<p><strong>ಹೈದರಾಬಾದ್</strong>: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ವೀಲಿನ ಮಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಗ್ರಹಿಸಿದ್ದಾರೆ.</p><p>ಪಹಲ್ಗಾಮ್ ದಾಳಿ ಖಂಡಿಸಿ ಹೈದರಾಬಾದ್ನಲ್ಲಿ ನಿನ್ನೆ ರಾತ್ರಿ ನಡೆದ ಮೊಂಬತ್ತಿ ಬೆಳಕಿನ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p><p>1971 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಪಾಕಿಸ್ತಾನವನ್ನು ಬಗ್ಗುಬಡಿದು ವಾಜಪೇಯಿ ಸೇರಿದಂತೆ ಹಲವರಿಂದ ದುರ್ಗೆ ಎಂಬ ಬಿರುದು ಪಡೆದಿದ್ದರು. ಅಂತಹ ಇಚ್ಚಾಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೋರಿಸುವ ಸಮಯ ಬಂದಿದೆ ಎಂದು ಅವರು ಹೇಳಿದರು.</p><p>ಈಗ ತಿರುಗೇಟು ನೀಡುವ ಸಮಯ ಬಂದಿದೆ. ನಾವೆಲ್ಲ ನಿಮ್ಮ ಜೊತೆ ಇದ್ದೇವೆ. 140 ಕೋಟಿ ಭಾರತೀಯರು ನಿಮ್ಮ ಜೊತೆ ಇದ್ದಾರೆ. ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಲು ನೀವು ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲ ಇದೆ ಎಂದು ಅವರು ಹೇಳಿದರು.</p><p>ಯಾರೇ ಆದರೂ ರಾಜಕೀಯ ಮಾಡುವ ಸಮಯ ಇದಲ್ಲ. ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದವರಿಗೆ ಯಾವ ಶಿಕ್ಷೆ ಕೊಟ್ಟರೂ ಕಡಿಮೆಯೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p><p>ಪ್ರತಿಭಟನೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ, ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p><p>ಪಹಲ್ಗಾಮ್ನಲ್ಲಿ ಉಗ್ರರು ಪ್ರವಾಸಿಗರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾಶ್ಮೀರದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.</p>.ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡದ ಕೋಚ್ ಗಂಭೀರ್ಗೆ ಕೊಲೆ ಬೆದರಿಕೆ.ಪಹಲ್ಗಾಮ್ ಭಯೋತ್ಪಾದಕ ದಾಳಿ: ನವವಿವಾಹಿತ ನೌಕಾಪಡೆ ಅಧಿಕಾರಿ ಹುತಾತ್ಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ವೀಲಿನ ಮಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಗ್ರಹಿಸಿದ್ದಾರೆ.</p><p>ಪಹಲ್ಗಾಮ್ ದಾಳಿ ಖಂಡಿಸಿ ಹೈದರಾಬಾದ್ನಲ್ಲಿ ನಿನ್ನೆ ರಾತ್ರಿ ನಡೆದ ಮೊಂಬತ್ತಿ ಬೆಳಕಿನ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p><p>1971 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಪಾಕಿಸ್ತಾನವನ್ನು ಬಗ್ಗುಬಡಿದು ವಾಜಪೇಯಿ ಸೇರಿದಂತೆ ಹಲವರಿಂದ ದುರ್ಗೆ ಎಂಬ ಬಿರುದು ಪಡೆದಿದ್ದರು. ಅಂತಹ ಇಚ್ಚಾಶಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೋರಿಸುವ ಸಮಯ ಬಂದಿದೆ ಎಂದು ಅವರು ಹೇಳಿದರು.</p><p>ಈಗ ತಿರುಗೇಟು ನೀಡುವ ಸಮಯ ಬಂದಿದೆ. ನಾವೆಲ್ಲ ನಿಮ್ಮ ಜೊತೆ ಇದ್ದೇವೆ. 140 ಕೋಟಿ ಭಾರತೀಯರು ನಿಮ್ಮ ಜೊತೆ ಇದ್ದಾರೆ. ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಲು ನೀವು ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲ ಇದೆ ಎಂದು ಅವರು ಹೇಳಿದರು.</p><p>ಯಾರೇ ಆದರೂ ರಾಜಕೀಯ ಮಾಡುವ ಸಮಯ ಇದಲ್ಲ. ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದವರಿಗೆ ಯಾವ ಶಿಕ್ಷೆ ಕೊಟ್ಟರೂ ಕಡಿಮೆಯೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p><p>ಪ್ರತಿಭಟನೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ, ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p><p>ಪಹಲ್ಗಾಮ್ನಲ್ಲಿ ಉಗ್ರರು ಪ್ರವಾಸಿಗರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾಶ್ಮೀರದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.</p>.ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡದ ಕೋಚ್ ಗಂಭೀರ್ಗೆ ಕೊಲೆ ಬೆದರಿಕೆ.ಪಹಲ್ಗಾಮ್ ಭಯೋತ್ಪಾದಕ ದಾಳಿ: ನವವಿವಾಹಿತ ನೌಕಾಪಡೆ ಅಧಿಕಾರಿ ಹುತಾತ್ಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>