ಸಾಂ ಸರ್ಕಾರ ಭದ್ರತಾ ಪಡೆಗಳೊಂದಿಗೆ ಕೆಲಸ ಮಾಡಿದೆ. ಆದರೆ, ಪಶ್ಚಿಮ ಬಂಗಾಳ ಸರ್ಕಾರ ನುಸುಳುಕೋರರನ್ನು ಮತ ಬ್ಯಾಂಕ್ಗಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.</p><p>ಬ್ಯಾನರ್ಜಿ ತಮ್ಮ ಮತ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಕೆಳಮಟ್ಟದ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿ ಆರೋಪಿಸಿದ್ದಾರೆ.</p><p>ಪಶ್ಚಿಮ ಬಂಗಾಳದ ಒಳನುಸುಳುವಿಕೆಗೆ ಗಡಿ ಭದ್ರತಾ ಪಡೆಯನ್ನು ದೂಷಿಸುವುದು ‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) 75,000 ಸಿಬ್ಬಂದಿ ಮತ್ತು ಬಂಗಾಳದಲ್ಲಿರುವ 33,000 ಬಿಎಸ್ಎಫ್ ಸಿಬ್ಬಂದಿಗೆ ಮಾಡಿದ ಅವಮಾನ’ ಎಂದು ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>‘ರಾಜಕೀಯದಲ್ಲಿ ಆರೋಪಗಳು ಮತ್ತು ಪ್ರತ್ಯಾರೋಪಗಳು ನಡೆಯುತ್ತವೆ. ಆದರೆ, ಭದ್ರತಾ ಪಡೆಗಳನ್ನು ಅದರೊಳಗೆ ಎಳೆದುಕೊಳ್ಳುವುದು, ಅವರನ್ನು ಅವಮಾನಿಸುವುದು ಮತ್ತು ನಿಮ್ಮ ವೈಫಲ್ಯಗಳ ಹೊಣೆಯನ್ನು ಅವರಿಗೆ ವರ್ಗಾಯಿಸುವುದು ಕೀಳು ರಾಜಕೀಯವಲ್ಲದೆ ಬೇರೇನೂ ಅಲ್ಲ’ ಎಂದು ಬ್ಯಾನರ್ಜಿಗೆ ಪತ್ರದಲ್ಲಿ ಅಧಿಕಾರಿ ಬರೆದಿದ್ದಾರೆ.</p><p>ಗಡಿ ಸಂಬಂಧಿತ ವಿಷಯಗಳಲ್ಲಿ ಬಿಎಸ್ಎಫ್ನೊಂದಿಗಿನ ಅಸಹಕಾರಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರವನ್ನು ಸುವೇಂದು ಅಧಿಕಾರಿ ದೂಷಿಸಿದ್ದಾರೆ.</p><p>ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಸುವ ದುರುದ್ದೇಶದಿಂದ ನುಸುಳುಕೋರರಿಗೆ ರಾಜ್ಯ ಪ್ರವೇಶಿಸಲು ಗಡಿ ಭದ್ರತಾ ಪಡೆ (BSF) ನೆರವಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇರ ಆರೋಪ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>