<p><strong>ಐಜ್ವಾಲ್:</strong> ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 13ಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಬೈರಾಬಿ-ಸೈರಾಂಗ್ ರೈಲ್ವೆ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. </p><p>ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ಸಂಬಂಧ ಮಾಹಿತಿ ದೊರಕಿದೆ ಎಂದು ಮಿಜೋರಾಂ ಸರ್ಕಾರ ಮೂಲದ ಹಲವು ಅಧಿಕಾರಿಗಳು ತಿಳಿಸಿದ್ದಾರೆ. </p><p>ಐಜ್ವಾಲ್ನಿಂದ ವಿಮಾನದ ಮೂಲಕ ಪ್ರಧಾನಿ ಮಣಿಪುರಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲಿ ಕೆಲ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸುವ ನಿರೀಕ್ಷೆ ಇದೆ. </p><p>ಈಶಾನ್ಯ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಭೇಟಿ ನೀಡುವ ಸಾಧ್ಯತೆಯಿದೆ. </p><p>ಹಾಗಿದ್ದರೂ ಮಣಿಪುರಕ್ಕೆ ಮೋದಿ ಭೇಟಿಯು ಇನ್ನಷ್ಟೇ ಅಧಿಕೃತಗೊಳ್ಳಬೇಕಿದೆ. ಇದನ್ನು ಇಂಫಾಲದ ಅಧಿಕಾರಿಗಳು ಸಹ ದೃಢೀಕರಿಸಲಿಲ್ಲ. </p><p>ಈ ನಡುವೆ ಪ್ರಧಾನಿ ಭೇಟಿಯ ಸಿದ್ಧತೆಗಳನ್ನು ಪರಿಶೀಲಿಸಲು ಮಿಜೋರಾಂನ ಮುಖ್ಯ ಕಾರ್ಯದರ್ಶಿ ಖಿಲ್ಲಿ ರಾಮ್ ಮೀನಾ, ಸೋಮವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಅತ್ತ ಮೋದಿ ಭೇಟಿ ಸಾಧ್ಯತೆಯ ಹಿನ್ನೆಲೆಯಲ್ಲಿ ಮಣಿಪುರದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ. </p> .ಪುಟಿನ್ ಜೊತೆ ಮೋದಿ ಮಾತುಕತೆ; ಉಕ್ರೇನ್ ಯುದ್ಧ ಕೊನೆಗೊಳಿಸಲು ಮನವಿ.ಡ್ರ್ಯಾಗನ್ ಮುಂದೆ ಶರಣಾದ ಆನೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಜ್ವಾಲ್:</strong> ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 13ಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಬೈರಾಬಿ-ಸೈರಾಂಗ್ ರೈಲ್ವೆ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. </p><p>ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ಸಂಬಂಧ ಮಾಹಿತಿ ದೊರಕಿದೆ ಎಂದು ಮಿಜೋರಾಂ ಸರ್ಕಾರ ಮೂಲದ ಹಲವು ಅಧಿಕಾರಿಗಳು ತಿಳಿಸಿದ್ದಾರೆ. </p><p>ಐಜ್ವಾಲ್ನಿಂದ ವಿಮಾನದ ಮೂಲಕ ಪ್ರಧಾನಿ ಮಣಿಪುರಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲಿ ಕೆಲ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸುವ ನಿರೀಕ್ಷೆ ಇದೆ. </p><p>ಈಶಾನ್ಯ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಭೇಟಿ ನೀಡುವ ಸಾಧ್ಯತೆಯಿದೆ. </p><p>ಹಾಗಿದ್ದರೂ ಮಣಿಪುರಕ್ಕೆ ಮೋದಿ ಭೇಟಿಯು ಇನ್ನಷ್ಟೇ ಅಧಿಕೃತಗೊಳ್ಳಬೇಕಿದೆ. ಇದನ್ನು ಇಂಫಾಲದ ಅಧಿಕಾರಿಗಳು ಸಹ ದೃಢೀಕರಿಸಲಿಲ್ಲ. </p><p>ಈ ನಡುವೆ ಪ್ರಧಾನಿ ಭೇಟಿಯ ಸಿದ್ಧತೆಗಳನ್ನು ಪರಿಶೀಲಿಸಲು ಮಿಜೋರಾಂನ ಮುಖ್ಯ ಕಾರ್ಯದರ್ಶಿ ಖಿಲ್ಲಿ ರಾಮ್ ಮೀನಾ, ಸೋಮವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಅತ್ತ ಮೋದಿ ಭೇಟಿ ಸಾಧ್ಯತೆಯ ಹಿನ್ನೆಲೆಯಲ್ಲಿ ಮಣಿಪುರದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ. </p> .ಪುಟಿನ್ ಜೊತೆ ಮೋದಿ ಮಾತುಕತೆ; ಉಕ್ರೇನ್ ಯುದ್ಧ ಕೊನೆಗೊಳಿಸಲು ಮನವಿ.ಡ್ರ್ಯಾಗನ್ ಮುಂದೆ ಶರಣಾದ ಆನೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>