<p><strong>ಮುಂಬೈ:</strong> ಹುಸಿ ಭರವಸೆಗಳ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. </p>.<p>ಕಾಂಗ್ರೆಸ್ನ ಮಹಾರಾಷ್ಟ್ರ ರಾಜ್ಯ ಘಟಕ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ ಅವರು, ‘ಮೋದಿ ಗ್ಯಾರಂಟಿಯ ಬಗ್ಗೆ ಮಾತನಾಡುವ ಪ್ರಧಾನಿಯವರು ಬಿಜೆಪಿ ಗ್ಯಾರಂಟಿಯ ಬಗ್ಗೆ ಮಾತನಾಡುವುದಿಲ್ಲ. ಅವರೊಬ್ಬ ಸ್ವಾರ್ಥಿ' ಎಂದು ಟೀಕಿಸಿದರು. </p>.<p>‘ಕಳೆದ 10 ವರ್ಷಗಳಲ್ಲಿ ಅವರ ಹುಸಿ ಭರವಸೆಗಳನ್ನು ಕೇಳಿದ್ದೇವೆ. ಅವರು ಕಪ್ಪುಹಣ ಹಿಂದೆ ತರುವ ಮತ್ತು ಪ್ರತಿಯೊಬ್ಬ ಭಾರತೀಯನ ಖಾತೆಗೆ ₹15 ಲಕ್ಷ ಜಮೆ ಮಾಡುವ ಭರವಸೆ ನೀಡಿದ್ದರು. ನಿಮ್ಮ ಖಾತೆಗೆ ಹಣ ಬಂದಿದೆಯೇ? ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು. ಇದು ಈಡೇರಿದೆಯೇ? ಎಂದು ಪ್ರಶ್ನಿಸಿದರು.</p>.<p>‘ನಮ್ಮ ಹೋರಾಟ ದೊಡ್ಡ ಪ್ರಮಾಣದಲ್ಲಿದೆ. ನಾವೆಲ್ಲರೂ ಒಟ್ಟಾಗಿ ಬಿಜೆಪಿ, ಮೋದಿ ಮತ್ತು ಇ.ಡಿ, ಸಿ.ಬಿ.ಐ, ಐ.ಟಿ, ಸಿವಿಸಿ ಸಂಸ್ಥೆಗಳ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವುದು ಬಹುದೊಡ್ಡ ಸವಾಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಹುಸಿ ಭರವಸೆಗಳ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. </p>.<p>ಕಾಂಗ್ರೆಸ್ನ ಮಹಾರಾಷ್ಟ್ರ ರಾಜ್ಯ ಘಟಕ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ ಅವರು, ‘ಮೋದಿ ಗ್ಯಾರಂಟಿಯ ಬಗ್ಗೆ ಮಾತನಾಡುವ ಪ್ರಧಾನಿಯವರು ಬಿಜೆಪಿ ಗ್ಯಾರಂಟಿಯ ಬಗ್ಗೆ ಮಾತನಾಡುವುದಿಲ್ಲ. ಅವರೊಬ್ಬ ಸ್ವಾರ್ಥಿ' ಎಂದು ಟೀಕಿಸಿದರು. </p>.<p>‘ಕಳೆದ 10 ವರ್ಷಗಳಲ್ಲಿ ಅವರ ಹುಸಿ ಭರವಸೆಗಳನ್ನು ಕೇಳಿದ್ದೇವೆ. ಅವರು ಕಪ್ಪುಹಣ ಹಿಂದೆ ತರುವ ಮತ್ತು ಪ್ರತಿಯೊಬ್ಬ ಭಾರತೀಯನ ಖಾತೆಗೆ ₹15 ಲಕ್ಷ ಜಮೆ ಮಾಡುವ ಭರವಸೆ ನೀಡಿದ್ದರು. ನಿಮ್ಮ ಖಾತೆಗೆ ಹಣ ಬಂದಿದೆಯೇ? ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು. ಇದು ಈಡೇರಿದೆಯೇ? ಎಂದು ಪ್ರಶ್ನಿಸಿದರು.</p>.<p>‘ನಮ್ಮ ಹೋರಾಟ ದೊಡ್ಡ ಪ್ರಮಾಣದಲ್ಲಿದೆ. ನಾವೆಲ್ಲರೂ ಒಟ್ಟಾಗಿ ಬಿಜೆಪಿ, ಮೋದಿ ಮತ್ತು ಇ.ಡಿ, ಸಿ.ಬಿ.ಐ, ಐ.ಟಿ, ಸಿವಿಸಿ ಸಂಸ್ಥೆಗಳ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವುದು ಬಹುದೊಡ್ಡ ಸವಾಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>